Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಜನಾಡಿಯಲ್ಲಿ ಉದ್ಘಾಟನೆಗೊಂಡ ಯಕ್ಷಗಾನ ನಾಟ್ಯ ತರಗತಿ
    Yakshagana

    ಮಂಜನಾಡಿಯಲ್ಲಿ ಉದ್ಘಾಟನೆಗೊಂಡ ಯಕ್ಷಗಾನ ನಾಟ್ಯ ತರಗತಿ

    September 22, 2024Updated:September 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಣಾಜೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಶ್ರೀ ವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಟ್ರಸ್ಟ್ ಮಂಜನಾಡಿ ಇವರ ಆಶಯದಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಸಮಾರಂಭವು ದಿನಾಂಕ 16 ಸೆಪ್ಟೆಂಬರ್ 2024 ರಂದು ಮಂಜನಾಡಿಯ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಸ್ಥಾನದ ಆವರಣದಲ್ಲಿ ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಂ ಹರೇಕಳ ಮಾತನಾಡಿ “ಯಕ್ಷಗಾನವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ. ಇದರಿಂದ ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯಾಗುವುದು ಮಾತ್ರವಲ್ಲದೆ, ಮನರಂಜನೆಯೊಂದಿಗೆ ಸಂಸ್ಕಾರವನ್ನು ನೀಡುವ ಶ್ರೀಮಂತ ಕಲೆಯಾಗಿದೆ. ಈ ಕಲೆಯನ್ನು ವಿದ್ಯಾರ್ಥಿಗಳು ಎಳವೆಯಲ್ಲಿಯೇ ಮೈಗೂಡಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ಹೊಂದಲು ಸಾಧ್ಯ.” ಎಂದು ಅಭಿಪ್ರಾಯ ಪಟ್ಟರು.
    ನಾಟ್ಯ ತರಗತಿಯನ್ನು ಉದ್ಘಾಟಿಸಿದ ಕ್ಷೇತ್ರದ ಅರ್ಚಕರಾದ ರಾಘವೇಂದ್ರ ರಾವ್ ಮಂಜನಾಡಿ ಮಾತನಾಡಿ “ಕರಾವಳಿಯ ಗಂಡು ಕಲೆಯಾದ ಯಕ್ಷಗಾನದ ನಾಟ್ಯ ತರಬೇತಿಯನ್ನು ಹಮ್ಮಿಕೊಳ್ಳಲು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರು ಸಹಕರಿಸುತ್ತಿರುವುದು ಶ್ಲಾಘನೀಯ, ಇದನ್ನು ಈ ಪರಿಸರದ ಹೆಚ್ಚಿನ ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಳ್ಳಬೇಕು.” ಎಂದು ಕರೆಕೊಟ್ಟರು.

    ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿರುವ ಕೃಷ್ಣಪ್ಪ ಕಿನ್ಯಾ, ಗುರುರಾಜ್ ಭಟ್ ಕೈರಂಗಳ, ಸಮಾಜ ಸೇವಕರಾಗಿರುವ ಶ್ರೀಮತಿ ಗುಣವತಿ ಪಿ. ಸುಲಾಯ, ನಾಟ್ಯ ಗುರುಗಳಾದ ಜಗದೀಶ್ ಎಸ್. ಗಟ್ಟಿ ಉಚ್ಚಿಲ ಮುಂತಾದವರು ಉಪಸ್ಥಿತರಿದ್ದರು.
    ಪದಾಧಿಕಾರಿಗಳಾದ ವಿಜೇತ್ ಎಂ. ಶೆಟ್ಟಿ ಮಂಜನಾಡಿ ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಉದಯಕುಮಾರ್ ಅಂಚನ್ ಮಂಜನಾಡಿ ಪ್ರಸ್ತಾವನೆಯೊಂದಿಗೆ ನಿರೂಪಿಸಿದರು. ಸಮಾರಂಭಕ್ಕೆ ಶ್ರೀ ವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಟ್ರಸ್ಟ್ ಇದರ ಪದಾಧಿಕಾರಿಗಳು ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ‘ಸ್ವರ ಕುಡ್ಲ ಸೀಸನ್- 6’ ಸಂಗೀತ ಸ್ಪರ್ಧೆ
    Next Article ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಗೆ ಅರ್ಜಿ ಆಹ್ವಾನ | ಅಕ್ಟೋಬರ್ 15
    roovari

    Comments are closed.

    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    ಪರಿಚಯ ಲೇಖನ | ‘ಬೆಳೆಯುವ ಯಕ್ಷಸಿರಿ’ ಸಚಿನ್ ಶೆಟ್ಟಿ ನಾಗರಕೊಡಿಗೆ

    May 6, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.