Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಕಮಲಾಂಜಲಿ’ ನೃತ್ಯಾರ್ಚನೆ | ಆಗಸ್ಟ್ 13

    August 12, 2025

    ‘ಲೇಖನ ಬರಹ ಸ್ಪರ್ಧೆ’ಗೆ ಲೇಖನಗಳ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30

    August 12, 2025

    ಬೆಂಗಳೂರಿನಲ್ಲಿ ರಂಗರಥ ವತಿಯಿಂದ ‘ಅಭಿನಯ ಕಾರ್ಯಾಗಾರ’ | ಸೆಪ್ಟೆಂಬರ್ 01ರಿಂದ 19

    August 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಂದಾಪುರದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ’ ಉದ್ಘಾಟನೆ
    Yakshagana

    ಕುಂದಾಪುರದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ’ ಉದ್ಘಾಟನೆ

    January 3, 2025Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಪ್ರದರ್ಶನ ಸಂಘಟನಾ ಸಮಿತಿ ಕುಂದಾಪುರ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ವತಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರದ ಆರು ಪ್ರೌಢಶಾಲೆಗಳ ‘ಕಿಶೋರ ಯಕ್ಷಗಾನ ಸಂಭ್ರಮ’ವನ್ನು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ದಿನಾಂಕ 01 ಜನವರಿ 2025ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು.

    ಕುಂದಾಪುರ ಶಾಸಕರಾದ ಶ್ರೀ ಕಿರಣ್ಕುಲಮಾರ್ ಕೊಡ್ಗಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಕುಂದಾಪುರ ಉಪವಿಭಾಗ ಅಧಿಕಾರಿಗಳಾದ ಮಹೇಶ್ಚಂದ್ರ ಕೆ., ಕುಂದಾಪುರ ಪುರಸಭೆಯ ಅಧ್ಯಕ್ಷರಾದ ಮೋಹನ್ದಾರಸ್ ಶೆಣೈ, ಕುಂದಾಪುರ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಆದರ್ಶ ಹೆಬ್ಬಾರ್, ಕಾವ್ರಡಿ ಸಿಎ ಬ್ಯಾಂಕ್ನದ ಅಧ್ಯಕ್ಷರಾದ ಸದಾನಂದ ಬಳ್ಕೂರು, ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಭಾಗವಹಿಸಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಗೈದರು. ಗಣೇಶ್ ಬ್ರಹ್ಮಾವರ ಸಹಕರಿಸಿ, ನಾರಾಯಣ ಎಂ. ಹೆಗಡೆ ಧನ್ಯವಾದ ಸಲ್ಲಿಸಿದರು. ಸಭೆಯ ಪೂರ್ವದಲ್ಲಿ ಸರಕಾರಿ ಪ್ರೌಢಶಾಲೆ ಕೆದೂರು ಇಲ್ಲಿನ ವಿದ್ಯಾರ್ಥಿಗಳಿಂದ ನರಸಿಂಹ ತುಂಗರ ನಿರ್ದೇಶನದಲ್ಲಿ ‘ಲವಣಾಸುರ ಕಾಳಗ’ ಮತ್ತು ಸಭೆಯ ಬಳಿಕ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ದೇವರಾಜದಾಸ ಮರವಂತೆ ಇವರ ನಿರ್ದೇಶನದಲ್ಲಿ ‘ಮೈಂದದ್ವಿವಿದ’ ಯಕ್ಷಗಾನ ಪ್ರದರ್ಶನಗೊಂಡಿತು.

    yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಂಡ್ಯದಲ್ಲಿ ‘ಕೆ.ವಿ. ಶಂಕರ ಗೌಡ ನೆನಪಿನ ನಾಟಕೋತ್ಸವ’ | ಜನವರಿ 09ರಿಂದ 11
    Next Article ನೂತನ ರವೀಂದ್ರ ಮಂಟಪದಲ್ಲಿ ಡಾ. ಎನ್. ಟಿ. ಭಟ್ ಇವರ ಕೃತಿ ಲೋಕಾರ್ಪಣೆ | ಜನವರಿ 06
    roovari

    Add Comment Cancel Reply


    Related Posts

    ಕಾಸರಗೋಡಿನಲ್ಲಿ “ಗುರುದಕ್ಷಿಣೆ” ಯಕ್ಷಗಾನ ತಾಳಮದ್ದಳೆ

    August 11, 2025

    ಅಜೆಕಾರು ಕಲಾಭಿಮಾನಿ ಬಳಗದ ತಾಳಮದ್ದಳೆ ಸರಣಿ ಉದ್ಘಾಟನೆ

    August 11, 2025

    ಬೆಂಗಳೂರಿನಲ್ಲಿ ಸುವರ್ಣ ಸಂಭ್ರಮ ಪ್ರಯುಕ್ತ ‘ಯಕ್ಷ ಹಾಸ್ಯ ರಸ’ | ಆಗಸ್ಟ್ 10

    August 9, 2025

    ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಯಕ್ಷಗಾನ ಗುರುಗಳ ಸಭೆ

    August 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.