Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ವಿ. ವಿ. ಯಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 27

    June 25, 2025

    ಉದ್ಘಾಟನೆಗೊಂಡ ತುಳು ನಾಟಕ ಕಾರ್ಯಾಗಾರ

    June 25, 2025

    ಕಾಳಿದಾಸಕಾವ್ಯ – ಕಥಾಸಪ್ತಾಹಃ | ಜೂನ್ 26

    June 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ಉದ್ಘಾಟನೆಗೊಂಡ ‘ಮೂಡಲಪಾಯ ಯಕ್ಷೋತ್ಸವ’
    Yakshagana

    ಬೆಂಗಳೂರಿನಲ್ಲಿ ಉದ್ಘಾಟನೆಗೊಂಡ ‘ಮೂಡಲಪಾಯ ಯಕ್ಷೋತ್ಸವ’

    June 25, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ಆಯೋಜಿಸಿದ ‘ಮೂಡಲಪಾಯ ಯಕ್ಷೋತ್ಸವ’ ಕಾರ್ಯಕ್ರಮವು ದಿನಾಂಕ 24 ಜೂನ್ 2025ರಂದು ಉದ್ಘಾಟನೆಗೊಂಡಿತು.

    ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪಡುವಲಪಾಯ ಮತ್ತು ಮೂಡಲಪಾಯ ಯಕ್ಷಗಾನಗಳನ್ನು ಸಮಾನವಾಗಿ ಪ್ರೋತ್ಸಾಹಿಸುತ್ತಿದೆ. ಬಯಲು ಸೀಮೆಯ ಯಕ್ಷಗಾನದ ಪ್ರಕಾರಗಳಾದ ಕೇಳಿಕೆ, ಘಟ್ಟದ ಕೋರೆ, ಮೂಡಲಪಾಯ ಮೊದಲಾದ ಪ್ರಕಾರಗಳ ಪ್ರಸರಣ, ಸಂರಕ್ಷಣೆಯ ಬಗ್ಗೆ ಕ್ರಿಯಾಶೀಲವಾದ ವಿಶೇಷ ಯೋಜನೆಗಳನ್ನು ಹಮ್ಮಿಕೊಳ್ಳಲಿದೆ. ಕರಾವಳಿಯ ಯಕ್ಷಗಾನ ಕ್ಷೇತ್ರದಲ್ಲಿ ಈಗ ವಿದ್ಯಾವಂತರು ಸಕ್ರಿಯರಾಗಿದ್ದಾರೆ. ಯುವ ಜನರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಅಂತಹ ಬೆಳವಣಿಗೆ ಮೂಡಲಪಾಯ ಯಕ್ಷಗಾನದಲ್ಲೂ ಆಗಬೇಕು. ಯುವಕರು, ವಿದ್ಯಾರ್ಥಿಗಳು ಈ ಕ್ಷೇತ್ರಕ್ಕೆ ಬರಬೇಕು. ಮೂಡಲಪಾಯ ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದರು ಮತ್ತು ವಿದ್ವಾಂಸರು ಮೂಡಲಪಾಯ ಕ್ಷೇತ್ರಕ್ಕೆ ಯುವಜನತೆ ಬರುವಂತೆ ಉತ್ತೇಜಿಸಬೇಕು. ಕರಾವಳಿಯ ಕರ್ನಾಟಕದಲ್ಲಿ ಯಕ್ಷ ಶಿಕ್ಷಣದ ಪರಿಕಲ್ಪನೆ ತುಂಬಾ ಯಶಸ್ವಿಯಾಗಿದೆ. ಕರಾವಳಿ ಭಾಗದಲ್ಲಿ ಸುಮಾರು 10 ಸಾವಿರ ಮಂದಿ ವಿದ್ಯಾರ್ಥಿಗಳು ಯಕ್ಷಗಾನ ಕಲಿಯುತ್ತಿದ್ದಾರೆ. ಮೂಡಲಪಾಯ ಯಕ್ಷಗಾನದಲ್ಲಿಯೂ ಯಕ್ಷ ಶಿಕ್ಷಣದ ಯೋಜನೆಯನ್ನು ಆರಂಭಿಸಬೇಕು” ಎಂದು ಹೇಳಿದರು.

    ಯಕ್ಷೋತ್ಸವವನ್ನು ಉದ್ಘಾಟಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಕೆ.ಎಂ. ಗಾಯತ್ರಿಯವರು ಮಾತನಾಡಿ, “ಪಡುವಲಪಾಯ ಮತ್ತು ಮೂಡಲಪಾಯ ಪ್ರಕಾರಗಳು ಯಕ್ಷಗಾನ ಕಲೆಯ ಎರಡು ಕಣ್ಣುಗಳಿದ್ದಂತೆ. ನಮ್ಮ ಸಂಸ್ಕೃತಿಯ ಪ್ರತಿಬಿಂಬಗಳಾದ ಈ ಕಲೆಗಳನ್ನು ಪ್ರೋತ್ಸಾಹಿಸುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕ್ರಿಯಾಶೀಲವಾಗಿ ಶ್ರಮಿಸುತ್ತದೆ” ಎಂದು ಹೇಳಿದರು.

    ವೇದಿಕೆಯ ಮೇಲೆ ಹಿರಿಯ ಮೂಡಲಪಾಯ ಕಲಾವಿದರು ಮತ್ತು ಕನ್ನಡ ರಾಜ್ಯೋತ್ಸವ ಹಾಗೂ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತರಾದ ಕಲ್ಮನೆ ಎ.ಎಸ್. ನಂಜಪ್ಪ, ಮೂಡಲಪಾಯ ಯಕ್ಷಗಾನ ವಿದ್ವಾಂಸ ಡಾ. ಚಿಕ್ಕಣ್ಣ ಯಣ್ಣೆಕಟ್ಟೆ, ಯಕ್ಷಗಾನ ಸಂಘಟಕರಾದ ಶ್ರೀನಿವಾಸ್ ಸಾಸ್ತಾನ ಉಪಸ್ಥಿತರಿದ್ದರು. ರಿಜಿಸ್ಟ್ರಾರ್ ನಮ್ರತ ಎನ್. ಸ್ವಾಗತಿಸಿದರು. ಅಕಾಡೆಮಿಯ ಸದಸ್ಯ ಸಂಚಾಲಕರಾದ ಪುಟ್ಟಸ್ವಾಮಿ ಎ.ಆರ್., ಸದಸ್ಯರಾದ ಪ್ರಥ್ವಿರಾಜ ಕವತ್ತಾರು, ವಿದ್ಯಾಧರ ರಾವ್ ಜಲವಳ್ಳಿ ಭಾಗವಹಿಸಿದ್ದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕುಕ್ಕುಂದೂರು ಅಯ್ಯಪ್ಪ ನಗರ ಸರಕಾರಿ ಶಾಲೆಯಲ್ಲಿ ಯಕ್ಷಗಾನ ಶಿಕ್ಷಣ ಆರಂಭ
    Next Article ಧಾರವಾಡದ ಮನೋಹರ ಗ್ರಂಥ ಮಾಲಾದಲ್ಲಿ ದತ್ತಿ ಉಪನ್ಯಾಸ | ಜೂನ್ 26
    roovari

    Add Comment Cancel Reply


    Related Posts

    ಮಂಗಳೂರು ವಿ. ವಿ. ಯಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 27

    June 25, 2025

    ಉದ್ಘಾಟನೆಗೊಂಡ ತುಳು ನಾಟಕ ಕಾರ್ಯಾಗಾರ

    June 25, 2025

    ಕಾಳಿದಾಸಕಾವ್ಯ – ಕಥಾಸಪ್ತಾಹಃ | ಜೂನ್ 26

    June 25, 2025

    ಡಾ. ಗಣನಾಥ ಎಕ್ಕಾರು ಇವರಿಗೆ ‘ಜೀಶಂಪ ರಾಜ್ಯ ಪ್ರಶಸ್ತಿ’

    June 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.