Subscribe to Updates

    Get the latest creative news from FooBar about art, design and business.

    What's Hot

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉದ್ಘಾಟನೆಗೊಂಡ ‘ಬಾಲ ಲೀಲಾ’ ಚಿಣ್ಣರ ಬೇಸಿಗೆ ಶಿಬಿರ
    Camp

    ಉದ್ಘಾಟನೆಗೊಂಡ ‘ಬಾಲ ಲೀಲಾ’ ಚಿಣ್ಣರ ಬೇಸಿಗೆ ಶಿಬಿರ

    April 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಭಾವನಾ ಪೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದಲ್ಲಿ ಸಂಯೋಜಿಸುತ್ತಿರುವ ‘ಬಾಲ ಲೀಲಾ’ ಚಿಣ್ಣರ ಬೇಸಿಗೆ ಶಿಬಿರವು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ದಿನಾಂಕ 10 ಏಪ್ರಿಲ್ 2025ರಂದು ಉದ್ಘಾಟನೆಗೊಂಡಿತು.

    ಈ ಶಿಬಿರವನ್ನು ಉದ್ಘಾಟನೆ ಮಾಡಿದ ಸಂಗೀತ ಸಂಯೋಜಕರಾದ ಅರುಣ್ ಹಾವಂಜೆ ಮಾತನಾಡಿ “ನಮ್ಮೂರಿನಲ್ಲಿ ಭಾವನಾ ಫೌಂಡೇಶನ್ ಸಂಘಟಿಸುತ್ತಿರುವ ಬೇಸಿಗೆ ಶಿಬಿರವು ಬಹು ಮಹತ್ವಪೂರ್ಣವಾದುದು ಮತ್ತು ಇಂದಿನ ಆಧುನಿಕ ಜೀವನದ ನಡುವೆ ಸಾಂಪ್ರದಾಯಿಕ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಕಲೆ, ಅಭಿನಯ, ಸಂಗೀತ ಎಲ್ಲವನ್ನೂ ಸಮೀಕರಿಸುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ” ಎಂಬುದಾಗಿ ಅಭಿಪ್ರಾಯವಿತ್ತರು.

    ಭಾವನಾ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷರಾದ ಯಕ್ಷಗುರು ಹಾವಂಜೆ ಮಂಜುನಾಥ ರಾವ್ ಹಾಗೂ ಶಿಬಿರ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ, ವಿಶುರಾವ್ ಹಾವಂಜೆ ಹಾಗೂ ವಿದುಷಿ ಅಕ್ಷತಾ ವಿಶು ರಾವ್ ಉಪಸ್ಥಿತರಿದ್ದರು. ಈ ಬೇಸಿಗೆ ಶಿಬಿರವು ನಾಲ್ಕು ದಿನಗಳ ಕಾಲ ನಡೆಯಲಿದ್ದು, ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ಹಾಗೂ ಕಸವನ್ನು ರಸವಾಗಿಸುವ ಉದ್ದೇಶದೊಂದಿಗೆ ರೂಪಿಸಲಾಗಿದೆ. ಅಭಿನಯ, ಆವೆಮಣ್ಣಿನ ಶಿಲ್ಪಗಳು, ಕಾವಿ ಕಲೆ, ಪಕ್ಷಿ ವೀಕ್ಷಣೆ, ಮನೆಮದ್ದು, ಗ್ರಾಮೀಣ ಆಟಗಳು, ಸಂಗೀತ, ಬಟ್ಟೆಯ ಮೇಲೆ ಮುದ್ರಣ ಕಲೆ ಮುಂತಾಗಿ ಹತ್ತು ಹಲವಾರು ಅಂಶಗಳನ್ನು ಶಿಬಿರದಲ್ಲಿ ಕಲಿಸಿ ಕೊಡಲಾಗುತ್ತಿದೆ.

    ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 13 ಏಪ್ರಿಲ್ 2025ರ ಭಾನುವಾರದಂದು ಸಂಜೆ ಗಂಟೆ 2-30ಕ್ಕೆ ನೆರವೇರಲಿದ್ದು, ಇದೇ ಸಂದರ್ಭದಲ್ಲಿ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ‘ವಿಶ್ವ ಕಲಾ ಸಿಂಧು’ ಪುರಸ್ಕಾರವನ್ನು ಹಿರಿಯ ಕಲಾವಿದರಾದ ರಮೇಶ್ ರಾವ್ ಇವರಿಗೆ ನೀಡಿ ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಥಾನದ ವಿಶ್ವನಾಥ ಶೆಣೈ, ಕುಂದಾಪುರದ ಯುವ ಉದ್ಯಮಿಗಳಾದ ಸಂಪತ್ ಶೆಟ್ಟಿಯವರು ಉಪಸ್ಥಿತರಿರುತ್ತಾರೆ.

    baikady camp roovari
    Share. Facebook Twitter Pinterest LinkedIn Tumblr WhatsApp Email
    Previous Articleಬ್ರಹ್ಮಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ನೃತ್ಯ ಕೌಸ್ತುಭ ಹಾಗೂ ನೃತ್ಯ ರೂಪಕ’ | ಏಪ್ರಿಲ್ 13
    Next Article ಡಾ. ಸುನೀತಾ ಎಂ. ಶೆಟ್ಟಿ ದತ್ತಿನಿಧಿ ಪ್ರಾಯೋಜಿತ ‘ತೌಳವ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭ | ಏಪ್ರಿಲ್ 12
    roovari

    Add Comment Cancel Reply


    Related Posts

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026

    ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ‘ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ’ | ಜನವರಿ 10

    January 1, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.