Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ಪುಸ್ತಕ ವಿಮರ್ಶೆ – ಪೀಳಿಗೆಯ ಯೋಚನೆಗಳನ್ನು ಬದಲು ಮಾಡಬಲ್ಲ ಕೃತಿ – ‘ಮಾತು ಎಂಬ ವಿಸ್ಮಯ’

    July 15, 2025

    ನಟನದಲ್ಲಿ ‘ಸುಬ್ಬಣ್ಣ ಸ್ಮರಣೆ 2025’ | ಜುಲೈ 16

    July 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಉದ್ಘಾಟನೆಗೊಂಡ ರಾಜ್ಯ ಮಟ್ಟದ ನಾಟಕ ಸ್ಪರ್ಧೆ
    Competition

    ಉಡುಪಿಯಲ್ಲಿ ಉದ್ಘಾಟನೆಗೊಂಡ ರಾಜ್ಯ ಮಟ್ಟದ ನಾಟಕ ಸ್ಪರ್ಧೆ

    December 6, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ನಾಟಕಸ್ಪರ್ಧಾ ಸಮಿತಿ, ರಂಗಭೂಮಿ ಉಡುಪಿ ಇದರ 60ರ ಸಂಭ್ರಮದಲ್ಲಿ ದಿ. ಡಾ. ಟಿ. ಎಂ. ಎ. ಪೈ, ದಿ. ಎಸ್. ಎಲ್. ನಾರಾಯಣ ಭಟ್ ಮತ್ತು ಮಲ್ಪೆ ಮಧ್ವರಾಜ್ ಸ್ಮಾರಕ 45ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ -2024 ಇದರ ಉದ್ಘಾಟನಾ ಸಮಾರಂಭವು ದಿನಾಂಕ 04 ಡಿಸೆಂಬರ್ 2024ರಂದು ಉಡುಪಿಯ ಎಂ. ಜಿ. ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಹೆ ಸಹಕುಲಾಧಿಪತಿ ಡಾ. ಎಚ್. ಎಸ್.ಬಲ್ಲಾಳ್ ಮಾತನಾಡಿ ನಾಟಕ, ಯಕ್ಷಗಾನದಲ್ಲಿ ನಟಿಸುವುದು ಅಷ್ಟು ಸುಲಭವಲ್ಲ. ಸಿನೆಮಾದಂತೆ ಇಲ್ಲಿ ರೀ ಟೇಕ್ ಸಾಧ್ಯವಿಲ್ಲ. ನಾಟಕ ವೀಕ್ಷಣೆಗೆ ಪ್ರೇಕ್ಷಕರ ಕೊರತೆಯಿರುವುದು ಬೇಸರ ತರಿಸುತ್ತಿದೆ. ಜನರು ನಾಟಕ ವೀಕ್ಷಿಸಲು ಬಂದು ಪ್ರೇರೇಪಿಸಬೇಕು. ನಾಟಕ ಕಲೆ ಉಳಿಸಿ, ಬೆಳೆಸುವಲ್ಲಿ ನಾಟಕ ಕಲೆಗಾರರು ಮಾತ್ರ ಮುಖ್ಯವಾಗುವುದಿಲ್ಲ. ಪ್ರೇಕ್ಷಕ ವರ್ಗ ತುಂಬಾ ಪ್ರಾಮುಖ್ಯ ಪಡೆಯುತ್ತದೆ. ನಾವೆಲ್ಲರೂ ನಾಟಕ ಕಲೆ ಉಳಿಸುವಲ್ಲಿ ಕೈ ಜೋಡಿಸಬೇಕು.” ಎಂದರು.

    ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಮಾತನಾಡಿ “ರಂಗಭೂಮಿ ಜತೆಗೆ ಅವಿನಾಭವ ಸಂಬಂಧವಿರುವುದು ಖುಷಿ ನೀಡಿದೆ.” ಎಂದರು.ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಂ. ಜಿ. ಎಂ. ಕಾಲೇಜು ಇದರ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ್, ‘ರಂಗಭೂಮಿ ಉಡುಪಿ’ ಇದರ ಉಪಾಧ್ಯಕ್ಷರಾದ ರಾಜ್‌ ಗೋಪಾಲ್, ಭಾಸ್ಕರ ರಾವ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಉಪಸ್ಥಿತರಿದ್ದರು. ಕುತ್ಪಾಡಿ ಶ್ರೀಪಾದ ಹೆಗ್ಡೆ ಸ್ವಾಗತಿಸಿ, ರವಿರಾಜ್ ನಾಯಕ್ ನಿರೂಪಿಸಿ, ವಿವೇಕಾನಂದ ಎನ್‌. ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಜಾನಪದ ಕಲಾ ಪ್ರಾಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 08
    Next Article ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷಗುರುಗಳ ಸಮ್ಮಿಲನ’ | ಡಿಸೆಂಬರ್ 07
    roovari

    Add Comment Cancel Reply


    Related Posts

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ಅಭಿನಯ ತರಂಗ ವತಿಯಿಂದ ‘ಅಂತರಂಗದ ರಂಗ’ ಅಭಿನಯ ಶಿಬಿರ | ಆಗಸ್ಟ್ 01ರಿಂದ 15

    July 15, 2025

    ಆಯನ ನಾಟಕದ ಮನೆಯಿಂದ ‘ಅಶ್ವತ್ಥಾಮ not out’ ವಿಭಿನ್ನ ನಾಟಕ ಪ್ರದರ್ಶನ | ಜುಲೈ 18

    July 15, 2025

    ಬೆಂಗಳೂರಿನ ನಿಂಬೆಕಾಯಿಪುರದಲ್ಲಿ ಕಲಾರಸಿಕರನ್ನು ರಂಜಿಸಿದ ಎಲ್‌. ಎಸ್‌. ಡಿ. ನಾಟಕ

    July 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.