Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಬಡಗುಪೇಟೆಯಲ್ಲಿ ಸಾಂಝಿ ಕಲಾಕೃತಿಗಳ ಪ್ರದರ್ಶನದ ಉದ್ಘಾಟನೆ
    Drawing

    ಉಡುಪಿಯ ಬಡಗುಪೇಟೆಯಲ್ಲಿ ಸಾಂಝಿ ಕಲಾಕೃತಿಗಳ ಪ್ರದರ್ಶನದ ಉದ್ಘಾಟನೆ

    January 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ವತಿಯಿಂದ ಮಧುರಂ ವೈಟ್ ಲೋಟಸ್ ಹೋಟೆಲಿನ ಸಹಯೋಗದೊಂದಿಗೆ ಸಂಯೋಜಿಸಿದ ‘ಬೃಂದಾವನದಿಂದ ಉಡುಪಿಯೆಡೆಗೆ’ ಮಥುರಾ ಸಾಂಝಿ ಕಲಾಕೃತಿಗಳ ಪ್ರದರ್ಶನವು ದಿನಾಂಕ 22 ಜನವರಿ 2025ರಂದು ಬಡಗುಪೇಟೆಯಲ್ಲಿ ಉದ್ಘಾಟನೆಗೊಂಡಿತು.

    ಈ ಕಲಾ ಪ್ರದರ್ಶನವನ್ನು ಉದ್ಘಾಟಿಸಿದ ಆರ್ಕಿಟೆಕ್ಟ್ ಶ್ರೀಜಾ ಜಯಕುಮಾರ್ ಇವರು ಮಾತನಾಡಿ “ಭಾರತೀಯ ಕಲೆಯಲ್ಲಿಯೇ ಶ್ರೇಷ್ಠವಾದ ಹಾಗೂ ರಾಧೆಯ ಪ್ರೀತಿಯೊಂದಿಗೆ ಬೆಸೆದಿರುವ ಸಾಂಝಿ ಕಲೆಯನ್ನು ಉಡುಪಿಯ ಕಲಾ ರಸಿಕರಿಗೆ ಉಣಬಡಿಸುತ್ತಿರುವ ಭಾಸ ಗ್ಯಾಲರಿಯ ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಇಂದಿನ ಕಟ್ಟಡಗಳ ಒಳಾಂಗಣ ವಿನ್ಯಾಸದಲ್ಲಿ ಈ ತೆರನಾದ ಕಲೆಗಳ ಮಹತ್ವ ಉಡುಪಿಯ ಕಲಾಪ್ರಿಯರಲ್ಲಿ ಒಂದು ಹೊಸ ಸಂಚಲನವನ್ನೇ ಸೃಷ್ಟಿಸಬಹುದು. ನಾವೆಲ್ಲ ಸೇರಿಕೊಂಡು ಈ ದೇಶೀಯ ಕಲೆಗೆ ಪ್ರೋತ್ಸಾಹಿಸೋಣ” ಎಂಬುದಾಗಿ ಆಶಿಸಿದರು.

    ರಾಷ್ಟ್ರಪ್ರಶಸ್ತಿ ಪುರಸ್ಕತ ಕಲಾವಿದರಾದ ಶ್ರೀ ರಾಮ್ ಸೋನಿಯವರು ಸಾಂಝಿ ಕಲೆಯ ಬೆಳವಣಿಗೆ ಹಾಗೂ ತಮ್ಮ ಕಲಾಕೃತಿಗಳಲ್ಲಿ ಕಂಡುಕೊಳ್ಳುತ್ತಿರುವ ನವೀನ ಪ್ರಯೋಗಗಳ ಬಗೆಗೆ ವಿವರಿಸಿದರು. ಚಿನ್ನದ ಲೇಪದೊಂದಿಗೆ ಸಾಂಝಿ ಕಲೆಯ ನಿರ್ಮಾಣ ಸೋನಿಯವರ ವಿಶೇಷತೆ. ಸುಮಾರು ನಲವತ್ತಕ್ಕೂ ಮಿಕ್ಕಿ ಪೇಪರ್‌ ಕಟ್ಟಿಂಗ್ ಕಲಾಕೃತಿಗಳೊಂದಿಗೆ ಚಿನ್ನ ಹಾಗೂ ಬೆಳ್ಳಿಯ ತೆಳುವಾದ ಪದರದ ಮೇಲೆ ಕೃಷ್ಣನ ವಿವಿಧ ಲೀಲೆಗಳನ್ನು ದರ್ಶಿಸಿರುವ ಕಲಾಕೃತಿಗಳೂ ಪ್ರದರ್ಶನದಲ್ಲಿವೆ.

    ಕಲಾಪ್ರದರ್ಶನವು ದಿನಾಂಕ 26 ಜನವರಿ 2025ರವರೆಗೆ ಅಪರಾಹ್ನ 3-00 ಗಂಟೆಯಿಂದ ಸಂಜೆ 7-00 ಗಂಟೆ ತನಕ ಸಾರ್ವಜನಿಕ ವೀಕ್ಷಣೆಗೆ ತೆರೆದಿರಲಿದ್ದು, ಇದೇ ಸಂದರ್ಭದಲ್ಲಿ ಶನಿವಾರ ಹಾಗೂ ಭಾನುವಾರಗಳಂದು ‘ಸಾಂಝಿ ಕಲೆ’ ಹಾಗೂ ನೀರಿನ ಮೇಲೆ ನಿರ್ಮಿಸುವ ರಂಗೋಲಿ ಕಲೆಯಾದ ‘ಜಲ ಸಾಂಝಿ’ ಕಲೆಯ ಕಾರ್ಯಾಗಾರಗಳು ನೋಂದಾಯಿಸಿದವರಿಗಾಗಿ ಬಡಗುಪೇಟೆಯ ಗ್ಯಾಲರಿಯಲ್ಲಿ ನಡೆಯಲಿವೆ ಎಂಬುದಾಗಿ ಕಾರ್ಯಕ್ರಮ ಸಂಯೋಜಕರಾದ ಡಾ. ಜನಾರ್ದನ ಹಾವಂಜೆಯವರು ಮಾಹಿತಿಯಿತ್ತರು. ಫೌಂಡೇಶನ್‌ನ ಅಧ್ಯಕ್ಷರಾದ ಹಾವಂಜೆ ಮಂಜುನಾಥ ರಾವ್ ಉಪಸ್ಥಿತರಿದ್ದರು. ಆಶ್ಲೇಷ್‌ ಆರ್. ಭಟ್‌ ಧನ್ಯವಾದವಿತ್ತರು.

    drawing exhibition
    Share. Facebook Twitter Pinterest LinkedIn Tumblr WhatsApp Email
    Previous Articleಅಖಿಲ ಭಾರತ ಸಾಹಿತ್ಯ ಪರಿಷತ್ತಿನ ಕವಿಗೋಷ್ಠಿಗೆ ಕವಿತೆಗಳಿಗೆ ಆಹ್ವಾನ
    Next Article ಕೆಯ್ಯೂರು ಕೆ.ಪಿ.ಎಸ್. ಸ್ಕೂಲ್ ಆವರಣದಲ್ಲಿ ‘ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ -20 | ಜನವರಿ 25
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    ರಾಜೇಶ್ವರಿ ಕುಡುಪು ಇವರ ‘ಕಲಾಸಂಪದ’ ಪುಸ್ತಕ ಬಿಡುಗಡೆ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.