Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉದ್ಘಾಟನೆಗೊಂಡ ಡಾ. ಪಿ. ದಯಾನಂದ ಪೈ ‘ಎಸ್‌. ಬಿ. ಎಫ್. ಯುವ ಮಹೋತ್ಸವ್-2025’
    Hindusthani Music

    ಉದ್ಘಾಟನೆಗೊಂಡ ಡಾ. ಪಿ. ದಯಾನಂದ ಪೈ ‘ಎಸ್‌. ಬಿ. ಎಫ್. ಯುವ ಮಹೋತ್ಸವ್-2025’

    February 11, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಸಂಗೀತ ಭಾರತಿ ಪ್ರತಿಷ್ಠಾನ ಆಯೋಜನೆಯ ರಾಷ್ಟ್ರಮಟ್ಟದ ಸಂಗೀತ ಸ್ಪರ್ಧೆ, ವಿಜೇತರಿಗೆ ಪುರಸ್ಕಾರ ಪ್ರದಾನ ಕಾರ್ಯಕ್ರಮ ‘ಡಾ. ಪಿ. ದಯಾನಂದ ಪೈ ‘ಎಸ್‌. ಬಿ. ಎಫ್. ಯುವ ಮಹೋತ್ಸವ್-2025’ಇದರ ಉದ್ಘಾಟನಾ ಸಮಾರಂಭವು ದಿನಾಂಕ 08 ಫೆಬ್ರವರಿ 2025ರ ಶನಿವಾರದಂದು ಮಂಗಳೂರಿನ ಡಾನ್‌ಬಾಸ್ಕೊ ಸಭಾಂಗಣದಲ್ಲಿ sನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಪದ್ಮಶ್ರೀ ಪುರಸ್ಕೃತ ಹಿರಿಯ ಬಾನ್ಸುರಿ ಕಲಾವಿದ ಪಂ. ರೋನು ಮುಜುಂದಾರ್ ಮಾತನಾಡಿ “ಯುವಜನರಲ್ಲಿ ಹಿಂದುಸ್ತಾನಿ ಶಾಸೀಯ ಸಂಗೀತವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಸಂಗೀತ ಭಾರತಿ ಫೌಂಡೇಶನ್ ಮಂಗಳೂರಿನಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆ ಆಯೋಜಿಸಿರುವುದು ಶ್ಲಾಘನೀಯ. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಯುವ ಕಲಾವಿದರು ಉತ್ತಮ ಪ್ರದರ್ಶನ ನೀಡಿರುವುದು ಸಂತಸ ತಂದಿದೆ.” ಎಂದರು.

    ಸಂಗೀತ ಭಾರತಿ ಪ್ರತಿಷ್ಠಾನ ಅಧ್ಯಕ್ಷ ಉಸ್ತಾದ್ ರಫೀಕ್ ಖಾನ್, ಉಪಾಧ್ಯಕ್ಷರಾದ ಪ್ರೊ. ನರೇಂದ್ರ ಎಲ್. ನಾಯಕ್, ಅಂತಾರಾಷ್ಟ್ರೀಯ ಕಲಾವಿದರಾದ ಪಂ. ಜಯತೀರ್ಥ ಮೇವುಂಡಿ, ಯುವ ತಬ್ಲಾ ವಾದಕ ಪಂ. ಯಶವಂತ್ ವೈಷ್ಣವ್, ವಿದುಷಿ ಪೂರ್ಣಿಮಾ ಭಟ್ ಕುಲಕರ್ಣಿ, ಡಾ. ಶಶಾಂಕ್ ಮಕ್ತೇದಾರ್, ಉಜ್ಜೈನ್ ಸ್ಮಾಲ್ ಫೈನಾನ್ಸ್‌ ಇದರ ಸೀನಿಯರ್ ಬ್ರಾಂಚ್ ಮ್ಯಾನೇಜರ್ ಕರೋಲ್ ಲೈಡಿಯಾ ಪಿಂಟೋ, ಬ್ಯಾಂಕ್ ಆಫ್ ಮಹಾರಾಷ್ಟ್ರದ ಹೌಸಿಂಗ್ ಫಿನಾನ್ಸ್ ಇದರ ಬ್ರಾಂಚ್‌ ಚೀಫ್ ಮ್ಯಾನೇಜರ್ ಅಭಿನವ ಕುಮಾರ್ ಶ್ರೀವಾಸ್ತವ, ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಂಗಳೂರು ಬ್ರಾಂಚ್ ಸೀನಿಯರ್ ಮ್ಯಾನೇಜರ್ ಮಹೇಶ್ ಎಂ.ನಾಯರ್, ಸಂಗೀತ ಭಾರತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಉಷಾಪ್ರಭಾ ಎನ್. ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

    ಸಂಗೀತ ಭಾರತಿ ಪ್ರತಿಷ್ಠಾನದ ಟ್ರಸ್ಟಿ ಅಂಕುಶ್ ಎನ್. ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಹಿರಿಯ ಉಪನ್ಯಾಸಕಿ ಉಜ್ವಲ್ ಪ್ರದೀಪ್ ಕಾರ್ಯಕ್ರಮ ನಿರೂಪಿಸಿ, ಸಂಗೀತ ಭಾರತಿ ಪ್ರತಿಷ್ಠಾನದ ಖಜಾಂಚಿ ಕರುಣಾಕರ ಬಳ್ಕೂರು, ಟ್ರಸ್ಟಿಗಳಾದ ಮುರುಳೀಧರ ಜಿ. ಶೆಣೈ, ಡಾ. ರಮೇಶ್ ಕೆ. ಜಿ. ಮೊದಲಾದವರು ಸಹಕರಿಸಿದರು.

    ನೋಂದಾಯಿತ ಸ್ಪರ್ಧಿಗಳ ಪೈಕಿ ಕೊನೆಯ ಸುತ್ತಿಗೆ ಆನ್‌ಲೈನ್‌ನಲ್ಲಿ ಆಯ್ಕೆ ಮಾಡಲಾಗಿದ್ದ 18 ರಿಂದ 30 ವರ್ಷದೊಳಗಿನ 24 ಕಲಾವಿದರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದೇಶದ ವಿವಿಧೆಡೆಗಳಿಂದ ಆಗಮಿಸಿದ್ದ ಪ್ರತಿಭಾವಂತ ಕಲಾವಿದರು ಪರಸ್ಪರ ಪೈಪೋಟಿಯ ಕಲಾಪ್ರದರ್ಶನ ನೀಡಿದರು. ವಾದ್ಯ ವಾದನ (ತಬ್ಲಾ ಮತ್ತು ಪಕವಾಜ್ ಹೊರತುಪಡಿಸಿ) ಹಾಗೂ ಹಾಡುಗಾರಿಕೆ ವಿಭಾಗದಲ್ಲಿ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ನಡೆಸಲಾಯಿತು.

    Classical Music Music musical instrument
    Share. Facebook Twitter Pinterest LinkedIn Tumblr WhatsApp Email
    Previous Articleಪಾಂಡೇಶ್ವರದ ಗುರು ನರಸಿಂಹ ಸಭಾಭವನದಲ್ಲಿ ‘ಭರತನಾಟ್ಯ ಸಂಭ್ರಮ’
    Next Article ನಾಟಕ ವಿಮರ್ಶೆ | ವರ್ಣರಂಜಿತ ಜಾನಪದ ಫ್ಯಾಂಟಸಿ ನಾಟಕ ‘ಜಸ್ಮಾ ಓಡನ್’
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026

    ಪುತ್ತೂರಿನಲ್ಲಿ ‘ಕುಮಾರವ್ಯಾಸ ಜಯಂತಿ’ ಆಚರಣೆಯ ಪ್ರಯುಕ್ತ ಗಮಕ ವಾಚನ- ವ್ಯಾಖ್ಯಾನ

    January 12, 2026

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.