ಬೆಂಗಳೂರು : ಎಸ್.ಎಲ್. ಭೈರಪ್ಪ ಪ್ರತಿಷ್ಠಾನ (ರಿ.) ಇವರ ಉದ್ಘಾಟನಾ ಸಮಾರಂಭವನ್ನು ದಿನಾಂಕ 14 ಜೂನ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಬಸವನಗುಡಿ ರಸ್ತೆಯಲ್ಲಿರುವ ಬಿ.ಎಂ.ಎಸ್. ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬಸವರಾಜ ಬೊಮ್ಮಾಯಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಶತಾವಧಾನಿ ಡಾ. ರಾ. ಗಣೇಶ್ ಇವರು ‘ಭೈರಪ್ಪನವರ ಕೃತಿಗಳಲ್ಲಿ ಮೌಲ್ಯಮೀಮಾಂಸೆ’ ಎಂಬ ವಿಷಯದ ಬಗ್ಗೆ ವಿಷಯ ಮಂಡನೆ ಮಾಡಲಿರುವರು. ಶ್ರೀಮತಿ ಸಹನಾ ವಿಜಯಕುಮಾರ್ ಇವರು ಪ್ರಸ್ತಾವನೆ ಮಾಡಲಿದ್ದು, ಶ್ರೀಯುತರಾದ ಎಸ್.ಎಲ್. ಭೈರಪ್ಪ, ಕೃಷ್ಣ ಪ್ರಸಾದ್ ಹಾಗೂ ಅರುಣ ಇವರುಗಳು ಭಾಗವಹಿಸಲಿದ್ದಾರೆ.