ಕಾರ್ಕಳ : ನಮ್ಮ ಕರಾವಳಿಯ ಆರಾಧನಾ ಕಲೆಯಾದ ಯಕ್ಷಗಾನವನ್ನು ಮುಂದಿನ ಜಾನಂಗಕ್ಕೆ ಪರಿಚಯಿಸುವ ಉದ್ದೇಶದಿಂದ ಕಾರ್ಕಳದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾಗಿ ಯಕ್ಷ ಶಿಕ್ಷಣವನ್ನು ಕಳೆದ 13 ವರ್ಷಗಳಿಂದ ನೀಡುತ್ತಾ ಬಂದಿದ್ದು, ಇದೀಗ 14ನೇ ವರ್ಷದಲ್ಲಿ ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸಹಯೋಗದೊಂದಿಗೆ ಕಾರ್ಕಳದಲ್ಲಿ ಹತ್ತು ವಿದ್ಯಾ ಸಂಸ್ಥೆಗಳಲ್ಲಿ ಉಚಿತವಾಗಿ ಯಕ್ಷ ಶಿಕ್ಷಣ ನೀಡುತ್ತಿದೆ.
ನಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ‘ಯಕ್ಷಗಾನ ಶಿಕ್ಷಣ ಅಭಿಯಾನ’ವು ದಿನಾಂಕ 21 ಜೂನ್ 2025ರ ಶನಿವಾರದಂದು ಉದ್ಘಾಟನೆಗೊಂಡಿತು. ಯಕ್ಷ ಕಲಾರಂಗದ ಅಧ್ಯಕ್ಷರಾದ ವಿಜಯ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಲ್ಲೂರಿನ ಉದ್ಯಮಿ ಸತೀಶ್ ಶೆಟ್ಟಿಯವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಲಾರಂಗದ ಕೋಶಾದ್ಯಕ್ಷ ಶ್ರೀ ವರ್ಮ ಅಜ್ರಿ, ಯಕ್ಷ ಗುರು ಮಹಾವೀರ ಪಾಂಡಿ, ಉಪಾಧ್ಯಕ್ಷ ಶಿವಸುಭ್ರಹ್ಮಣ್ಯ ಭಟ್, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪ್ರಸಾದ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಅಧ್ಯಾಪಕ ನಾಗೇಶ್ ಇವರು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು. ಯಕ್ಷ ನಾಟ್ಯ ಗುರು ಮಹಾವೀರ ಪಾಂಡಿಯವರು ಯಕ್ಷಗಾನ ತರಗತಿ ನಡೆಸಿದರು.