Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಪ್ಪಳದ ತಾವರಗೇರಾದಲ್ಲಿ ಮೇ ಸಾಹಿತ್ಯ ಮೇಳದ ಅಂಗವಾಗಿ ಚಿತ್ರಕಲಾ ಶಿಬಿರದ ಉದ್ಘಾಟಣೆ 
    Drawing

    ಕೊಪ್ಪಳದ ತಾವರಗೇರಾದಲ್ಲಿ ಮೇ ಸಾಹಿತ್ಯ ಮೇಳದ ಅಂಗವಾಗಿ ಚಿತ್ರಕಲಾ ಶಿಬಿರದ ಉದ್ಘಾಟಣೆ 

    May 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತಾವರಗೇರಾ: ಮೇ ಸಾಹಿತ್ಯ ಮೇಳದ ಅಂಗವಾಗಿ ಆಯೋಜಿಸಿದ ಚಿತ್ರಕಲಾ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 18-05-2024 ರಂದು ಕೊಪ್ಪಳದ ತಾವರಗೇರಾ ಬುದ್ಧ ವಿಹಾರದ ಮಾನವ ಬಂಧುತ್ವ ವೇದಿಕೆಯ ಬುದ್ಧ ಮಂಟಪದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಲಡಾಯಿ ಪ್ರಕಾಶನದ ಬಸವರಾಜ ಸೂಳಿಭಾವಿ “ಸಾಹಿತ್ಯ ಜನರ ನಾಡಿ ಮಿಡಿತವಾಗಬೇಕು. ಸಾಹಿತ್ಯ ಖಡ್ಗವಾಗಬೇಕು. ಸಂವಿಧಾನ ನಮ್ಮೆಲ್ಲರನ್ನು ಒಗ್ಗೂಡಿಸಿದೆ. ಸಂವಿಧಾನದ ಮೂಲಕ ನ್ಯಾಯದ ಧ್ವನಿಯನ್ನು ಎತ್ತಿ ಹಿಡಿದಿದೆ. ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ಸಾರಿದ ಸಂವಿಧಾನವನ್ನು ಬದಲಾಯಿಸುವ ಹಂತದಲ್ಲಿ ಇರುವುದು ವಿಪರ್ಯಾಸ. ಇಂತಹ ವಿಷಯಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕಿದೆ. ಆದ್ದರಿಂದ ಮೇ 18, 19,20 ಮೂರು ದಿನ ಶಿಬಿರ ಏರ್ಪಡಿಸಲಾಗಿದೆ.” ಎಂದು ಹೇಳಿದರು.

    ಶಿಬಿರವನ್ನು ಉದ್ಘಾಟಿಸಿದ ಹಿರಿಯ ಚಿತ್ರ ಕಲಾವಿದ ಬಿ. ಎಲ್. ಚವ್ಹಾಣ್  ಮಾತನಾಡಿ “ಎಲ್ಲ ಸಮುದಾಯವು ಒಂದಾಗಬೇಕು ಎನ್ನುವುದು ನಮ್ಮ ಕಲ್ಪನೆ. ಡಾ. ಬಿ. ಆ‌ರ್. ಅಂಬೇಡ್ಕರ್ ಚಿಂತನೆಗಳನ್ನು ಶಾಲಾ ಕಾಲೇಜುಗಳಲ್ಲಿ ನಮ್ಮ ಮಕ್ಕಳಿಗೆ ತಿಳಿಸುವ ಅವಶ್ಯಕತೆ ಇದೆ. ಲಲಿತ ಕಲೆಯಿಂದ ನಾವು ಸಮಾಜದಳಲ್ಲಿ ಜಾಗೃತಿ ಮೂಡಿಸುವಂತಹ ಕೆಲಸ ಮಾಡುತ್ತೇವೆ. ಅದಕ್ಕೆ ಕೈಜೋಡಿಸೋಣ.” ಎಂದರು.

    ಸಾಹಿತಿ ಎಂ. ಎಂ. ಮದರಿ, ನಾಗೇಶನಹಳ್ಳಿಯ ಯುವ ಚಿಂತಕ ಎಂ. ಕೆ. ಸಾಹೇಬ, ಸಮಾಜ ಸೇವಕ ರವಿ ಪಾಟೀಲ್, ಬಿ. ಮಾರುತಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳ 20ಕ್ಕೂ ಹೆಚ್ಚು ಕಲಾವಿದರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ಮಾನವ ಬಂಧುತ್ವ ವೇದಿಕೆಯ ಟಿ. ರತ್ನಾಕರ, ಶುಕ್ರರಾಜ ತಾಳಕೇರಿ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಪಿ. ಎಸ್‌. ಐ. ಸುಜಾತ ನಾಯಕ, ಬಿ. ಮಾರುತಿ, ಎಂ. ಕೆ. ಸಾಹೇಬ, ರವಿ ಪಾಟೀಲ್, ಆದೇಶ ನಾಯಕ, ಲಡಾಯಿ ಪ್ರಕಾಶನದ ಬಸವರಾಜ ಸೂಳಿಭಾವಿ, ಶರಣಪ್ಪ ತುಮರಿಕೊಪ್ಪ ರಾಮಣ್ಣ ಬೆರ್ಗಿ, ಮಂಜುನಾಥ ನಾಯಕ,  ಸಾಹಿತಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleರಾಯಚೂರಿನ ಸಿದ್ದರಾಮ ಜಂಬಲದನ್ನಿ ರಂಗಮಂದಿರದಲ್ಲಿ ‘ರಕ್ತ ವಿಲಾಪ’ | ಮೇ 19
    Next Article ಸ್ವರ ಚಿನ್ನಾರಿ ನೇತೃತ್ವದಲ್ಲಿ ‘ಕಾಸರಗೋಡು ಕನ್ನಡ ಹಬ್ಬ’ | ಮೇ 25
    roovari

    Add Comment Cancel Reply


    Related Posts

    ಕಾಸರಗೋಡಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 2ನೇ ಕಾರ್ಯಕ್ರಮ

    June 30, 2025

    ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

    June 26, 2025

    ದೇಲಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಕನ್ನಡ ಸಾಹಿತ್ಯ ಅಭಿಯಾನ

    June 23, 2025

    ರಾಜೇಶ್ವರಿ ಕುಡುಪು ಇವರ ‘ಕಲಾಸಂಪದ’ ಪುಸ್ತಕ ಬಿಡುಗಡೆ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.