Subscribe to Updates

    Get the latest creative news from FooBar about art, design and business.

    What's Hot

    ಪ್ರೊ. ಕಿ.ರಂ. ನಾಗರಾಜ ನೆನಪಿನ ‘ಕಾಡುವ ಕಿರಂ’ ಅಹೋರಾತ್ರಿ ಕಾರ್ಯಕ್ರಮ | ಆಗಸ್ಟ್ 07

    August 6, 2025

    ಮಡಿಕೇರಿಯಲ್ಲಿ ಸುಗಮ ಸಂಗೀತ ಕಲಾ ತರಬೇತಿ ಶಿಬಿರ ಉದ್ಘಾಟನೆ

    August 6, 2025

    ಕೊಡವೂರಿನಲ್ಲಿ ‘ಧೀಂಕಿಟ ಯಕ್ಷಗಾನ ಹೆಜ್ಜೆ’ ತರಬೇತಿ ಶಿಬಿರ

    August 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಘಾಟನೆಗೊಂಡ ಸಾಹಿತ್ಯ ಸಂಘ
    Literature

    ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉದ್ಘಾಟನೆಗೊಂಡ ಸಾಹಿತ್ಯ ಸಂಘ

    August 6, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಸಾಹಿತ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನಾ ಸಮಾರಂಭವು ದಿನಾಂಕ 05 ಆಗಸ್ಟ್ 2025ರಂದು ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ಮಹಾವಿದ್ಯಾಲಯದ ಕನ್ನಡ ಭಾಷಾ ವಿಭಾಗದ ಪ್ರಾಧ್ಯಾಪಕರಾದ ಡಾ. ಗೀತಾಕುಮಾರಿ ಟಿ. ಮಾತನಾಡಿ “ಸಾಹಿತ್ಯವು ಜೀವನ ಮೌಲ್ಯವನ್ನು ರೂಪಿಸುವಂತಹ ಒಂದು ಕಲೆ. ಅದು ಬದುಕಿಗೆ ಭರವಸೆಯನ್ನು ನೀಡಿ ಒಂದು ವಿಶಿಷ್ಟ ವ್ಯಕ್ತಿತ್ವವನ್ನು ಕಟ್ಟಿಕೊಡುವುದರ ಮೂಲಕ ಮಹತ್ತರವಾದ ಸ್ಥಾನವನ್ನು ವಹಿಸುತ್ತದೆ. ಸಾಹಿತ್ಯದ ಓದು ಅರಿವಿನ ವಿಸ್ತಾರದ ಜೊತೆಗೆ ಸಮಾಜವನ್ನು ವೀಕ್ಷಿಸುವ ಹೊಸ ದೃಷ್ಟಿಕೋನವನ್ನು ನೀಡುತ್ತದೆ ” ಎಂದರು.
    ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ. ಎಂ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದ ವೇದಿಕೆಯಲ್ಲಿ ಸಾಹಿತ್ಯ ಸಂಘದ ಸಂಯೋಜಕರಾದ ರತ್ನಾವತಿ ಬಿ. ಉಪಸ್ಥಿತರಿದ್ದರು. ಕಲಾ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸಾಮಾಜಿಕ ವಸ್ತುವನ್ನೊಳಗೊಂಡ ಪ್ರಹಸನವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಮೋಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿ, ಅಕ್ಷಿತಾ ಸ್ವಾಗತಿಸಿ, ಅರ್ಪಿತಾ ವಂದಿಸಿದರು.

     

     

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಮನದಾಳದಲ್ಲಿ ಮಿನುಗುತ್ತಿರುವ ತಾರೆ ಸುನಂದಾ ಬೆಳಗಾಂವಕರ
    Next Article ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿಯಾಗಿ ಸರ್ದಾರ್ ಮನ್ ಪ್ರಿತ್ ಸಿಂಗ್ ನಾಮ ನಿರ್ದೇಶನ
    roovari

    Add Comment Cancel Reply


    Related Posts

    ಪ್ರೊ. ಕಿ.ರಂ. ನಾಗರಾಜ ನೆನಪಿನ ‘ಕಾಡುವ ಕಿರಂ’ ಅಹೋರಾತ್ರಿ ಕಾರ್ಯಕ್ರಮ | ಆಗಸ್ಟ್ 07

    August 6, 2025

    ಮಡಿಕೇರಿಯಲ್ಲಿ ಸುಗಮ ಸಂಗೀತ ಕಲಾ ತರಬೇತಿ ಶಿಬಿರ ಉದ್ಘಾಟನೆ

    August 6, 2025

    ಕೊಡವೂರಿನಲ್ಲಿ ‘ಧೀಂಕಿಟ ಯಕ್ಷಗಾನ ಹೆಜ್ಜೆ’ ತರಬೇತಿ ಶಿಬಿರ

    August 6, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿಯಾಗಿ ಸರ್ದಾರ್ ಮನ್ ಪ್ರಿತ್ ಸಿಂಗ್ ನಾಮ ನಿರ್ದೇಶನ

    August 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.