Subscribe to Updates

    Get the latest creative news from FooBar about art, design and business.

    What's Hot

    ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’

    June 14, 2025

    ಬೆಂಗಳೂರಿನಲ್ಲಿ ರಾಜ್ಯಮಟ್ಟದ ‘ಕನ್ನಡ ಜಾನಪದ ಸಮ್ಮೇಳನ’ದಲ್ಲಿ ಜಾನಪದ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 25

    June 14, 2025

    ಕರುನಾಡಿನ ಹದಿನೈದು ವೀರ ವನಿತೆಯರ ಬಗ್ಗೆ ಕವನ ಆಹ್ವಾನ | ಕೊನೆಯ ದಿನಾಂಕ ಜುಲೈ 15

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉದ್ಘಾಟನೆಗೊಂಡ 7ನೇ ವರ್ಷದ ಮಂಗಳೂರು ಸಾಹಿತ್ಯ ಉತ್ಸವ
    Literature

    ಉದ್ಘಾಟನೆಗೊಂಡ 7ನೇ ವರ್ಷದ ಮಂಗಳೂರು ಸಾಹಿತ್ಯ ಉತ್ಸವ

    January 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: 7ನೇ ವರ್ಷದ ಮಂಗಳೂರು ಸಾಹಿತ್ಯ ಉತ್ಸವದ ಉದ್ಘಾಟನಾ ಕಾರ್ಯಕ್ರಮವನ್ನು ಮಂಗಳೂರಿನ ಟಿ.ಎಂ.ಎ. ಪೈ ಸಭಾಂಗಣದಲ್ಲಿ ದಿನಾಂಕ 11 ಜನವರಿ 2024ರಂದು ವಿಜೃಂಭಣೆಯಿದ ನಡೆಸಲಾಯಿತು.
    ಈ ಕಾರ್ಯಕ್ರಮದಲ್ಲಿ ಖ್ಯಾತ ಲೇಖಕ ಎಸ್.ಎಲ್. ಭೈರಪ್ಪ ಮತ್ತು ಮಿಥಿಕ್ ಸೊಸೈಟಿಯ ಗೌರವ ಕಾರ್ಯದರ್ಶಿ ಡಾ. ರವಿ ಮುಖ್ಯ ಅತಿಥಿಗಳಾಗಿ ವೇದಿಕೆಯನ್ನು ಅಲಂಕರಿಸಿದರು. ಭಾರತ್ ಫೌಂಡೇಶನ್ ಟ್ರಸ್ಟ್ ಇದರ ಪ್ರತಿನಿಧಿ ಸುನಿಲ್ ಕುಲ್ಕರ್ಣಿ ಸ್ವಾಗತ ಭಾಷಣ ನೆರವೇರಿಸಿದರು. ದೀಪ ಬೆಳಗುವ ಮೂಲಕ ಉತ್ಸವವನ್ನು ಪ್ರಾರಂಭಿಸಲಾಯಿತು.
    ಕಾರ್ಯಕ್ರಮದ ಅಂಗವಾಗಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದ ದಿವಂಗತ ನಾರ್ಬರ್ಟ್ ಡಿ’ಸೋಜ ಅವರಿಗೆ ನುಡಿನಮನ ಸಲ್ಲಿಸಲಾಯಿತು.

    ಎಸ್.ಎಲ್. ಭೈರಪ್ಪ ಅವರು 2007ರಲ್ಲಿ ಮೊದಲ ಬಾರಿಗೆ ಈ ಉತ್ಸವದಲ್ಲಿ ಭಾಗಿಯಾಗಿದ್ದ ನೆನಪಿನ ಕುರಿತಾಗಿ ಮಾತನಾಡುತ್ತಾ “ದಕ್ಷಿಣ ಕನ್ನಡ ಜಿಲ್ಲೆಯು ಎಲ್ಲಾ ಕ್ಷೇತ್ರಗಳಲ್ಲಿ ದೇಶಕ್ಕೆ ಮಾದರಿಯಾಗಿದೆ. ಉತ್ಸವದಲ್ಲಿ ದೇಶದಾದ್ಯಂತದ ಸಾಧಕರನ್ನು ಆಹ್ವಾನಿಸಿ, ವಿವಿಧ ವೇದಿಕೆಗಳ ಮೂಲಕ ಚರ್ಚೆಗಳನ್ನು ಏರ್ಪಡಿಸುತ್ತಿರುವುದು ಪ್ರಶಂಸನೀಯ. ಉತ್ಸವದಲ್ಲಿ ಚರ್ಚಿಸಲ್ಪಟ್ಟ ವಿಷಯಗಳು ಬೇಕಾದವರಿಗೆ ತಲುಪುತ್ತಿವೆಯೆ? ನೀವು ನಿರೀಕ್ಷಿಸಿರುವ ಪರಿಣಾಮ ಸಾಧಿಸುತ್ತಿದೆಯೆ?” ಎಂದು ಪ್ರಶಿಸಿದ ಇವರು. ಈ ಪ್ರಶ್ನೆಗಳಿಗೆ ಸಮರ್ಥ ಉತ್ತರ ನೀಡುವ ಆತ್ಮವಿಶ್ವಾಸ ಅತ್ಯಗತ್ಯ. ಆದರೆ ಮಂಗಳೂರು ಸಾಹಿತ್ಯ ಉತ್ಸವವು ಯಾಂತ್ರಿಕತೆಯೊಳಗೆ ಸಿಲುಕದೆ, ವರ್ಷದಿಂದ ವರ್ಷಕ್ಕೆ ಹೊಸತನವನ್ನು ಉಳಿಸಿಕೊಂಡು ತನ್ನ ಗುರಿಯನ್ನು ಸಾಧಿಸುತ್ತಿರುವುದು ಉತ್ತಮ ಬೆಳವಣಿಗೆ.” ಎಂದರು.ಡಾ. ರವಿ ಸಭಿಕರೊಂದಿಗೆ ತಮ್ಮ ಅನಿಸಿಕೆ ಹಂಚಿಕೊಂಡು ಮಂಗಳೂರು ಸಾಹಿತ್ಯ ಉತ್ಸವವನ್ನು ದೇಶದ ಇತರ ಸಾಹಿತ್ಯ ಉತ್ಸವಗಳಿಗಿಂತ ವಿಭಿನ್ನವಾಗಿ ಮಾಡಿರುವ ವಿಶೇಷತೆಯನ್ನು ಹೇಳಿದರು. ಈ ಉತ್ಸವದಲ್ಲಿ ಚರ್ಚೆಯಾಗುವ ವಿಚಾರಗಳು ಮುಂದಿನ ಪೀಳಿಗೆಯನ್ನು ಪ್ರಭಾವಿತಗೊಳಿಸಲು ಶಕ್ತವಾಗಿರುವಂತಹವು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

    Literature
    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ಕಿರುರಂಗಮಂದಿರದಲ್ಲಿ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಕನ್ನಡ ಹಾಸ್ಯ ನಾಟಕ | ಜನವರಿ 12
    Next Article ಪುಸ್ತಕ ವಿಮರ್ಶೆ | ತಯ್ಯುಳ್ಳತಿಲ್ ರಾಜನ್ ಇವರ ನಾಟಕ ಕೃತಿ ‘ನಿರ್ವಾಣಂ’
    roovari

    Add Comment Cancel Reply


    Related Posts

    ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’

    June 14, 2025

    ಕರುನಾಡಿನ ಹದಿನೈದು ವೀರ ವನಿತೆಯರ ಬಗ್ಗೆ ಕವನ ಆಹ್ವಾನ | ಕೊನೆಯ ದಿನಾಂಕ ಜುಲೈ 15

    June 14, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    ಯಕ್ಷಗಾನ ಗೊಂಬೆಯಾಟ ಕಲಾವಿದ ಪ್ರೊ. ಎ. ಶ್ರೀನಾಥ್ ಕಾಸರಗೋಡು ಇವರಿಗೆ ‘ಕಯ್ಯಾರ’ ಪ್ರಶಸ್ತಿ

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.