Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಟ್ಯಾರಾಧನಾ ಕಲಾ ಕೇಂದ್ರಕ್ಕೆ ತ್ರಿಂಶೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭ | ಜನವರಿ 18ರಂದು
    Bharathanatya

    ನಾಟ್ಯಾರಾಧನಾ ಕಲಾ ಕೇಂದ್ರಕ್ಕೆ ತ್ರಿಂಶೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭ | ಜನವರಿ 18ರಂದು

    January 17, 20241 Comment1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಭರತನಾಟ್ಯ ಕಲೆಯನ್ನು ಅಕಾಡೆಮಿಕ್ ಆಗಿ ಬೋಧಿಸುತ್ತಿರುವ ಕಲಾ ಸಂಸ್ಥೆಗಳಲ್ಲಿ ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರ (ರಿ.) ಸಂಸ್ಥೆಯು ಪ್ರಮುಖವಾದದ್ದು. ಸಂಸ್ಥೆಯು 1994 ಸೆಪ್ಟೆಂಬರ್‌ 8ರಂದು ಸುರತ್ಕಲ್ ಕೆ.ಆರ್.ಇ.ಸಿ.ಯಲ್ಲಿ ಗುರು ವಿದುಷಿ ಸುಮಂಗಲಾ ರತ್ನಾಕರ್ ರಾವ್ ಅವರ ಕನಸಿನ ಕೂಸಾಗಿ ಆರಂಭವಾಗಿದ್ದು, ಇದೀಗ ನಾಟ್ಯಾರಾಧನಾಕ್ಕೆ 30ನೇ ವರ್ಷಾಚರಣೆಯ ಸಂಭ್ರಮದ ಹೊನಲು. ಈ ಹಿನ್ನೆಲೆಯಲ್ಲಿ ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿ ಮತ್ತು ತ್ರಿಂಶೋತ್ಸವ ವಿದ್ಯಾರ್ಥಿ ಸಮಿತಿಯ ಬೆಂಬಲದೊಂದಿಗೆ ದಿನಾಂಕ 18-01-2024 ಗುರುವಾರದಂದು ಸಂಜೆ 4.45ಕ್ಕೆ ಮಂಗಳೂರು ಪುರಭವನದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ‘ನಾಟ್ಯಾರಾಧನಾ ತ್ರಿಂಶೋತ್ಸವ’ ಸಂಭ್ರಮದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.

    ಶ್ರೀ ಎಡನೀರು ಮಠದ ಜಗದ್ಗುರು ಶ್ರೀಶಂಕರಾಚಾರ್ಯ ಸಂಸ್ಥಾನ ಇದರ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಭರತನಾಟ್ಯ ಗುರುಗಳೂ ವಿದ್ವಾಂಸರೂ ಆದ ಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್, ವಿ. ಚಂದ್ರಶೇಖರ ನಾವಡ ಸುರತ್ಕಲ್, ವಿ. ಶ್ರೀಮತಿ ಶಾರದಾಮಣಿ ಶೇಖರ್, ವಿ. ಗೀತಾ ಸರಳಾಯ ಕದ್ರಿ, ವಿ. ಕಾವ್ಯ ಭಟ್‌ ಪೆರ್ಲ ಇವರು ಮುಖ್ಯ ಅಭ್ಯಾಗತರಾಗಿ ಆಗಮಿಸಲಿದ್ದಾರೆ. ಖ್ಯಾತ ಜನಪದ ವಿದ್ವಾಂಸರು ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಡಾ. ಗಣೇಶ್ ಅಮೀನ್ ಸಂಕಮಾರ್ ಸಭಾಧ್ಯಕ್ಷತೆ ವಹಿಸಲಿದ್ದಾರೆ.

    ಅಂದು ಸಂಜೆ ಗಂಟೆ 5.30ರಿಂದ 7.30ರವರೆಗೆ ನಾಟ್ಯಾರಾಧನಾ ಕಲಾ ಕೇಂದ್ರದ ಅರಳು ಪ್ರತಿಭೆಗಳಾದ ವಿ. ಶೋಧನ್ ಕುಮಾರ್ ಬಿ, ವಿ. ಸತ್ಯನುಶ್ರೀ ಗುರುರಾಜ್, ಜಾಹ್ನವಿ ಶೆಟ್ಟಿ, ಸಾಧ್ವೀ ರಾವ್ ಟಿ., ವೃಂದಾ ಜಿ. ರಾವ್, ಸಮನ್ವಿತಾ ರಾವ್, ಧರಿತ್ರೀ ಭಿಡೆ, ತನ್ವಿ ಪಿ. ಬೋಳೂರು ಇವರಿಂದ ಗುರು ಸುಮಂಗಲಾ ರತ್ನಾಕರ್ ರಾವ್ ನಿರ್ದೇಶನದಲ್ಲಿ ‘ನೃತ್ಯ ವಂದನಾ’ ಕಾರ್ಯಕ್ರಮ ಜರುಗಲಿದೆ.

    ವರುಷ ಪೂರ್ತಿ ವೈವಿಧ್ಯಮಯ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ಮರಣೀಯವಾಗಿಸುವ ಹುಮ್ಮಸ್ಸಿನಲ್ಲಿರುವ ನಾಟ್ಯಾರಾಧನಾ ತ್ರಿಂಶೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಎಲ್ಲಾ ಕಲಾಭಿಮಾನಿಗಳಿಗೂ ಆತ್ಮೀಯ ಸ್ವಾಗತ.

    Share. Facebook Twitter Pinterest LinkedIn Tumblr WhatsApp Email
    Previous Articleಉರ್ದು ಕವಿ ಮುನಾವ್ವರ್ ರಾಣಾ ನಿಧನ
    Next Article ಜಿಲ್ಲಾ ಮಟ್ಟದ ಕವನ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 22
    roovari

    1 Comment

    1. Sumangala Rathnakar on January 17, 2024 11:27 pm

      Thank you for beautiful report Roovari 🙏

      Reply

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    ಯಶಸ್ವಿ ಕಲಾವೃಂದದಿಂದ ಗಾನ ಗಾರುಡಿಗ ದಿ. ಕಾಳಿಂಗ ನಾವಡರಿಗೆ ಗಾನ ನಮನ

    June 2, 2025

    1 Comment

    1. Sumangala Rathnakar on January 17, 2024 11:27 pm

      Thank you for beautiful report Roovari 🙏

      Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.