Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಇಂಟಾಕ್ ವತಿಯಿಂದ ಮಂಗಳೂರು ಹಳೆ ಬಂದರು ಪ್ರದೇಶ ಮಾರ್ಗವಾಗಿ ‘ಹೆರಿಟೇಜ್ ವಾಕ್’
    Heritage

    ಇಂಟಾಕ್ ವತಿಯಿಂದ ಮಂಗಳೂರು ಹಳೆ ಬಂದರು ಪ್ರದೇಶ ಮಾರ್ಗವಾಗಿ ‘ಹೆರಿಟೇಜ್ ವಾಕ್’

    April 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ & ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಅಧ್ಯಾಯವು 2023ರ ಏಪ್ರಿಲ್ 18 ಮಂಗಳವಾರದಂದು ವಿಶ್ವ ಪರಂಪರೆ ದಿನವನ್ನು ಆಚರಿಸುವ ಅಂಗವಾಗಿ ನಗರದ ಹಳೆ ಬಂದರು ಪ್ರದೇಶದ ಮೂಲಕ ‘ಹೆರಿಟೇಜ್ ವಾಕ್’ ಅನ್ನು ಆಯೋಜಿಸಿತು. ಕಲಾವಿದರು, ವಾಸ್ತುಶಿಲ್ಪಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಆಸಕ್ತರು ಪಾರಂಪರಿಕ ನಡಿಗೆಯಲ್ಲಿ ಭಾಗವಹಿಸಿದರು.

    ಬೆಳಗ್ಗೆ 7:10ಕ್ಕೆ ಗುರುಪುರ ನದಿ ದಂಡೆಯಲ್ಲಿರುವ ಹಳೆ ಬಂದರಿನಿಂದ ಆರಂಭವಾದ ಪಾದಯಾತ್ರೆಗೆ ಪ್ರಾಸ್ತಾವಿಕವಾಗಿ ಇಂಟಾಕ್ ಮಂಗಳೂರು ಅಧ್ಯಾಯದ ಸಂಚಾಲಕ ಸುಭಾಸ್ ಚಂದ್ರ ಬಸು ಪಾರಂಪರಿಕ ನಡಿಗೆಯ ಮಹತ್ವವನ್ನು ಪರಿಚಯಿಸಿದರು. 1983ರಿಂದ ವಿಶ್ವ ಪರಂಪರೆ ದಿನವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಸಂರಕ್ಷಣಾ ವಾಸ್ತುಶಿಲ್ಪಿ ಕ್ಯಾರೊಲಿನ್ ಡಿಸೋಜಾ ಅವರು ರೋಮನ್ ಅವಧಿಯ ಆರಂಭಿಕ ಉಲ್ಲೇಖದಿಂದ ನಂತರದ ಬ್ರಿಟಿಷ್ ಆಳ್ವಿಕೆಯ ಹಂತದವರೆಗೆ ಬಂದರಿನ ಐತಿಹಾಸಿಕ ವಿಕಾಸವನ್ನು ವಿವರಿಸಿದರು.

    ‘ಕಸ್ಟಮ್ ಹೌಸ್’ ಮೊದಲು ಭೇಟಿ ನೀಡಿದ ಸ್ಥಳ. ಕಸ್ಟಮ್ಸ್ ಅಧೀಕ್ಷಕರಾದ ರಾಮ್ ಅವತಾರ್ ಮೀನಾ ಅವರು 2019ರಲ್ಲಿ ನವೀಕರಣಗೊಂಡ 140ವರ್ಷಗಳ ಹಳೆಯ ಕಟ್ಟಡಕ್ಕೆ ಸಂದರ್ಶಕರನ್ನು ಸ್ವಾಗತಿಸಿದರು. ನಂತರ ನಡಿಗೆಯು ವ್ಯಾಪಾರ ಪ್ರದೇಶ ಮತ್ತು ವ್ಯಾಪಾರಿಗಳ ಸರಕು ಶೇಖರಣಾ ಕಟ್ಟಡಗಳ (ಗೋಡೌನ್‌ಗಳ) ಮೂಲಕ ಸಾಗಿತು. ಭವ್ಯವಾದ ವಾಸ್ತುಶಿಲ್ಪ ಮತ್ತು ಸೊಗಸಾದ ಮರಗೆಲಸದೊಂದಿಗೆ ಕಟ್ಟಲಾದ ಎರಡು ಐತಿಹಾಸಿಕ ಮಸೀದಿಗಳಾದ ಕಚ್ಚಿ ಮೆಮೋನ್ ಮಸೀದಿ ಮತ್ತು ಜೀನತ್ ಬಕ್ಷ್ ಜುಮಾ ಮಸೀದಿಗಳಿಗೆ ಭೇಟಿ ನೀಡಲಾಯಿತು. 9-15ರ ಸುಮಾರಿಗೆ ಸ್ಥಳೀಯ ವ್ಯಾಪಾರಿ ವರ್ಗದವರು ಆರಾಧಿಸುವ ಜೈನ ಬಸದಿಯಲ್ಲಿ ನಡಿಗೆ ಮುಕ್ತಾಯವಾಯಿತು.

    ವಿವರಗಳಿಗಾಗಿ, ಸಂಪರ್ಕಿಸಿ:
    ಸುಭಾಸ್ ಚಂದ್ರ ಬಸು, ಇಂಟಾಕ್ ಸಂಚಾಲಕರು: 8762368048
    ರಾಜೇಂದ್ರ ಕೇದಿಗೆ: 9480014812

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ತುಳು ಕೂಟ ಕುಡ್ಲದಿಂದ ‘ಬಿಸು ಪರ್ಬ’ – ‘ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಪ್ರದಾನ’
    Next Article ರಾಜಧಾನಿ ಬೆಂಗಳೂರಿನಲ್ಲಿ ‘ನೃತ್ಯ ಸಿರಿ’
    roovari

    Add Comment Cancel Reply


    Related Posts

    ಬನವಾಸಿಯಲ್ಲಿ ವೈಭವದ ಕದಂಬೋತ್ಸವ | ಏಪ್ರಿಲ್ 12

    February 27, 2025

    “Sri Krishna Leela Amrutham” Transcends audiences at Bharat Nritya Utsav 2025, Chennai

    February 5, 2025

    ಮಂಗಳೂರಿನಲ್ಲಿ ಗಾಯಕಿ ಸೂರ್ಯಗಾಯತ್ರಿ ‘ರಾಮಂ ಭಜೇ’ | ಜ. 12ರಂದು

    January 11, 2025

    ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04

    December 31, 2024

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.