Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ‘ಇಂದ್ರಜಿತು’ ಯಕ್ಷಗಾನ ತಾಳಮದ್ದಳೆ
    Kannada

    ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ‘ಇಂದ್ರಜಿತು’ ಯಕ್ಷಗಾನ ತಾಳಮದ್ದಳೆ

    March 3, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಈಶ್ವರಮಂಗಲ : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಮಹಿಳಾ ಸದಸ್ಯೆಯರಿಂದ ‘ಇಂದ್ರಜಿತು’ ಯಕ್ಷಗಾನ ತಾಳಮದ್ದಳೆ ದಿನಾಂಕ 01 -ಮಾರ್ಚ್ -2025ರಂದು ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಪ್ರಯುಕ್ತ ದೇವಾಲಯದ ಸಭಾಭವನದಲ್ಲಿ ಜರಗಿತು.
    ಯಕ್ಷಗುರು ವಿಶ್ವವಿನೋದ ಬನಾರಿಯವರ ನಿರ್ದೇಶನದಲ್ಲಿ ರಮಾನಂದ ರೈ ದೇಲಂಪಾಡಿ ಅವರ ಸಂಯೋಜನೆಯೊಂದಿಗೆ ನಾರಾಯಣ ದೇಲಂಪಾಡಿ ಅವರ ಅರ್ಥಸಾಹಿತ್ಯ ಕೃತಿಯನ್ನೊಳಗೊಂಡ ಈ ಯಕ್ಷಗಾನ ತಾಳಮದ್ದಳೆಯಲ್ಲಿ ಭಾಗವತರಾಗಿ ಕುಮಾರಿ ರಚನಾ ಚಿದ್ಗಲ್‌ ಹಾಗೂ ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ ಅವರು ಹಾಡಿ ರಂಜಿಸಿದರು.
    ಚೆಂಡೆ, ಮದ್ದಳೆ ವಾದನದಲ್ಲಿ ವಿಷ್ಣು ಶರಣ ಬನಾರಿ, ಶ್ರೀಧರ ಆಚಾರ್ಯ ಈಶ್ವರ ಮಂಗಲ, ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ ಮತ್ತು ಚಕ್ರತಾಳದಲ್ಲಿ ಮಾಷ್ಟರ್‌ ಶ್ರೀದೇವ್‌ ಆಚಾರ್ಯ ಸಹಕರಿಸಿದರು.
    ಅರ್ಥಧಾರಿಗಳಾಗಿ ಶ್ರೀಮತಿಯರಾದ ಸರಿತಾ ರಮಾನಂದ ರೈ ದೇಲಂಪಾಡಿ, ಶೀಲಾ ಹೇಮನಾಥ ಕೇದೆಗಡಿ, ಪವಿತ್ರಾ ದಿವಾಕರ ಗೌಡ ಮುದಿಯಾರು, ಪ್ರೇಮಾ ಮನೋಹರ ಬಂದ್ಯಡ್ಕ, ಜಲಜಾಕ್ಷಿ, ಸತೀಶ್‌ ರೈ ಬೆಳ್ಳಿಪ್ಪಾಡಿ, ಸುಮಲತಾ ಉದಯಕುಮಾರ್‌ ದೇಲಂಪಾಡಿ, ಸುಜಾತ ಮೋಹನದಾಸ ರೈ ದೇಲಂಪಾಡಿ, ಶಾಂತಾಕುಮಾರಿ ದೇಲಂಪಾಡಿ ಹಾಗೂ ಕುಸುಮಾ ಜಯಪ್ರಕಾಶ್‌ ಕುತ್ತಿಮುಂಡ ಈ ಪ್ರತಿಭಾನ್ವಿತ ಮಹಿಳಾ ಮಾತೆಯರು ಪ್ರಸ್ತುತ ಪಡಿಸಿದ ಅರ್ಥಗಾರಿಕೆ ಜನಮೆಚ್ಚುಗೆ ಗಳಿಸಿತು.
    ದೇವಾಲಯದ ಆಡಳಿತ ಮಂಡಳಿಯವರು ಸ್ವಾಗತಿಸಿ, ಕಾರ್ಯಕ್ರಮದ ಪ್ರಾಯೋಜಕರಾದ ರಾಮನಾಯ್ಕ ದೇಲಂಪಾಡಿಯವರು ಧನ್ಯವಾದ ಸಮರ್ಪಿಸಿದರು.

    kannada yakshagana
    Share. Facebook Twitter Pinterest LinkedIn Tumblr WhatsApp Email
    Previous Article‘ನಟನ’ ಮೈಸೂರಿನ ‘ರಜಾ ಮಜಾ ಮಕ್ಕಳ ಬೇಸಿಗೆ ಶಿಬಿರ 2025’ರ ಪ್ರವೇಶ ಪ್ರಕ್ರಿಯೆ | ಮಾರ್ಚ್ 30
    Next Article ಬನಾರಿಯಲ್ಲಿ ‘ಕೀರಿಕ್ಕಾಡು ಮಾಸ್ತರ್’ ವಿಷ್ಣು ಭಟ್ಟರ ಬದುಕು- ಬರಹದ ಕುರಿತ ಸ್ಮರಣಾಂಜಲಿ ಕಾರ್ಯಕ್ರಮ
    roovari

    Add Comment Cancel Reply


    Related Posts

    ಕರ್ನಾಟಕ ಯಕ್ಷ ಭಾರತಿಯಿಂದ ಸೂರ್ಯನಾರಾಯಣ ಭಟ್ ಸನ್ಮಾನ

    May 23, 2025

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.