Subscribe to Updates

    Get the latest creative news from FooBar about art, design and business.

    What's Hot

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಶ್ವೇತಯಾನ-31’ರ ಕಾರ್ಯಕ್ರಮವಾಗಿ ಯಕ್ಷಗಾನ ಭಾಗವತಿಗೆ, ಚಂಡೆ, ಮದ್ದಳೆ, ಹೆಜ್ಜೆ ತರಗತಿಗಳ ಉದ್ಘಾಟನೆ
    Yakshagana

    ‘ಶ್ವೇತಯಾನ-31’ರ ಕಾರ್ಯಕ್ರಮವಾಗಿ ಯಕ್ಷಗಾನ ಭಾಗವತಿಗೆ, ಚಂಡೆ, ಮದ್ದಳೆ, ಹೆಜ್ಜೆ ತರಗತಿಗಳ ಉದ್ಘಾಟನೆ

    June 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ಕೊಮೆ ತೆಕ್ಕಟ್ಟೆಯ ಯಶಸ್ವೀ ಕಲಾವೃಂದದ ‘ಶ್ವೇತಯಾನ-31’ರ ಕಾರ್ಯಕ್ರಮವಾಗಿ ಯಕ್ಷಗಾನ ಭಾಗವತಿಗೆ, ಚಂಡೆ, ಮದ್ದಳೆ, ಹೆಜ್ಜೆ ತರಗತಿಗಳ ಉದ್ಘಾಟನಾ ಸಮಾರಂಭವು ದಿನಾಂಕ 01-06-2024ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು.

    ತರಗತಿಗಳನ್ನು ದೀಪ ಬೆಳಗಿ ಉದ್ಘಾಟಿಸಿದ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಕಲೆಯನ್ನು ಗೌರವಿಸಿ, ಪ್ರೀತಿಸಿದರೆ ಕಲೆ ನಮ್ಮನ್ನು ಅಪ್ಪಿಕೊಳ್ಳುತ್ತದೆ. ಸಪ್ತ ಬಗೆಯ ಸುಪ್ತ ಪ್ರಕಾರಗಳಿರುವ ಕಲೆ ಯಕ್ಷಗಾನ. ಇಂತಹ ಸಹಸ್ರ ಗುಣವಿರುವ ಯಕ್ಷಗಾನ ಕಲೆಯನ್ನು ಮೀರಿಸುವ ಕಲೆ ಪ್ರಪಂಚದಲ್ಲಿ ಇನ್ನೊಂದಿಲ್ಲ. ಕಲಿಯುವಿಕೆಯಲ್ಲಿ ಆಸಕ್ತಿ ಹೊಂದಿ, ಶ್ರದ್ಧೆ ಭಕ್ತಿಗಳನ್ನು ಹೊಂದಿ ಕಲಿಯಿರಿ. ಕಲೆಯ ಮೂಲಕ ಪ್ರಪಂಚದಾದ್ಯಂತ ನಿಮಗೆ ಗೌರವ ಸಿಗುತ್ತದೆ. ವಿದ್ಯೆ ಬದುಕಿಗೆ ಬೇಕು, ಕಲೆ ಜೀವನ ಅರಳುವುದಕ್ಕೆ ಬೇಕು. ಕಲೆಗೆ ಮರಣವಿಲ್ಲ. ಇಂದು ಸಮರ್ಥ ಗುರುಗಳಿಂದ ಯಕ್ಷಗಾನ ಕಲಿತು, ನಾಳೆ ಭವಿಷ್ಯವಾಳಿ, ಮುಂದಿನ ಜನಾಂಗಕ್ಕೆ ದಾಟಿಸುವ ಕೆಲಸ ಆಗಬೇಕು.” ಎಂದರು.
    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯಕ್ಷಗಾನ ಕಲಾವಿದ ಹಾಗೂ ಸಂಘಟಕರಾದ ಮಹಮದ್ ಗೌಸ್ ಮಾತನಾಡಿ “ಜಾತಿ ಬೇಧವನ್ನು ಮರೆತು, ಯಕ್ಷಗಾನ ಕಲೆ ಮೀರಿ ಮೇಲೇರಿದೆ. ಬದುಕನ್ನು ನಡೆಸುವುದಕ್ಕಾಗಿ ಆಯ್ದುಕೊಂಡ ಯಕ್ಷಗಾನ ನನ್ನನ್ನು ಜನಮಾನಸದಲ್ಲಿ ನಿಲ್ಲಿಸಿದೆ. ಬರೇ ವ್ಯಾವಹಾರಿಕವಲ್ಲದ, ಜನರ ಪ್ರೀತಿಯನ್ನು ಒದಗಿಸಿಕೊಡುವ ಯಕ್ಷಗಾನ ಕಲೆ ನಮ್ಮಲ್ಲಿನ ಚೈತನ್ಯವನ್ನು ಇಮ್ಮಡಿಗೊಳಿಸುತ್ತದೆ.” ಎಂದರು.
    ಯಶಸ್ವಿ ಕಲಾವೃಂದದ ಅಧ್ಯಕ್ಷರಾದ ಮಲ್ಯಾಡಿ ಸೀತಾರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷ್ಣಮೂರ್ತಿ ಉರಾಳ, ಸಂಸ್ಥೆಯ ವಿದ್ಯಾರ್ಥಿ ಸುಮನಾ ನೇರಂಬಳ್ಳಿ, ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಗುರುಗಳಾದ ಲಂಬೋದರ ಹೆಗಡೆ ನಿಟ್ಟೂರು ಉಪಸ್ಥಿತರಿದ್ದರು.
    ಡಾ. ಗಣೇಶ್ ಯು. ಸ್ವಾಗತಿಸಿ, ಕಿಶನ್ ಪೂಜಾರಿ ಪ್ರಾರ್ಥನೆಗೈದು, ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಯಕ್ಷಗಾನ ತರಗತಿಯಲ್ಲಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವೀಗೊಳಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | ‘ಮಲೆನಾಡ ಕೋಗಿಲೆ’ ಕೇಶವ ಹೆಗಡೆ ಕೊಳಗಿ
    Next Article ಉಡುಪಿಯಲ್ಲಿ ಕೃತಿ ಲೋಕಾರ್ಪಣೆ ಹಾಗೂ ಉಪನ್ಯಾಸ ಕಾರ್ಯಕ್ರಮ | ಜೂನ್ 8
    roovari

    Add Comment Cancel Reply


    Related Posts

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.