Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ‘ಸಾಹಿತ್ಯ ಅಭಿಯಾನ -3’ | ಜುಲೈ 12

    July 11, 2025

    ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ “ನಳ ದಮಯಂತಿ” ಯಕ್ಷಗಾನ ಪ್ರದರ್ಶನ | 15 ಜುಲೈ

    July 11, 2025

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಭರತನಾಟ್ಯ’ ಕಾರ್ಯಕ್ರಮ | ಜುಲೈ 13

    July 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ವಿವಿ: “ಯಕ್ಷಾಯಣ” ಸರಣಿ ಕಾರ್ಯಕ್ರಮ ಉದ್ಘಾಟನೆ
    Cultural

    ಮಂಗಳೂರು ವಿವಿ: “ಯಕ್ಷಾಯಣ” ಸರಣಿ ಕಾರ್ಯಕ್ರಮ ಉದ್ಘಾಟನೆ

    January 31, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಡಿಪು : ಮಂಗಳೂರು ವಿಶ್ವವಿದ್ಯಾಲಯದ ಡಾ. ಪಿ. ದಯಾನಂದ ಪೈ ಮತ್ತು ಶ್ರೀ‌ ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ವತಿಯಿಂದ‌ ಯಕ್ಷ ಕಲಾವಿದರ ಸ್ವಗತ ‘ಯಕ್ಷಾಯಣ’ ಸರಣಿ ಕಾರ್ಯಕ್ರಮದ ಉದ್ಘಾಟನೆ ಮಂಗಳೂರು ವಿವಿಯ ಯಕ್ಷಗಾನ ಕಲಾಕೇಂದ್ರದಲ್ಲಿ ದಿನಾಂಕ 01-12-2023ರಂದು ನಡೆಯಿತು.

    ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಕರ್ನಾಟಕ ಜಾನಪದ ವಿವಿಯ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿನ್ನಪ್ಪ ಗೌಡ “ಕಲಾವಿದನ ಬದುಕು, ಯಕ್ಷಗಾನ ಕಟ್ಟಿಕೊಡುವ ಹಾಗೂ ಅದನ್ನು ಮುಂದಿನ ಪರಂಪರೆಗೆ ದಾಟಿಸುವ ಪ್ರಯತ್ನವನ್ನು ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರವು ದಾಖಲೀಕರಣದ ಮೂಲಕ ನಡೆಸುತ್ತಿರುವುದು ಶ್ಲಾಘನೀಯವಾಗಿದೆ. ಕಲಾವಿದರ ಸ್ವಗತದಿಂದ ಸಾಂಸ್ಕೃತಿಕ ಚರಿತ್ರೆ ಅನಾವರಣಗೊಳ್ಳಲಿದೆ. ಯಕ್ಷಗಾನ ಸ್ಥಳೀಯವಾಗಿ ನಮ್ಮ ಕರಾವಳಿಯಲ್ಲಿ ಹುಟ್ಟಿ ಬೆಳೆದ ಕಲೆಯಾದರೂ ಯಕ್ಷಗಾನ ಅದೊಂದು ರಾಷ್ಟ್ರೀಯ ಕಲೆ. ದೇಶದ ಸಾಂಸ್ಕೃತಿಕ ಶ್ರೀಮಂತಿಕೆಗೆ ಸಾಕ್ಷಿಯಾಗಿರುವ ಯಕ್ಷಗಾನ ಬೆಳೆಯುವುದಕ್ಕೆ ಅನೇಕ ಕಲಾವಿದರ ಕೊಡುಗೆಯೂ ಇದೆ. ಯಕ್ಷಗಾನ ರಂಗಕ್ಕೆ ಡಾ.ಪ್ರಭಾಕರ ಜೋಶಿಯರ ಕೊಡುಗೆ ಅಪಾರವಾಗಿದ್ದು, ಹಲವು ದಶಕಗಳ ಯಕ್ಷಪಯಣದ ಅನುಭವವವನ್ನು ದಾಖಲೀಕರಣಗೊಳಿಸುವ ಮೂಲಕ ಯಕ್ಷಗಾನ ಪರಂಪರೆಯನ್ನು ಮರುಕಟ್ಟಿಕೊಡುವ ಕೆಲಸವನ್ನು ಯಕ್ಷಗಾನ ಕೇಂದ್ರವು ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಸ್ಥಳೀಯ ಸಾಂಸ್ಕೃತಿಕ ಸಂಗತಿಗಳನ್ನು ರಕ್ಷಿಸುವ ಕಾರ್ಯವನ್ನು ಮಂಗಳೂರು ವಿವಿಯು ಸಮರ್ಥವಾಗಿ ನಿರ್ವಹಿಸುತ್ತಿದೆ.” ಎಂದರು.

    ಇದೇ ಸಂದರ್ಭದಲ್ಲಿ ಪ್ರಭಾಕರ ಜೋಶಿಯವರಿಗೆ ಕೇಂದ್ರದ ವತಿಯಿಂದ ಯಕ್ಷಪಯಣದ ಗೌರವ ಸನ್ಮಾನವನ್ನು ಸಲ್ಲಿಸಲಾಯಿತು.
    ಮಂಗಳೂರು‌ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಯರಾಜ್ ಅಮೀನ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ “ಯಕ್ಷಗಾನದ ಕಲಾವಿದರ ಬದುಕಿನ ವಿವರಗಳು ಕಲೆಯೊಂದರ ಬೆಳವಣಿಗೆಯ ಚರಿತ್ರೆಯನ್ನು ಕಟ್ಟಲು ಸಹಕಾರಿ.” ಎಂದರು.

    ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಬೋಜ ಪೂಜಾರಿ ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಯಕ್ಷಗಾನ‌ ವಿದ್ವಾಂಸರು, ಹಿರಿಯ ಅರ್ಥಧಾರಿಗಳಾಗಿರುವ ಡಾ. ಎಂ. ಪ್ರಭಾಕರ ಜೋಶಿಯವರು ಕಾರ್ಯಕ್ರಮದಲ್ಲಿ ತಮ್ಮ ಯಕ್ಷಪಯಣದ ಅನುಭವ ಕಥನವನ್ನು‌ ಹಂಚಿಕೊಂಡರು. “ಯಕ್ಷಗಾನದಲ್ಲಿ ತಾತ್ವಿಕ ಮತ್ತು ತಾಂತ್ರಿಕ ಶಿಕ್ಷಣದ ಕೊರತೆಯಿದೆ. ಕಲೆ ಬೆಳೆದಷ್ಟು ಯಕ್ಷಗಾನದ ವಿಮರ್ಶೆ ಬೆಳೆದಿಲ್ಲ. ಯಕ್ಷಗಾನ ಕಲಾವಿದರ ಆತ್ಮಕಥನವೂ ಪ್ರಾಮುಖ್ಯ ಎಂದು ವಿವಿಯ ಯಕ್ಷಗಾನ ಕೇಂದ್ರ ಭಾವಿಸಿರುವುದು ಉತ್ತಮ ಯೋಚನೆ.” ಎಂದರು.

    ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಚಂದ್ರಶೇಖರ್ ಎಂ.ಬಿ. ಹಾಗೂ ಹರಿಪ್ರಸಾದ್ ದಾಖಲೀಕರಣದಲ್ಲಿ ಸಹಕರಿಸಿದರು. ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ‌ ಡಾ. ಧನಂಜಯ ಕುಂಬ್ಳೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಯಕ್ಷಗಾನ ಅಧ್ಯಯನ ಕೇಂದ್ರದ ಸತೀಶ್ ಕೊಣಾಜೆ ವಂದಿಸಿ, ಸಾಯಿಸುಮ ನಾವಡ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬಿರುಮಲೆ ಬೆಟ್ಟದಲ್ಲಿ ಬೆಳಗಿದ ‘ಪ್ರಜ್ಞಾ’ ಬೆಳಕು | ವಿಶೇಷ ಲೇಖನ
    Next Article ಹಿರಿಯ ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಇವರಿಗೆ ‘ರಂಗಚಾವಡಿ -2023’ ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ “ನಳ ದಮಯಂತಿ” ಯಕ್ಷಗಾನ ಪ್ರದರ್ಶನ | 15 ಜುಲೈ

    July 11, 2025

    ಉಡುಪಿಯಲ್ಲಿ ಯಕ್ಷಗಾನ ಕಲಾರಂಗ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ | ಜುಲೈ 12

    July 11, 2025

    ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆಯಲ್ಲಿ “ಉಲೂಪಿ ನಂದನ” ತಾಳಮದ್ದಳೆ | ಜುಲೈ 13

    July 10, 2025

    ಹರೇಕಳ ಶ್ರೀರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷದ್ರುವ ಯಕ್ಷ ಶಿಕ್ಷಣ

    July 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.