Subscribe to Updates

    Get the latest creative news from FooBar about art, design and business.

    What's Hot

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಡನೀರು ಮಠದಲ್ಲಿ ‘ಗಮಕ ಶ್ರಾವಣ’ದ ಸರಣಿ ಕಾರ್ಯಕ್ರಮದ ಉದ್ಘಾಟನೆ
    Literature

    ಎಡನೀರು ಮಠದಲ್ಲಿ ‘ಗಮಕ ಶ್ರಾವಣ’ದ ಸರಣಿ ಕಾರ್ಯಕ್ರಮದ ಉದ್ಘಾಟನೆ

    August 14, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಎಡನೀರು : ಶ್ರೀ ಎಡನೀರು ಮಠದ ಚಾತುರ್ಮಾಸ್ಯ ಸಭಾಂಗಣದಲ್ಲಿ ‘ಗಮಕ ಶ್ರಾವಣ’ದ ಸರಣಿ ಕಾರ್ಯಕ್ರಮವು ದಿನಾಂಕ 09 ಆಗಸ್ಟ್ 2024ರಂದು ಉದ್ಘಾಟನೆಗೊಂಡಿತು.

    ಈ ಸರಣಿ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಆಶೀರ್ವಚನ ನೀಡಿದ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು “ಗಮಕ ಕಲೆ ಅತ್ಯಂತ ಪ್ರಾಚೀನವಾದುದು. ಹಿಂದೆ ರಾಜಾಶ್ರಯವಿದ್ದ ಕಾಲದಲ್ಲಿ ಇದು ಅತ್ಯಂತ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ಭಾರತೀಯ ಸಂಸ್ಕೃತಿಯನ್ನು ಜನರಿಗೆ ಯಥಾವತ್ತಾಗಿ ಪರಿಚಯಿಸುವುದಕ್ಕೆ ಇದು ಬಹಳ ಉತ್ತಮವಾದ ಮಾಧ್ಯಮ. ಗಮಕ ಕಲಾಪರಿಷತ್ತು ಮತ್ತು ಸಿರಿಗನ್ನಡ ವೇದಿಕೆಯ ಕೇರಳ ಗಡಿನಾಡ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ವಕಾಲದಲ್ಲಿ ವಿಶೇಷವಾಗಿ ರಾಮಾಯಣದ ಪುಣ್ಯಕಥೆಯನ್ನು ಪ್ರಚಾರಗೊಳಿಸಿ ಜನರಲ್ಲಿ ಸಚ್ಚಾರಿತ್ರ್ಯವನ್ನು ಬೆಳೆಸುವ ಮಹತ್ಕಾರ್ಯವನ್ನು ಮಾಡುತ್ತಿರುವುದು ಸ್ತುತ್ಯರ್ಹವಾಗಿದೆ. ಇದು ಭಾರತೀಯ ಸಂಸ್ಕೃತಿಯ ಜೀವಾಳವೂ ಹೌದು” ಎಂದು ಅಭಿಪ್ರಾಯಪಟ್ಟರು.

    ಸಮಾರಂಭದ ಅಧ್ಯಕ್ಷತೆಯನ್ನು ಗಮಕಕಲಾ ಪರಿಷತ್ತಿನ ಅಧ್ಯಕ್ಷರಾದ ಟಿ. ಶಂಕರನಾರಾಯಣ ಭಟ್ಟರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರೂ ಶ್ರೀ ಮಠದ ಆಡಳಿತಾಧಿಕಾರಿಗಳೂ ಆಗಿರುವ ಶ್ರೀ ರಾಜೇಂದ್ರ ಕಲ್ಲೂರಾಯರು “ಭಾರತೀಯ ಸಂಸ್ಕೃತಿಯನ್ನು ಸಾರುವ ಮಹಾಕಾವ್ಯಗಳನ್ನು ಸಾಧ್ಯವಿದ್ದಷ್ಟೂ ಪ್ರಚಾರಗೊಳಿಸಬೇಕು” ಎಂದು ಕರೆಯನ್ನಿತ್ತರು.

    “ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಅವಳಿ ಪುತ್ರರಾದ ಕುಶ ಲವರು ಜನಿಸಿದುದು ಶ್ರಾವಣ ಮಾಸದಲ್ಲಿ. ಅವರು ಆದಿ ಗಮಕಿಗಳು ಎಂಬ ನಂಬಿಕೆ ನಮ್ಮದು. ಆದುದರಿಂದ ಅವರ ದಿವ್ಯಸ್ಮರಣೆಗೋಸ್ಕರವಾಗಿ ಶ್ರಾವಣ ಮಾಸದಲ್ಲಿ ನಾಡಿನ ವಿವಿಧ ಸಾಂಸ್ಕೃತಿಕ ಕೇಂದ್ರಗಳಲ್ಲಿ ಗಮಕ ಶ್ರಾವಣ ಎಂಬ ಹೆಸರಿನಲ್ಲಿ ರಾಮಾಯಣ ಮಹಾಕಾವ್ಯದಿಂದಾಯ್ದ ಭಾಗಗಳ ವಾಚನ ವ್ಯಾಖ್ಯಾನಗಳನ್ನು ನಡೆಸುತ್ತಾ ಬರುತ್ತಿದ್ದೇವೆ” ಎಂದು ಸಿರಿಗನ್ನಡ ವೇದಿಕೆಯ ಅಧ್ಯಕ್ಷರೂ ಗಮಕ ಪರಿಷತ್ತಿನ ಕಾರ್ಯದರ್ಶಿಯೂ ಆಗಿರುವ ಶ್ರೀ ವಿ.ಬಿ.ಕುಳಮರ್ವ ಪ್ರಸ್ತಾವನೆಯಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ತೊರವೆ ರಾಮಾಯಣದಿಂದಾಯ್ದ ಶ್ರೀ ರಾಮ ಜನನದ ಭಾಗವನ್ನು ಗಮಕಿಗಳಾದ ನಿವೃತ್ತ ಮುಖ್ಯೋಪಾಧ್ಯಾಯ ಡಾ. ಶಶಿರಾಜ ನೀಲಂಗಳ ಸುಶ್ರಾವ್ಯವಾಗಿ ವಾಚನ ಮಾಡಿದರು. ನಿವೃತ್ತ ಶಿಕ್ಷಕರಾದ ಗಮಕಿ ಶ್ರೀ ಶ್ರೀಹರಿ ಭಟ್ ಪೆಲ್ತಾಜೆ ಮನೋಜ್ಞವಾಗಿ ವ್ಯಾಖ್ಯಾನ ಮಾಡಿದರು.

    ನಿವೃತ್ತ ಸರಕಾರಿ ಅಧಿಕಾರಿಗಳಾದ ಶ್ರೀ ಜಯನಾರಾಯಣ ತಾಯನ್ನೂರು ಸ್ವಾಗತಿಸಿ, ಧನ್ಯವಾದಗಳನ್ನಿತ್ತರು. ವಿ.ಬಿ.ಕುಳಮರ್ವರು ಭಾಮಿನೀ ಷಟ್ಪದಿಯಲ್ಲಿ ರಚಿಸಿದ ಗಮಕ ಗೀತೆಯನ್ನು ಡಾ. ಶಶಿರಾಜ ನೀಲಂಗಳ ಹಾಡಿದರು. ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಶ್ರೀಮತಿ ಲಲಿತಾಲಕ್ಷ್ಮೀ ಕುಳಮರ್ವ, ನಿವೃತ್ತ ಸರಕಾರಿ ಅಧಿಕಾರಿ ಶ್ರೀ ಗಣೇಶ ಪ್ರಸಾದ ಪಾಣೂರು, ಶ್ರೀ ಶಾಮ ಭಟ್ ಪೇರಡ್ಕ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ಹನಿಗವನ ಕವಿ ಡುಂಡಿರಾಜ್ ವಿರಚಿತ ‘ಕಾಯುವ ಕಾಯಕ’ ನಾಟಕ ಪ್ರದರ್ಶನ | ಆಗಸ್ಟ್ 17  
    Next Article ಕುಂದಾಪುರದಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನ ಸಂಭ್ರಮ’ | ಆಗಸ್ಟ್ 16
    roovari

    Comments are closed.

    Related Posts

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಶಿವಮೊಗ್ಗದಲ್ಲಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಯುವ ಸಾಹಿತಿ’ | ಮೇ 10  

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.