Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    “ಭಜನೆಯಿಂದ ಮನಶಾಂತಿ” – ಪ್ರಭಾಕರ್ ಜೀ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆ ಹಯಗ್ರೀವದಲ್ಲಿ ತೆಂಕುತಿಟ್ಟು ಭಾಗವತಿಕೆ ತರಗತಿ ಉದ್ಘಾಟನೆ
    Yakshagana

    ತೆಕ್ಕಟ್ಟೆ ಹಯಗ್ರೀವದಲ್ಲಿ ತೆಂಕುತಿಟ್ಟು ಭಾಗವತಿಕೆ ತರಗತಿ ಉದ್ಘಾಟನೆ

    January 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ‘ಸಿನ್ಸ್ 1999 ಶ್ವೇತಯಾನ-97’ ಕಾರ್ಯಕ್ರಮದಡಿಯಲ್ಲಿ ತೆಂಕು ತಿಟ್ಟು ಭಾಗವತಿಕೆ ತರಗತಿ ಉದ್ಘಾಟನಾ ಸಮಾರಂಭವು ದಿನಾಂಕ 11 ಜನವರಿ 2025ರಂದು ನಡೆಯಿತು. ಸಮಾರಂಭದಲ್ಲಿ ಭಾಗವತಿಕೆ ತರಗತಿಯನ್ನು ಉದ್ಘಾಟಿಸಿದ ಪ್ರಸಂಗಕರ್ತ ಪ್ರಸಾದ್ ಕುಮಾರ್ ಮೊಗೆಬೆಟ್ಟು ಮಾತನಾಡಿ “ಕರಾವಳಿಯ ಅಭಿಮಾನದ ಕಲಾಸಂಸ್ಥೆಯಾದ ಯಶಸ್ವೀ ಕಲಾವೃಂದದ ಆಶ್ರಯದಲ್ಲಿ ಇನ್ನು ಮುಂದೆ ಬಡಗಿನ ಹಿಮ್ಮೇಳದೊಂದಿಗೆ ತೆಂಕುತಿಟ್ಟು ಹಿಮ್ಮೇಳ ತರಗತಿಯೂ ನಡೆಯುತ್ತಿರುವುದು ಅತ್ಯಂತ ಸಂತಸ ತಂದಿದೆ. ತಾಳ ಮದ್ದಳೆಯೊಂದಿಗೆ ಜಾಗಟೆಯ ಮಧುರ ಮೈತ್ರಿ ಬಯಸುವ ಕಲಾಸಕ್ತರಿಗೆ ಬೆಳ್ಳಿ ಹಬ್ಬದ ಸಂಸ್ಥೆ ನೀಡಿದ ಚಿನ್ನದ ಅವಕಾಶವಿದು. ಒಂದೇ ಕಲಿಕಾ ಕೇಂದ್ರದಲ್ಲಿ ಯಕ್ಷಗಾನ ಕಲಾಮಾತೆಯ ಯುಗ್ಮ ನಯನಗಳಂತಿರುವ ಎರಡು ತಿಟ್ಟುಗಳ ಸಶಕ್ತ ಶಿಕ್ಷಣ ಸಿಗುವುದೆಂದರೆ ನಿಜಕ್ಕೂ ಕಲಾಭ್ಯಾಸಿಗಳ ಭಾಗ್ಯವೆನ್ನಬೇಕು. ಯಶಸ್ವೀ ಕಲಾವೃಂದದ ಕಲಾತ್ಮಕ ಯೋಚನೆಯ ಮಹತ್ವಪೂರ್ಣ ನಡೆಯಿದು. ತೆಂಕು ತಿಟ್ಟಿನ ಅಗ್ರಮಾನ್ಯ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರ ಗುರುತನದಲ್ಲಿ ತರಗತಿಗಳು ನಡೆಯುವ ಸಂಗತಿ ಪ್ರಶಂಸನೀಯ.” ಎಂದರು.

    ಮಾಂಬಾಡಿಯವರನ್ನು ಅಭಿನಂದಿಸಿದ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ಅನೇಕ ಪ್ರಸಿದ್ಧ ಭಾಗವತರ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್. ಲವಲವಿಕೆಯಿಂದ ಭಾಗವತಿಕೆಯ ಮೂಲ ಪಾಠವನ್ನು ಮಾಡುತ್ತಾ ಗಾನಾಮೃತದ ಮೂಲ ಸತ್ವವನ್ನು ವಿವರಿಸಿ ಪ್ರಸಿದ್ಧಿ ಹೊಂದಿದ ಭಾಗವತರು. 75ರ ಇಳಿ ವಯಸ್ಸಿನಲ್ಲಿಯೂ ಅನೇಕ ಶಿಷ್ಯರಿಗೆ ಶಿಕ್ಷಕನಾಗಿ ಮುಂದುವರಿಯುತ್ತಿರುವುದು ಶ್ಲಾಘನೀಯ. ಈ ಅನುಭವೀ ಹಿರಿಯರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಶ್ರೇಷ್ಠ ಪ್ರಶಸ್ತಿಯಾದ ‘ಪಾರ್ಥಿಸುಬ್ಬ ಪ್ರಶಸ್ತಿ’ ಲಭಿಸಿರುವುದು ಅನೇಕರ ಪ್ರಶಂಸೆಗೆ ಪಾತ್ರವಾಗಿದೆ ಹಾಗೂ ಅಕಾಡೆಮಿಯ ಪ್ರಶಸ್ತಿ ಗೌರವ ಇನ್ನಷ್ಟು ಹೆಚ್ಚಾಗಿದೆ.” ಎಂದರು.ಮಲ್ಯಾಡಿ ಸೀತಾರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುದರ್ಶನ ಉರಾಳ, ‘ಶ್ವೇತಯಾನ’ದ ಕಾರ್ಯಾಧ್ಯಕ್ಷ ಗೋಪಾಲ ಪೂಜಾರಿ ಕೊಮೆ, ಪವನ್ ಆಚಾರ್, ಕಾರ್ಯದರ್ಶಿ ವೆಂಕಟೇಶ ವೈದ್ಯ ಹಾಗೂ ಮೋಹನಚಂದ್ರ ಪಂಜಿಗಾರು ಉಪಸ್ಥಿತರಿದ್ದರು. ಗುರು ಲಂಬೋದರ ಹೆಗಡೆ ಪ್ರಾಸ್ತಾವಿಕ ಮಾತನಾಡಿ ಪೂಜಾ ಆಚಾರ್ ಹಾಗೂ ಪಂಚಮಿ ವೈದ್ಯ ಕಾರ್ಯಕ್ರಮ ನಿರೂಪಿಸಿದರು.

    yakshagana
    Share. Facebook Twitter Pinterest LinkedIn Tumblr WhatsApp Email
    Previous Articleಸಾಲಿಗ್ರಾಮದಲ್ಲಿ “ರಾಜ ದ್ರುಪದ” ಯಕ್ಷಗಾನ ಪ್ರದರ್ಶನ – ಜನವರಿ 17
    Next Article ವಿಶೇಷ ಲೇಖನ – ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ
    roovari

    Add Comment Cancel Reply


    Related Posts

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.