Subscribe to Updates

    Get the latest creative news from FooBar about art, design and business.

    What's Hot

    ‘ವಿಭಾ’ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    June 3, 2025

    ಕ.ಸಾ.ಪ.ದ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಜಯಂತ್ಯುತ್ಸವ ಮತ್ತು ದತ್ತಿ ಪುರಸ್ಕಾರ

    June 3, 2025

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಭವನದ ಕೊಡಗು ಘಟಕ ಉದ್ಘಾಟನೆ
    Kannada

    ಕನ್ನಡ ಭವನದ ಕೊಡಗು ಘಟಕ ಉದ್ಘಾಟನೆ

    March 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೊಡಗು ಜಿಲ್ಲಾ ಘಟಕ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭವು ದಿನಾಂಕ 23 ಮಾರ್ಚ್ 2025ರ ಭಾನುವಾರದಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು. ಘಟಕವನ್ನು ಕಾಸರಗೋಡಿನ ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಿದರು.

    ಸಭೆಯ ಅಧ್ಯಕ್ಷತೆಯನ್ನು ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ವಹಿಸಿದ್ದರು. ಕರ್ನಾಟಕ ಜಾನಪದ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಬಿ. ಬಿ. ಅನಂತಶಯನ, ಹಿರಿಯ ಸಾಹಿತಿ ಭಾರದ್ವಾಜ ಕೆ. ಆನಂದತೀರ್ಥ, ಪ್ರಾಂಶುಪಾಲ ರಾಜೇಶ್ಚಂದ್ರ ಕೆ. ಪಿ. ಮುಖ್ಯ ಅತಿಥಿಗಳಾಗಿದ್ಧರು. ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾದ ಸಾಹಿತಿ ವಿರಾಜ್ ಅಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಅಜ್ಜಿಕುಟ್ಟೀರ ಭವ್ಯ ಬೋಪಣ್ಣ ಅವರ ‘ದೇವ ನೇರ ಬೀರ್ಯ’ ಹಾಗೂ ತೆನ್ನೀರಾ ಟೀನಾ ಚಂಗಪ್ಪ ಅವರ ‘ಮನದಾಳದ ಹೆಜ್ಜೆ’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಸಾಧಕರಿಗೆ 2025ರ ಸಾಲಿನ ಕನ್ನಡ ಪಯಸ್ವಿನಿ ಪ್ರಶಸ್ತಿ, ಭರವಸೆಯ ಬೆಳಕು ಪ್ರಶಸ್ತಿ ಹಾಗೂ ಕೊಡಗು ಜಿಲ್ಲಾ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಾಟಕ ಭಾರ್ಗವ ಕೆಂಪರಾಜು ಅವರನ್ನು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಮೈಸೂರು ಜಿಲ್ಲಾ ಸಂಚಾಲಕರನ್ನಾಗಿ ನೇಮಿಸಲಾಯಿತು. ಹಾಸನ ಜಿಲ್ಲೆಯ ಕನ್ನಡ ಭವನದ ಅಧ್ಯಕ್ಷರಾಗಿ ಡಾ. ಬಿ. ಹೇಮಂತ್ ಕುಮಾರ್ ಆಯ್ಕೆಯಾದರು. ಕೊಡಗು ಜಿಲ್ಲಾ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ರುಬೀನಾ ಎಂ. ಎ. ಸ್ವಾಗತಿಸಿ, ರಂಜಿತ್ ಜಯರಾಂ ಪ್ರಾರ್ಥಿಸಿ, ಹರ್ಷಿತಾ ಶೆಟ್ಟಿ ಮನವಳಿಕೆಗುತ್ತು ನಿರೂಪಿಸಿ, ಚಂದನ್ ನಂದರಬೆಟ್ಟು ವಂದಿಸಿದರು. ನಂತರ ಹಿರಿಯ ಸಾಹಿತಿ ನಾಗೇಶ್ ಕಾಲೂರು ಅವರ ಅಧ್ಯಕ್ಷತೆಯಲ್ಲಿ ಚುಟುಕು ಕವಿಗೋಷ್ಠಿ ನಡೆಯಿತು. ಕೊಡಗು ಜಿಲ್ಲೆಯ ಸುಮಾರು 35 ಮಂದಿ ಕವಿಗಳು ಭಾಗವಹಿಸಿದರು.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ಇವರಿಗೆ ಜ್ಞಾನಪೀಠ ಪ್ರಶಸ್ತಿ
    Next Article ಉಡುಪಿಯಲ್ಲಿ ಉದ್ಘಾಟನೆಗೊಂಡ ‘ಯಕ್ಷ ಶಿಕ್ಷಣ ಸನಿವಾಸ ಶಿಬಿರ– 2025’
    roovari

    Add Comment Cancel Reply


    Related Posts

    ‘ವಿಭಾ’ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    June 3, 2025

    ಕ.ಸಾ.ಪ.ದ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಜಯಂತ್ಯುತ್ಸವ ಮತ್ತು ದತ್ತಿ ಪುರಸ್ಕಾರ

    June 3, 2025

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.