Subscribe to Updates

    Get the latest creative news from FooBar about art, design and business.

    What's Hot

    ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

    June 24, 2025

    ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ಉದ್ಘಾಟನೆ

    June 24, 2025

    ಕ.ಸಾ.ಪ.ದ ಬೆಳ್ತಂಗಡಿ ತಾಲೂಕು ಘಟಕದಿಂದ ಉಪನ್ಯಾಸಮಾಲೆ | ಜೂನ್ 26

    June 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆ
    Music

    ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆ

    June 23, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆಯನ್ನು ದಿನಾಂಕ 21 ಜೂನ್ 2025ರಂದು ಸಂಭ್ರಮದಿಂದ ಆಚರಿಸಲಾಗಿತ್ತು.
    ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಅಂತಾರಾಷ್ಟ್ರೀಯ ಯೋಗ ತೀರ್ಪುಗಾರರಾದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎನ್ನುವ ಧ್ಯೇಯದೊಂದಿಗೆ ಯೋಗವನ್ನು ಸರ್ವರೂ ತಮ್ಮ ಜೀವನದಲ್ಲಿ ಅಭ್ಯಾಸ ಮಾಡಿಕೊಳ್ಳುವ ಮೂಲಕ ಆರೋಗ್ಯವಂತರಾಗಬೇಕು. ವಿದ್ಯಾರ್ಥಿಗಳು ಯೋಗವನ್ನು ಪ್ರತಿನಿತ್ಯ ಅಭ್ಯಾಸ ಮಾಡುವುದರಿಂದ ಮನಸ್ಸನ್ನು ಏಕಾಗ್ರತೆಯಲ್ಲಿಡಲು ಸಾಧ್ಯ. ವಿಚಾರಗಳನ್ನು, ಚಿಂತನೆಗಳನ್ನು ಸುಲಭವಾಗಿ ತಿಳಿಯಲು ಸಹಕಾರಿಯಾಗುತ್ತದೆ. ಯೋಗ ನಮ್ಮ ಶರೀರ-ಮನಸ್ಸುಗಳಲ್ಲಿ ನವಚೈತನ್ಯವನ್ನು ಮೂಡಿಸುತ್ತದೆ. ಆ ನಿಟ್ಟಿನಲ್ಲಿ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜು ವಿದ್ಯಾರ್ಜನೆಯ ಜೊತೆಗೆ ಪ್ರತಿನಿತ್ಯ ಯೋಗವನ್ನೂ ಅಭ್ಯಾಸ ಮಾಡಿಸುತ್ತಿರುವುದು ಶ್ಲಾಘನೀಯ” ಎಂದು ನುಡಿದರು.
    ಯುವ ಸಿತಾರ್ ಕಲಾವಿದರಾದ ಭಾರತ ಮತ್ತು ಅಂತಾರಾಷ್ಟೀಯ ಮಟ್ಟದಲ್ಲಿ ಹಲವಾರು ಯಶಸ್ವಿ ಸಂಗೀತ ಪ್ರದರ್ಶನ ನೀಡಿರುವ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ ಮತ್ತು ತಂತ್ರಜ್ಞಾನದ ವಿಭಾಗದ ನಿರ್ದೇಶಕರಾಗಿರುವ ಶ್ರೀ ಅಂಕುಶ್ ಎನ್. ನಾಯಕ್ ಕಾರ್ಯಕ್ರಮದುದ್ದಕ್ಕೂ ಸಿತಾರ ವಾದನವನ್ನು ನುಡಿಸುವ ಮೂಲಕ ವಿಶ್ವ ಸಂಗೀತ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು. ಯೋಗ ಕಾರ್ಯಕ್ರಮದೊಂದಿಗೆ ಸಿತಾರ್ ವಾದನ ನುಡಿಸುವ ಮೂಲಕ ಹಲವು ರಾಗಗಳನ್ನು ಪ್ರಸ್ತುತಪಡಿಸಿದರು. ಯೋಗದೊಂದಿಗೆ ಸಂಗೀತದ ಸಮ್ಮಿಲನಗೊಂಡು ಒಂದು ಶಾಂತ ನಿರ್ಮಲ ವಾತಾವರಣವನ್ನು ಸೃಷ್ಟಿಸಿತು.
    “ಯೋಗ ಮತ್ತು ಸಂಗೀತ ಇವೆರಡೂ ನಮ್ಮ ದೇಹ ಮತ್ತು ಮನಸ್ಸುನ್ನು ಸಂತೋಷಗೊಳಿಸುವ ಹಾಗೂ ತೃಪ್ತಿಗೊಳಿಸುವ ಮಾಧ್ಯಮ. ಯೋಗ ಮತ್ತು ಸಂಗೀತದ ಮುಖಾಂತರ ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಪಡೆಯಬಹುದು” ಎಂದು ಸಿತಾರ್ ವಾದಕ ಶ್ರೀ ಅಂಕುಶ್ ಎನ್ ನಾಯಕ್ ಹೇಳಿದರು.
    ವೇದಿಕೆಯಲ್ಲಿ ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಅವರ ಶಿಷ್ಯವೃಂದ ಸಂಸ್ಥೆಯ ದ್ವಿತೀಯ ಪಿ. ಯು. ಸಿ. ವಿದ್ಯಾರ್ಥಿಗಳಿಗೆ ಹಲವು ಯೋಗ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು. ಅಂತೆಯೇ ಕಾಲೇಜಿನ ವಿದ್ಯಾರ್ಥಿಗಳು ಯೋಗವನ್ನು ಪ್ರದರ್ಶಿಸಿದರು.
    ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಮಚಂದ್ರ ಭಟ್, ಕಾರ್ಯಕ್ರಮ ಸಂಯೋಜಕಿ ಶ್ರೀಮತಿ ರಮ್ಯ ಅನಿಲ್ ಸೇರಿದಂತೆ ಇತರ ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಹಿಂದಿ ವಿಭಾಗದ ಉಪನ್ಯಾಸಕರಾದ ಶ್ರೀ ಪ್ರಮೋದ್ ಕಿಣಿ ಕಾರ್ಯಕ್ರಮ ನಿರೂಪಿಸಿದರು.

    baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಅಮೃತ ಕಾಲೇಜಿನಲ್ಲಿ ತುಳು ನಾಟಕ ಕಾರ್ಯಾಗಾರ | ಜೂನ್ 24
    Next Article ವಿಶೇಷ ಲೇಖನ – ಶಾಸ್ತ್ರೀಯ ಶೈಲಿಯ ವಿಶೇಷ ಕಲಾವಿದ ರಥ ಶಿಲ್ಪಿ ಪರಮೇಶ್ವರಾಚಾರ್ಯ
    roovari

    Add Comment Cancel Reply


    Related Posts

    ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

    June 24, 2025

    ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ಉದ್ಘಾಟನೆ

    June 24, 2025

    ಕ.ಸಾ.ಪ.ದ ಬೆಳ್ತಂಗಡಿ ತಾಲೂಕು ಘಟಕದಿಂದ ಉಪನ್ಯಾಸಮಾಲೆ | ಜೂನ್ 26

    June 24, 2025

    ಮಂಗಳೂರಿನಲ್ಲಿ ಉದ್ಘಾಟನೆಗೊಂಡ ‘ಮನೆ ಮನೆ ಕನ್ನಡ ಜಾಗೃತಿ ಅಭಿಯಾನ’

    June 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.