Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ‘ಗಮಕ ಶ್ರಾವಣ’ದ ದ್ವಿತೀಯ ಸಮಾರಂಭದ ಉದ್ಘಾಟನೆ
    Literature

    ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ‘ಗಮಕ ಶ್ರಾವಣ’ದ ದ್ವಿತೀಯ ಸಮಾರಂಭದ ಉದ್ಘಾಟನೆ

    August 22, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂರುಕಜೆ : ‘ಗಮಕ ಶ್ರಾವಣ’ದ ಸರಣಿ ಕಾರ್ಯಕ್ರಮಗಳ ದ್ವಿತೀಯ ಸಮಾರಂಭದ ಉದ್ಘಾಟನೆಯು ದಿನಾಂಕ 09 ಆಗಸ್ಟ್ 2024ರಂದು ಮೂರುಕಜೆಯ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ನಡೆಯಿತು.

    ಈ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿಟ್ಲ ಪಡ್ನೂರು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷೆ ಶ್ರೀಮತಿ ರೇಶ್ಮ ಶಂಕರಿ ಬಲಿಪಗುಳಿ ಇವರು ಮಾತನಾಡಿ “ಗಮಕ ಕಲೆ ಕನ್ನಡ ಸಂಸ್ಕೃತಿಯ ದ್ಯೋತಕ. ಅದು ಅತ್ಯಂತ ಪ್ರಾಚೀನವಾದುದು. ಭಾರತೀಯ ಸಂಸ್ಕೃತಿಯನ್ನು ಜನರಿಗೆ ಯಥಾವತ್ತಾಗಿ ಪರಿಚಯಿಸುವುದಕ್ಕೆ ಇದು ಬಹಳ ಉತ್ತಮವಾದ ಮಾಧ್ಯಮ. ಗಮಕ ಕಲಾಪರಿಷತ್ತು ಮತ್ತು ಸಿರಿಗನ್ನಡ ವೇದಿಕೆಯ ಕೇರಳ ಗಡಿನಾಡ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ವಕಾಲದಲ್ಲಿ ವಿಶೇಷವಾಗಿ ರಾಮಾಯಣದ ಪುಣ್ಯಕಥೆಯನ್ನು ಪ್ರಚಾರಗೊಳಿಸಿ ಜನರಲ್ಲಿ ಸಚ್ಚಾರಿತ್ರ್ಯವನ್ನು ಬೆಳೆಸುವ ಮಹತ್ಕಾರ್ಯವನ್ನು ಮಾಡುತ್ತಿರುವುದು ಸ್ತುತ್ಯರ್ಹವಾಗಿದೆ” ಎಂದು ಅಭಿಪ್ರಾಯಪಟ್ಟರು.

    ಸಮಾರಂಭದ ಅಧ್ಯಕ್ಷತೆಯನ್ನು ಗಮಕಕಲಾ ಪರಿಷತ್ತಿನ ಅಧ್ಯಕ್ಷರಾದ ಟಿ. ಶಂಕರನಾರಾಯಣ ಭಟ್ಟರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗುರುಕುಲದ ಅಧಿಕಾರಿಗಳಾದ ಶ್ರೀ ಜಗನ್ನಾಥ್ ಅವರು “ಭಾರತೀಯ ಸಂಸ್ಕೃತಿಯನ್ನು ಸಾರುವ ಮಹಾಕಾವ್ಯಗಳನ್ನು ಸಾಧ್ಯವಿದ್ದಷ್ಟೂ ಪ್ರಚಾರಗೊಳಿಸಬೇಕು” ಎಂದು ಕರೆಯನ್ನಿತ್ತರು.

    “ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಅವಳಿ ಪುತ್ರರಾದ ಕುಶ ಲವರು ಜನಿಸಿದುದು ಶ್ರಾವಣ ಮಾಸದಲ್ಲಿ. ಅವರು ಆದಿ ಗಮಕಿಗಳು ಎಂಬ ನಂಬಿಕೆ ನಮ್ಮದು. ಆದುದರಿಂದ ಅವರ ದಿವ್ಯಸ್ಮರಣೆಗೋಸ್ಕರವಾಗಿ ಶ್ರಾವಣ ಮಾಸದಲ್ಲಿ ನಾಡಿನ ವಿವಿಧ ಸಾಂಸ್ಕೃತಿಕ ಕೇಂದ್ರಗಳಲ್ಲಿ ‘ಗಮಕ ಶ್ರಾವಣ’ ಎಂಬ ಹೆಸರಿನಲ್ಲಿ ರಾಮಾಯಣ ಮಹಾಕಾವ್ಯದಿಂದಾಯ್ದ ಭಾಗಗಳ ವಾಚನ ವ್ಯಾಖ್ಯಾನಗಳನ್ನು ನಡೆಸುತ್ತಾ ಬರುತ್ತಿದ್ದೇವೆ” ಎಂದು ಸಿರಿಗನ್ನಡ ವೇದಿಕೆಯ ಅಧ್ಯಕ್ಷರೂ ಗಮಕ ಪರಿಷತ್ತಿನ ಕಾರ್ಯದರ್ಶಿಯೂ ಆಗಿರುವ ಶ್ರೀ ವಿ.ಬಿ. ಕುಳಮರ್ವ ಪ್ರಸ್ತಾವನೆಯಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ತೊರವೆ ರಾಮಾಯಣದಿಂದಾಯ್ದ ವಿಶ್ವಾಮಿತ್ರರ ಯಜ್ಞರಕ್ಷಣೆಗೆ ಸಂಬಂಧಿಸಿದ ಭಾಗವನ್ನು ಗಮಕಿಗಳಾದ ನಿವೃತ್ತ ಪ್ರಾಂಶುಪಾಲ ಶ್ರೀ ಉಂಡೆಮನೆ ವಿಶ್ವೇಶ್ವರ ಭಟ್ಟರು ಸುಶ್ರಾವ್ಯವಾಗಿ ವಾಚನ ಮಾಡಿ, ನಿವೃತ್ತ ಪ್ರಾಂಶುಪಾಲ ಪ್ರೊ. ಕುಳಮರ್ವ ಗಣಪತಿ ಭಟ್ಟರು ಮನೋಜ್ಞವಾಗಿ ವ್ಯಾಖ್ಯಾನ ಮಾಡಿದರು. ವಿ.ಬಿ. ಕುಳಮರ್ವರು ಭಾಮಿನೀ ಷಟ್ಪದಿಯಲ್ಲಿ ರಚಿಸಿದ ಗಮಕ ಗೀತೆಯನ್ನು ಶ್ರೀ ಉಂಡೆಮನೆ ವಿಶ್ವೇಶ್ವರ ಭಟ್ಟರು ಹಾಡಿ ಪ್ರಾರ್ಥನೆ ಮಾಡಿದರು. ಗುರುಕುಲದ ಮಾತೆಯರು ಹಾಗೂ ವಿದ್ಯಾರ್ಥಿನಿಯರು ಸ್ವಾಗತ ಹಾಗೂ ಧನ್ಯವಾದ ಕಾರ್ಯಗಳನ್ನು ನೆರವೇರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ತಾಳ ಭರತನಾಟ್ಯಂ ಕಾರ್ಯಾಗಾರ ಮತ್ತು ನೃತ್ಯ ಪ್ರದರ್ಶನ | ಆಗಸ್ಟ್ 24 ಮತ್ತು 25
    Next Article ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ | ಆಗಸ್ಟ್ 25
    roovari

    Comments are closed.

    Related Posts

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.