Subscribe to Updates

    Get the latest creative news from FooBar about art, design and business.

    What's Hot

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ

    January 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶೇಣಿಯಲ್ಲಿ ಕುಂಬಳೆ ಉಪಜಿಲ್ಲಾ ಶಾಲಾ ‘ಕಲೋತ್ಸವಂ’ಗೆ ಚಾಲನೆ
    Bharathanatya

    ಶೇಣಿಯಲ್ಲಿ ಕುಂಬಳೆ ಉಪಜಿಲ್ಲಾ ಶಾಲಾ ‘ಕಲೋತ್ಸವಂ’ಗೆ ಚಾಲನೆ

    November 12, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂಬಳೆ : ಕುಂಬಳೆ ಉಪಜಿಲ್ಲಾ ಮಟ್ಟದ 63ನೇ ಶಾಲಾ ‘ಕಲೋತ್ಸವಂ’ ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ದಿನಾಂಕ 11 ನವೆಂಬರ್ 2024ರಂದು ಆರಂಭಗೊಂಡಿದ್ದು, ವೇದಿಕೆಯೇತರ ಸ್ಪರ್ಧೆಗಳು ಜರಗಲಿದೆ.

    ಶ್ರೀ ಶಾರದಾಂಬಾ ವಿದ್ಯಾಸಂಸ್ಥೆಯ ವ್ಯವಸ್ಥಾಪಕಿ ಶ್ರೀಮತಿ ಶಾರದಾ ವೈ. ಧ್ವಜಾರೋಹಣಗೈದರು. ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸೋಮಶೇಖರ ಜೆ.ಎಸ್., ಕುಂಬಳೆ ಉಪಜಿಲ್ಲಾ ಶಿಕ್ಷಣ ಅಧಿಕಾರಿ ಶಶಿಧರ, ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರನಾಥ ನಾಯಕ್, ಕಲೋತ್ಸವದ ಪ್ರಧಾನ ಸಂಚಾಲಕ ಶಾಸ್ತ ಕುಮಾರ್, ಸಹ ಸಂಚಾಲಕ ಶ್ರೀಶ ಕುಮಾರ್, ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ನಾಯಕ್ ಶೇಣಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮುಖ್ತಾರ್ ಅಲಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿನ್ಸಂಟ್ ಡಿಸೋಜ, ಸಂಘದ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಕನ್ನಡ ಅಧ್ಯಾಪಕ ಶ್ಯಾಮ ಪ್ರಸಾದ್ ನಿರೂಪಿಸಿದರು. ಕಲೋತ್ಸವದ ಉಪಯೋಗಕ್ಕೆ ಮುಳ್ಳೇರಿಯ ಶಾಲಾ ಸಾವಿತ್ರಿ ಟೀಚರ್ ಮತ್ತು ಮಕ್ಕಳು ತಯಾರಿಸಿದ ಬಟ್ಟೆಯ ಕೈ ಚೀಲವನ್ನು ಬಿಡುಗಡೆಗೊಳಿಸಲಾಯಿತು. ವೇದಿಕೇತರ ಸ್ಪರ್ಧೆಗಳಲ್ಲಿ ಸುಮಾರು 2000ದಷ್ಟು ಸ್ಪರ್ಧಾಳುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

    ಈ ಐತಿಹಾಸಿಕ ನೆಲದಲ್ಲಿ ನಡೆಯಲಿರುವ 5 ದಿನಗಳ ಕಲೋತ್ಸವದಲ್ಲಿ ದಿನಾಂಕ 18 ನವೆಂಬರ್ 2024, 19 ನವೆಂಬರ್ 2024 ಮತ್ತು 20 ನವೆಂಬರ್ 2024ರಂದು ಕುಂಬಳೆ ಉಪಜಿಲ್ಲೆಯ 93 ಶಾಲೆಗಳ ಸುಮಾರು 7000ಕ್ಕೂ ಹೆಚ್ಚು ವಿದ್ಯಾರ್ಥಿಗಳು 16 ವೇದಿಕೆಗಳಲ್ಲಿ 350ಕ್ಕೂ ಹೆಚ್ಚು ಪ್ರಕಾರಗಳಲ್ಲಿ ಪ್ರತಿಭಾ ಪ್ರದರ್ಶನವನ್ನು ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಉದ್ಘಾಟನೆಗೊಂಡ ‘ಕಾವಿ ಕೆಲಿಡೋಸ್ಕೋಪ್’ ಕಾವಿ ಭಿತ್ತಿಚಿತ್ರಗಳ ಕಲಾ ಪ್ರದರ್ಶನ
    Next Article ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಕಾರ್ಯಕ್ರಮ
    roovari

    Add Comment Cancel Reply


    Related Posts

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ

    January 3, 2026

    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04

    January 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.