Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರಭಿ ಬೈಂದೂರು ರಜತಯಾನ ಚಾಲನೆ ಹಾಗೂ ಲಾಂಛನ ಅನಾವರಣ
    Literature

    ಸುರಭಿ ಬೈಂದೂರು ರಜತಯಾನ ಚಾಲನೆ ಹಾಗೂ ಲಾಂಛನ ಅನಾವರಣ

    September 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೈಂದೂರು : ಶಾರದಾ ವೇದಿಕೆಯಲ್ಲಿ ಸುರಭಿ (ರಿ.) ಬೈಂದೂರು ಸಂಸ್ಥೆಯ ಬೆಳ್ಳಿ ಹಬ್ಬದ ಪ್ರಯುಕ್ತ 25ರ ರಜತಯಾನ ಚಾಲನೆ ಹಾಗೂ ಲಾಂಛನ ಅನಾವರಣವು ದಿನಾಂಕ 14 ಸೆಪ್ಟೆಂಬರ್ 2024ರಂದು ನಡೆಯತು.

    ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯ ಸಾಹಿತಿ, ನಿವೃತ್ತ ಪ್ರಾಚಾರ್ಯ ಡಾ. ಜಯಪ್ರಕಾಶ್ ಮಾವಿನಕುಳಿ ಇವರು ಮಾತನಾಡಿ “ಮರೆಯುವ-ಮೆರೆಯುವ ಇಂದಿನ ಕಾಲಘಟ್ಟದಲ್ಲಿ ಉದಾತ್ತವಾಗಿ ಚಿಂತನೆ ಮಾಡುವ ಮನಸ್ಸುಗಳು ಬೇಕಾಗಿವೆ. ಮಕ್ಕಳಿಗೆ ನಿಜವಾಗಿಯೂ ಅಗತ್ಯವಿರುವ ಪ್ರೀತಿ, ವಿಶ್ವಾಸ, ವಿಶಾಲ ಮನೋಭಾವವನ್ನು ತುಂಬಲು ಮರೆತಿರುವ ನಾವುಗಳು ಪರಸ್ಪರ ನಂಬಿಕೆಯನ್ನು ಕಳೆದುಕೊಂಡು ಯಾಂತ್ರಿಕ ಜಗತ್ತಿನ ದಾಸರಾಗಿ ಬದುಕುತ್ತಿರುವುದು ವಿಪರ್ಯಾಸ. ಧಾವಂತದ ಬದುಕಿನಲ್ಲಿ ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಹಿಂದಿಕ್ಕಿ ಹೋಗುತ್ತಿದ್ದೇವೆ. ಆಧುನಿಕ ಬದುಕಿನ ಅಗತ್ಯತೆಗಳ ನಡುವೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಬದುಕು ಸುಂದರವಾಗುತ್ತದೆ. ಸಾಹಿತಿ, ಕಲಾವಿದರು, ಚಿಂತಕರಿಂದ ಊರಿಗೆ ಘನತೆ ಹೆಚ್ಚುತ್ತದೆಯೇ ಹೊರತು ಹಣವಂತರಿಂದ ಅಲ್ಲ ಎಂಬುದನ್ನು ಮರೆಯಬಾರದು” ಎಂದು ಹೇಳಿದರು.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಪೂರ್ವಾಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳ ಇವರು ಸುರಭಿ ರಜತಯಾನಕ್ಕೆ ಚಾಲನೆ ನೀಡಿ ಮಾತನಾಡಿ “ಸುರಭಿ ಸಂಸ್ಥೆ 25 ವರ್ಷಗಳನ್ನು ಪೂರೈಸುವುದರ ಜೊತೆಗೆ ದೇಶಿ ಚಿಂತನೆ ಹಾಗೂ ಪ್ರಾದೇಶಿಕತೆಗೆ ಚೈತನ್ಯ ನೀಡುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಸಾಂಸ್ಕೃತಿಕ ಕ್ಷೇತ್ರದ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡ ಸಂಸ್ಥೆಯ ತನ್ನ ಕಾರ್ಯಗಳ ಮೂಲಕ ಇನ್ನಷ್ಟು ಎತ್ತರಕ್ಕೇರಲಿ” ಎಂದರು.

    ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಸುಜಯೀಂದ್ರ ಹಂದೆ ಆಶಯ ನುಡಿಗಳನ್ನಾಡಿದರು. ರಂಗಸಂಸ್ಕೃತಿ ಕಾರ್ಕಳದ ಅಧ್ಯಕ್ಷ ನಿತ್ಯಾನಂದ ಪೈ ಅತಿಥಿಗಳಾಗಿದ್ದರು. ಸುರಭಿ ನಿರ್ದೇಶಕ ಗಣಪತಿ ಹೋಬಳಿದಾರ್, ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಎಸ್.ಎಲ್. ಭೈರಪ್ಪರವರ ‘ಪರ್ವ’ ಕಾದಂಬರಿಯ ಒಂದು ವಿಶ್ಲೇಷಣೆ | ಸೆಪ್ಟೆಂಬರ್ 19
    Next Article ಧಾರವಾಡದಲ್ಲಿ ಎರಡು ದಿನಗಳ ‘ಸ್ವರಾಲಾಪ’ ಮಿನಿ ಸಂಗೀತ ಸಮ್ಮೇಳನ | ಸೆಪ್ಟೆಂಬರ್ 21 ಮತ್ತು 22
    roovari

    Comments are closed.

    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.