Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಉಡುಪಿಯ ಬಡಗುಪೇಟೆಯಲ್ಲಿ ಉದ್ಘಾಟನೆಗೊಂಡ ಜನಪದ ದೇಶೀಯ ಕಲೆಗಳ ಕಾರ್ಯಾಗಾರ
    Drawing

    ಉಡುಪಿಯ ಬಡಗುಪೇಟೆಯಲ್ಲಿ ಉದ್ಘಾಟನೆಗೊಂಡ ಜನಪದ ದೇಶೀಯ ಕಲೆಗಳ ಕಾರ್ಯಾಗಾರ

    February 28, 2026Updated:March 2, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಭಾವನಾ ಪೌಂಡೇಶನ್ (ರಿ.) ಹಾವಂಜೆ, ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಹಾಗೂ ಉಡುಪಿಯ ವೆಂಟನಾ ಫೌಂಡೇಶನ್‌ನ ಸಹಯೋಗದಲ್ಲಿ ಆಯೋಜಿಸುತ್ತಿರುವ ‘ಜನಪದ ದೇಶೀಯ ಕಲೆಗಳ ಕಾರ್ಯಾಗಾರ’ವು ದಿನಾಂಕ 28 ಫೆಬ್ರವರಿ 2026ರಂದು ಉಡುಪಿಯ ವಾಸು ಏಜೆನ್ಸೀಸ್ ಬಳಿ ಬಡಗುಪೇಟೆಯ 10.03.28 ಗ್ಯಾಲರಿಯಲ್ಲಿ ಉದ್ಘಾಟನೆಗೊಂಡಿತು.

    ಈ ಕಾರ್ಯಾಗಾರವನ್ನು ಫೌಂಡೇಶನ್‌ನ ನಿರ್ದೇಶಕಿ ಶಿಲ್ಪಾ ಭಟ್‌ರವರು ಉದ್ಘಾಟಿಸಿ “ಕಲೆ, ಸಂಸ್ಕೃತಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ವಿವಿಧ ನೂತನ ಪ್ರಯೋಗ ಹಾಗೂ ಕಾರ್ಯಕ್ರಮಗಳಿಗೆ ವೆಂಟನಾ ಫೌಂಡೇಶನ್ ಸಹಕಾರ ನೀಡುತ್ತದೆ. ದೇಶೀಯ ಕಲೆಗಳು ಉಳಿಯುವಂತಾಗಲು ಈ ತೆರನಾದ ಕಾರ್ಯಾಗಾರಗಳು ಬಹು ಸಹಕಾರಿ. ಇದೊಂದು ಉಡುಪಿಯಂತಹ ಪುಟ್ಟ ಪಟ್ಟಣಕ್ಕೆ ರಾಷ್ಟ್ರಮಟ್ಟದಲ್ಲಿ ಮಾದರಿಯಾಗಬಹುದಾದ ಕಾರ್ಯಕ್ರಮ.” ಎಂಬುದಾಗಿ ಅಭಿಪ್ರಾಯವಿತ್ತರು.

    ಇನ್ನೋರ್ವ ಅತಿಥಿ ಕದಿಕೆ ಟ್ರಸ್ಟಿನ ಸ್ಥಾಪಕ ನಿರ್ದೇಶಕರಾದ ಮಮತಾ ರೈ “ಬಟ್ಟೆಯ ಮೇಲಿನ ಮಾತಾ ನಿ ಪಚೇಡಿ ಶೋಷಣೆಗೆ ಒಳಪಟ್ಟ ಒಂದು ಸಮುದಾಯದ ನೋವೇ ಕಲೆಯಾಗಿ ಮಾರ್ಪಾಟಾದ ಹಿನ್ನೆಲೆಯುಳ್ಳದ್ದು. ನಮ್ಮಲ್ಲಿನ ವಿನ್ಯಾಸಗಾರಿಕೆಯ ಪದವಿ ಪಡೆಯುತ್ತಿರುವಯುವ ಸಮುದಾಯಕ್ಕೆ ಈ ಭಾರತೀಯ ಕಲೆಗಾರಿಕೆಯ ತಾಂತ್ರಿಕ ಅಂಶಗಳು ವಿನೂತನ ಪ್ರಯೋಗಕ್ಕೆ ಎಡೆಮಾಡಿಕೊಡಬಲ್ಲುದು. ಈ ತೆರನಾದ ಕಾರ್ಯಕ್ರಮ ಇನ್ನಷ್ಟು ನಡೆಯಲಿ” ಎಂಬುದಾಗಿ ಹಾರೈಸಿದರು.

    ಬಡಗುಪೇಟೆ ಗ್ಯಾಲರಿಯ ಸಂತೋಷ್ ಪೈ ಉಪಸ್ಥಿತರಿದ್ದರು. ಕಾರ್ಯಾಗಾರದ ಸಂಯೋಜಕರಾದ ಜನಾರ್ದನ ಹಾವಂಜೆ ಕಾರ್ಯಕ್ರಮ ನಿರ್ವಹಿಸಿದರು. ಬಟ್ಟೆಗೆ ಅಳಲೇಕಾರಿಯ ರಸವನ್ನು ಸವರಿ, ಬೆಲ್ಲ ಮತ್ತು ಕಬ್ಬಿಣದ ತುಕ್ಕನ್ನು ಕೊಳೆಸಿ ತಯಾರಿಸಿದ ದ್ರಾವಣದಿಂದ ಕಪ್ಪು ವರ್ಣವನ್ನು ಬರುವಂತೆ ಮಾಡಿಕೊಂಡು ಈ ಕಲಂಕಾರಿ ಕಲೆಯ ಚಿತ್ತಾರಗಳು ಬಟ್ಟೆಯ ಮೇಲೆಲ್ಲ ಹರಡಿಕೊಳ್ಳುತ್ತದೆ. ಈ ಕಲೆಯನ್ನು ಸುಮಾರು ನಾಲ್ಕು ದಶಕಗಳಿಗಿಂತಲೂ ಮಿಕ್ಕಿ ರಚಿಸುತ್ತಿರುವ ಜಗದೀಶ್‌ ಚಿತ್ತಾರವರು ಈ ಸರಣಿ ಕಲಾ ಕಾರ್ಯಾಗಾರದ ಭಾಗವಾಗಿ ಬಟ್ಟೆಯ ಮೇಲೆ ರಚಿಸಲ್ಪಡುವ ಗುಜರಾತ್‌ನ ಕಲಂಕಾರಿ ಹಾಗೂ ಮಾತಾ ನಿ ಪಚೇಡಿ ಈ ಬಾರಿ ಆಸಕ್ತರಿಗೆ ಕಲಿಸಿಕೊಡುತ್ತಿದ್ದಾರೆ. ಫೆಬ್ರವರಿ 28ನೇ ಶನಿವಾರ ಬ್ಲಾಕ್ ಪ್ರಿಂಟಿಂಗ್‌ ಕಲಂಕಾರಿ ಮತ್ತು ಮಾರ್ಚ್ 01ನೇ ಭಾನುವಾರ ಮಾತಾ ನಿ ಪಚೇಡಿ ಕಾರ್ಯಾಗಾರಗಳು ಬಡಗುಪೇಟೆಯ ಗ್ಯಾಲರಿಯಲ್ಲಿ ನಡೆಯಲಿದೆ.

    baikady drawing folk roovari workshop
    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ‘ಭಗವಂತನ ಮರಣ’ದಲ್ಲಿ ಕೋಮುವಾದದ ಸಾವು
    Next Article ತೆಕ್ಕಟ್ಟೆ ಹಯಗ್ರೀವದಲ್ಲಿ ಧಮನಿ ಟ್ರಸ್ಟಿನ ವಾರ್ಷಿಕೋತ್ಸವ ಸಮಾರಂಭ
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.