Subscribe to Updates

    Get the latest creative news from FooBar about art, design and business.

    What's Hot

    ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ | ಜುಲೈ 26

    July 23, 2025

    ‘ಕಾವ್ಯ ಸಂಸ್ಕೃತಿ ಯಾನ’ ಬಹುಭಾಷೆಗಳ ಗಡಿನಾಡು ಕಾಸರಗೋಡಿನಲ್ಲಿ ಜನರೆಡೆಗೆ ಕಾವ್ಯ ಹನ್ನೊಂದನೆಯ ಕವಿಗೋಷ್ಠಿ | ಜುಲೈ 27

    July 23, 2025

    ಪರಿಚಯ | ಬಣ್ಣದ ಭರವಸೆ – ಮುಖೇಶ್ ದೇವಧರ್ ನಿಡ್ಲೆ

    July 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಾಂಗಣದಲ್ಲಿ ಉದ್ಘಾಟನೆಗೊಂಡ `ಕಾಜಳ್’ ದಶ ದಿನಗಳ ಮಕ್ಕಳ ಶಿಬಿರ
    Camp

    ಕಲಾಂಗಣದಲ್ಲಿ ಉದ್ಘಾಟನೆಗೊಂಡ `ಕಾಜಳ್’ ದಶ ದಿನಗಳ ಮಕ್ಕಳ ಶಿಬಿರ

    April 26, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಮಾಂಡ್ ಸೊಭಾಣ್ ಸಂಸ್ಥೆ ಆಯೋಜಿಸಿದ ದಶದಿನಗಳ ‘ಕಾಜಳ್’ (ಕಣ್ಣ ಕಾಡಿಗೆ) ಮಕ್ಕಳ ರಜಾ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 25 ಏಪ್ರಿಲ್ 2025 ರಂದು ನಡೆಯಿತು.

    ಶಿಬಿರವನ್ನು ಓರ್ವ ಶಿಬಿರಾರ್ಥಿಯ ಕಣ್ಣಿಗೆ ಕಾಡಿಗೆ ಹಚ್ಚುವ ಮುಖಾಂತರ ಉದ್ಘಾಟಿಸಿದ ಕುಲಶೇಖರ ಚರ್ಚಿನ ಉಪಾಧ್ಯಕ್ಷೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಸಿಲ್ವಿಯಾ ರೂತ್ ಕ್ಯಾಸ್ತೆಲಿನೊ ಮಾತನಾಡಿ “ಮಕ್ಕಳ ಪ್ರತಿಭೆಗಳನ್ನು ಬೆಳಕಿಗೆ ತರಲು ಮಾಂಡ್ ಸೊಭಾಣ್ ಸಂಸ್ಥೆ ನಿರಂತರ ಪ್ರಯತ್ನ ಮಾಡುತ್ತಿದೆ. ಅವರ ಪ್ರಯತ್ನಗಳ ಫಲವಾಗಿ ಕೊಂಕಣಿ ಸಂಸ್ಕೃತಿ ಕ್ಷೇತ್ರದಲ್ಲಿ ಹಲವಾರು ಯುವ ಪ್ರತಿಭೆಗಳು ಬೆಳಕಿಗೆ ಬಂದಿವೆ. ನೀವೂ ಶ್ರಮಪಟ್ಟರೆ ಯಶಸ್ಸು ಸಾಧ್ಯ’’ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗಾಗಿ ತಯಾರಿಸಿದ ಪ್ರಾಥಮಿಕ ಹಂತದ ಪಠ್ಯ ಪುಸ್ತಕ `ಆಮಿ ಕೊಂಕ್ಣಿ ಶಿಕುಂಯಾ’ ಅನ್ನು ಲೋಕಾರ್ಪಣೆಗೊಳಿಸಿದರು. ಗೌರವ ಅತಿಥಿ ಎರಿಕ್ ಡಿ’ಸೋಜ ಪಠ್ಯ ಪುಸ್ತಕ ಸಮಿತಿ ಸದಸ್ಯರಿಗೆ ಗೌರವ ಪ್ರತಿ ನೀಡಿದರು.

    ಶಿಬಿರದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೆಂಗಳೂರಿನ 61 ಮಕ್ಕಳು ಗಾಯನ, ನೃತ್ಯ ಹಾಗೂ ನಾಟಕದ ತಮ್ಮ ಆಯ್ಕೆಯ ವಿಭಾಗದಲ್ಲಿ ವಿಶೇಷ ತರಬೇತಿ ಪಡೆಯುವರು. ಎಲ್ಲಾ ಮಕ್ಕಳಿಗೆ ಕೊಂಕಣಿ ಭಾಷೆ, ಭಾಷಣ, ಕಾರ್ಯಕ್ರಮ ನಿರೂಪಣೆಯ ತರಬೇತಿಯು ದೊರೆಯಲಿದೆ. 04 ಮೇ 2025ರಂದು ನಡೆಯುವ 281ನೇ ತಿಂಗಳ ವೇದಿಕೆ ಕಾರ್ಯಕ್ರಮದಲ್ಲಿ ಈ ಶಿಬಿರಾರ್ಥಿಗಳು ಪ್ರದರ್ಶನ ನೀಡುವರು.
    ವೇದಿಕೆಯಲ್ಲಿ ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ ಹಾಗೂ ಕೇರನ್ ಮಾಡ್ತಾ ಉಪಸ್ಥಿತರಿದ್ದರು. ಶಿಬಿರದ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಲಾಯಿತು. ಅರುಣ್ ರಾಜ್ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

    baikady camp dance drama roovari
    Share. Facebook Twitter Pinterest LinkedIn Tumblr WhatsApp Email
    Previous Articleರವೀಂದ್ರ ಕಲಾಕ್ಷೇತ್ರದ ಪಡಸಾಲೆ ಆರ್ಟ್ ಗ್ಯಾಲರಿಯಲ್ಲಿ ವಿಶ್ವ ಕಲಾ ದಿನದ ಅರಿವು
    Next Article ಯಕ್ಷಗಾನ ಕೇಂದ್ರ ಇಂದ್ರಾಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ | ಮೇ10
    roovari

    Add Comment Cancel Reply


    Related Posts

    ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ | ಜುಲೈ 26

    July 23, 2025

    ‘ಕಾವ್ಯ ಸಂಸ್ಕೃತಿ ಯಾನ’ ಬಹುಭಾಷೆಗಳ ಗಡಿನಾಡು ಕಾಸರಗೋಡಿನಲ್ಲಿ ಜನರೆಡೆಗೆ ಕಾವ್ಯ ಹನ್ನೊಂದನೆಯ ಕವಿಗೋಷ್ಠಿ | ಜುಲೈ 27

    July 23, 2025

    ಪರಿಚಯ | ಬಣ್ಣದ ಭರವಸೆ – ಮುಖೇಶ್ ದೇವಧರ್ ನಿಡ್ಲೆ

    July 23, 2025

    ಕೇರಳ – ಕರ್ನಾಟಕ ಕನ್ನಡ ನುಡಿ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ

    July 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.