Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಪ್ರಗತಿಪರ ಚಿಂತಕ ಆರ್. ಎಸ್. ರಾಜಾರಾಮ್

    July 10, 2025

    ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆಯಲ್ಲಿ “ಉಲೂಪಿ ನಂದನ” ತಾಳಮದ್ದಳೆ | ಜುಲೈ 13

    July 10, 2025

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ʼಆಂಜೆಲ್-75ʼ ಕಾರ್ಯಕ್ರಮ

    July 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉದ್ಘಾಟಣೆಗೊಂಡ ಕೆಮ್ಮಾರ ಶ್ರೀ ಚೌಡೇಶ್ವರಿ ಕೃಪಾಪೋಷಿತ ಯಕ್ಷಗಾನ ಚಿಕ್ಕ ಮೇಳ
    Yakshagana

    ಉದ್ಘಾಟಣೆಗೊಂಡ ಕೆಮ್ಮಾರ ಶ್ರೀ ಚೌಡೇಶ್ವರಿ ಕೃಪಾಪೋಷಿತ ಯಕ್ಷಗಾನ ಚಿಕ್ಕ ಮೇಳ

    October 23, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕಡಬ: ಕೊಯಿಲ ಹಾಗೂ ಹಿರೆಬಂಡಾಡಿ ಗ್ರಾಮಗಳ ಗಡಿ ಭಾಗವಾದ ಕೆಮ್ಮಾರದಲ್ಲಿ ನೂತನವಾಗಿ ಪ್ರಾರಂಭವಾದ ಮನೆ ಮನೆ ತಿರುಗಾಟದ ಶ್ರೀ ಚೌಡೇಶ್ವರಿ ಕೃಪಾಪೋಷಿತ ಯಕ್ಷಗಾನ ಚಿಕ್ಕ ಮೇಳದ ಉದ್ಘಾಟನಾ ಸಮಾರಂಭವು ದಿನಾಂಕ 14 ಅಕ್ಟೋಬರ್ 2024ರಂದು ಕೆಮ್ಮಾರ ಶ್ರೀ ಚೌಡೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ದೇವಸ್ಥಾನದ ಅಭಿವೃದ್ಧಿಯ ದೃಷ್ಟಿಯಿಂದ ಪ್ರಾರಂಭಿಸಿದ ನಿಧಿ ಸಂಚಯನವನ್ನು ಉದ್ಘಾಟಿಸಿದ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ “ನಮ್ಮ ಜಿಲ್ಲೆಯ ಹೆಮ್ಮೆಯ ಕಲೆ ಯಕ್ಷಗಾನ ನಮ್ಮ ಧರ್ಮ ಹಾಗೂ ಸಂಸ್ಕೃತಿಯ ಉಳಿವಿಗೆ ಪೂರಕವಾಗಿದೆ. ಅನೇಕ ಪೌರಾಣಿಕ ವಿಚಾರಗಳು ಯಕ್ಷಗಾನ ಪ್ರದರ್ಶನಗಳಿಂದ ತಿಳಿಯುತ್ತದೆ. ಮುಂದಿನ ಪೀಳಿಗೆಗೆ ಧರ್ಮದ ಅರಿವು ಮೂಡಿಸುವ ಕಾರ್ಯ ಚಿಕ್ಕ ಮೇಳಗಳಿಂದ ನಡೆಯಬೇಕು.” ಎಂದರು. ಈ ಚಿಕ್ಕ ಮೇಳವನ್ನು ಉದ್ಘಾಟಿಸಿದ ತೆಂಕುತಿಟ್ಟಿನ ಖ್ಯಾತ ಭಾಗವತ ಆನೆಕಲ್ ಗಣಪತಿ ಭಟ್ ಶುಭಹಾರೈಸಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಅತಿಥಿ ಸ್ಥಾನದಿಂದ ಶುಭ ಹಾರೈಸಿದರು.
    ಗೋಕುಲನಗರ ‘ಯಕ್ಷನಂದನ’ ಕಲಾ ಸಂಘದ ಗೌರವಾಧ್ಯಕ್ಷರಾದ ಮುರಳೀ ಕೃಷ್ಣ ಭಟ್ ಬಡಿಲ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಚಿಕ್ಕ ಮೇಳದ ಮಾರ್ಗದರ್ಶಕ ಜಗನ್ನಾಥ ಕೆ., ಸಂಚಾಲಕ ಗಿರೀಶ್ ಆಚಾರ್ಯ, ಆತೂರು ಶ್ರೀಸದಾಶಿವ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಯದುಶ್ರೀ ಆನೆಗುಂಡಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ದೇವಾಲಯದ ಜೀರ್ಣೋದ್ಧಾರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರನ್ನು ಗೌರವಿಸಲಾಯಿತು.
     ಅನುವಂಶೀಯ ಮೊಕ್ತಸರ ಸಂಜೀವ ನೇಕಾರ ಬಡ್ಡಮೆ ಪ್ರಸ್ತಾವನೆಗೈದು, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವ ಪ್ರತಿನಿಧಿ ಮೋಹನ್‌ದಾಸ್ ಶೆಟ್ಟಿ ಬಡಿಲ ಸ್ವಾಗತಿಸಿ, ಪ್ರಕಾಶ್ ಕೆ. ಆರ್. ವಂದಿಸಿದರು. ಬಳಿಕ ಚಿಕ್ಕ ಮೇಳದ ಕಲಾವಿದರಿಂದ  ಕಿರು ಪ್ರಸಂಗವನ್ನು ಪ್ರದರ್ಶಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕನ್ನಡ ಯಕ್ಷಗಾನ ಬಯಲಾಟ | ಅಕ್ಟೋಬರ್ 26
    Next Article ಲೇಖನ – ಪರಂಪರೆ ಮೀರದ, ಶುದ್ಧ ಹಾಸ್ಯ ಪ್ರಸ್ತುತಿ ನೀಡಬಲ್ಲ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ
    roovari

    Add Comment Cancel Reply


    Related Posts

    ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆಯಲ್ಲಿ “ಉಲೂಪಿ ನಂದನ” ತಾಳಮದ್ದಳೆ | ಜುಲೈ 13

    July 10, 2025

    ಹರೇಕಳ ಶ್ರೀರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷದ್ರುವ ಯಕ್ಷ ಶಿಕ್ಷಣ

    July 10, 2025

    ಶ್ರೀ ಎಡನೀರು ಮಠದಲ್ಲಿ ‘ಕೃಷ್ಣ ಸಾರಥ್ಯ ಸ್ವೀಕಾರ’ ತಾಳಮದ್ದಳೆ | ಜುಲೈ 11

    July 10, 2025

    ಯಕ್ಷ ಮೇನಕಾ ಮೂಡುಬಿದಿರೆ ಇದರ 17ನೇ ವರ್ಷದ ಕಾರ್ಯಕ್ರಮ

    July 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.