Subscribe to Updates

    Get the latest creative news from FooBar about art, design and business.

    What's Hot

    ಯಕ್ಷಗಾನ ವೃತ್ತಿ ಮೇಳದ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ | ಜುಲೈ 01

    June 7, 2025

    ಮೈಸೂರಿನ ರಂಗಯಾನ ಟ್ರಸ್ಟ್ ಸಂಸ್ಥೆಯಿಂದ ರಂಗಭೂಮಿ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

    June 7, 2025

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ ಜನ್ಮದಿನಾಚರಣೆ

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳಾದೇವಿ ದೇವಾಲಯದ ಆವರಣದಲ್ಲಿ ಉದ್ಘಾಟನೆಗೊಂಡ ‘ಯಕ್ಷ ತ್ರಿವೇಣಿ’
    Kannada

    ಮಂಗಳಾದೇವಿ ದೇವಾಲಯದ ಆವರಣದಲ್ಲಿ ಉದ್ಘಾಟನೆಗೊಂಡ ‘ಯಕ್ಷ ತ್ರಿವೇಣಿ’

    February 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಲೆವೂರಾಯ ಪ್ರತಿಷ್ಠಾನದ ಎಂಟನೇ ವರ್ಷದ ‘ಯಕ್ಷ ತ್ರಿವೇಣಿ’ ಇದರ ಉದ್ಘಾಟನಾ ಸಮಾರಂಭವು ದಿನಾಂಕ 22 ಫೆಬ್ರವರಿ 2025 ರಂದು ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ “ದೇಶದ ಹಲವಾರು ಕಲೆಗಳಲ್ಲಿ ಯಕ್ಷಗಾನವು ಅಗ್ರಸ್ಥಾನವನ್ನು ಪಡೆದಿದೆ. ನೃತ್ಯ, ಸಾಹಿತ್ಯ ಹಾಗೂ ಹಿಮ್ಮೇಳಗಳಿಂದ ಶ್ರೀಮಂತವಾಗಿರುವ ಈ ಕಲೆಯು ವಿಶ್ವದಲ್ಲಿಯೇ ಸಶಕ್ತ – ಸಧೃಡ ಕಲೆಯಾಗಿದೆ. ಬೇರೆ ರಾಜ್ಯಗಳಲ್ಲಿರುವ ಕಲೆಗಳೂ ಹೆಚ್ಚು ಹೆಚ್ಚಾಗಿ ಯಕ್ಷಗಾನಕ್ಕೆ ಸಮೀಪವೇ ಇವೆ. ರಾಜಕಲೆಯಾದ ಇದನ್ನು ರಾಜಾಶ್ರಯದಿಂದ ಬೆಳೆಸೋಣ” ಎಂದು ಹೇಳಿದರು.
    ಮಂಗಳಾದೇವಿ ದೇವಳದ ಮೊಕ್ತೇಸರರಾದ ಶ್ರೀ ಅರುಣ್ ಐತಾಳ್ ನಮ್ಮಂತಹಾ ದೇವಸ್ಥಾನಗಳಲ್ಲಿ ಇಂತಹಾ ಕಲಾಪ್ರಕಾರಗಳ ಪ್ರದರ್ಶನಕ್ಕೆ ಖಂಡಿತಾ ಅವಕಾಶವಿದೆ. ಅಲೆವೂರಾಯ ಸಹೋದರರ ಈ ಪ್ರಯತ್ನಕ್ಕೆ ಶುಭವಾಗಲಿ” ಎಂದು ಶುಭಾಸಂಶನೆಗೈದರು.

    ಅಲೆವೂರಾಯ ಪ್ರತಿಷ್ಠಾನದ ಪ್ರಶಸ್ತಿ ಸ್ವೀಕರಿಸದ ಉಪನ್ಯಾಸಕ, ಹಾಗೂ ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ ಶ್ರೀ ಸುಜಯೀಂದ್ರ ಹಂದೆ ಮಾತನಾಡಿ ’ನಮ್ಮ ಮಕ್ಕಳ ಮೇಳದಂತೆಯೇ ಇಲ್ಲಿಯೂ ಇದೆ. ಇದನ್ನು ನಾವು ದೇವರ ಕಲೆ ಎಂದು ಆರಾಧಿಸುತ್ತೇವೆ. ಹಾಗಾಗಿ ಈ ಸನ್ಮಾನ ನನಗೆ ದೊರೆತಿರುವುದು ತುಂಬಾ ಸಂತಸದ ವಿಷಯ” ಎಂದರು.

    ಕರ್ಣಾಟಕ ಬ್ಯಾಂಕ್ ಇದರ ನಿವೃತ್ತ ಉದ್ಯೋಗಿ ಶ್ರೀ ಜನಾರ್ಧನ ಹಂದೆ,ಉಪನ್ಯಾಸಕ ಶ್ರೀ ಬಾಲಕೃಷ್ಣ ಶೆಟ್ಟಿ, ಹಿಮ್ಮೇಳ ಕಲಾವಿದ ವೇಣುಗೋಪಾಲ ಮಾಂಬಾಡಿ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.
    ಪ್ರತಿಷ್ಠಾನದ ವಿಶ್ವಸ್ಥರಾದ ವರ್ಕಾಡಿ ರವಿ ಅಲೆವೂರಾಯ ಸ್ವಾಗತ ಹಾಗೂ ಪ್ರಸ್ತಾವನೆ ಮಾಡಿದರು. ನಿರೂಪಕ ಸುಧಾಕರ ರಾವ್ ಪೇಜಾವರ ನಿರೂಪಿಸಿ, ಮಧುಸೂದನ ಅಲೆವೂರಾಯ ವರ್ಕಾಡಿ ಧನ್ಯವಾದ ಸಮರ್ಪಿಸಿದರು. ಸಭಾ ಕಾರ್ಯಕ್ರಮದ  ಬಳಿಕ ‘ಭೂಭಾರ ಹರಣ’ ಯಕ್ಷಗಾನ ಬಯಲಾಟ ಜರಗಿತು.

    kannada yakshagana
    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ಎವರ್ಗ್ರೀನ್ ನಾಟಕವನ್ನು ಸಂಪೂರ್ಣ ಹೈಜಾಕ್ ಮಾಡಿದ ಬಡೇ ಮಿಯಾ…!
    Next Article ವಿಜ್ರಂಭಣೆಯಿಂದ ನಡೆದ ಪ್ರೊ. ಎಸ್. ವಿ. ಪರಮೇಶ್ವರ ಭಟ್ಟ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭ
    roovari

    Add Comment Cancel Reply


    Related Posts

    ಯಕ್ಷಗಾನ ವೃತ್ತಿ ಮೇಳದ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ | ಜುಲೈ 01

    June 7, 2025

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ ಜನ್ಮದಿನಾಚರಣೆ

    June 7, 2025

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.