Subscribe to Updates

    Get the latest creative news from FooBar about art, design and business.

    What's Hot

    ನಾಟಕ ವಿಮರ್ಶೆ | ‘ಅರಿವಿನ ಪಯಣ’ ಕಾರ್ಯಕ್ರಮದಲ್ಲಿ ಕಿರು ನಾಟಕ ಪ್ರದರ್ಶನ

    September 11, 2025

    ‘ಪದ್ಮಗಿರಿ ಕಲಾ ಕುಟೀರ’ದಲ್ಲಿ ‘ಆಕಾಶದಿಂದ ಪಾತಾಳಕ್ಕೆ’ ಕೃತಿ ಲೋಕಾರ್ಪಣೆ | ಸೆಪ್ಟೆಂಬರ್ 13

    September 11, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ಆಲಾಪ್’ ಶಾಸ್ತ್ರೀಯ ಸಂಗೀತ ಕಛೇರಿ | ಸೆಪ್ಟೆಂಬರ್ 13

    September 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕದ್ರಿಯಲ್ಲಿ ಯಕ್ಷಾಂಗಣ ತಾಳಮದ್ದಳೆ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ
    Yakshagana

    ಕದ್ರಿಯಲ್ಲಿ ಯಕ್ಷಾಂಗಣ ತಾಳಮದ್ದಳೆ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    October 29, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಾಂಗಣ ಮಂಗಳೂರು ಮತ್ತು ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಜರಗುವ ಕರ್ನಾಟಕ ರಾಜ್ಯೋತ್ಸವ ಕಲಾಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ಹನ್ನೆರಡನೇ ವರ್ಷದ ನುಡಿ ಹಬ್ಬ ದ್ವಾದಶ ಸರಣಿಯ ಆಮಂತ್ರಣ ಪತ್ರಿಕೆಯನ್ನು ಕದ್ರಿ ಶ್ರೀ ಮಂಜುನಾಥ ದೇವರ ಸನ್ನಿಧಿಯಲ್ಲಿ ದಿನಾಂಕ 28 ಅಕ್ಟೋಬರ್ 2024ರಂದು ಬಿಡುಗಡೆಗೊಳಿಸಲಾಯಿತು.

    ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಎ.ಜೆ. ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಹಾಗೂ ಯಕ್ಷಾಂಗಣದ ಗೌರವಾಧ್ಯಕ್ಷ ಡಾ. ಎ.ಜೆ. ಶೆಟ್ಟಿ “ಮನೋರಂಜನೆಯೊಂದಿಗೆ ವಿವಿಧ ಭಾರತೀಯ ಜ್ಞಾನಶಾಖೆಗಳನ್ನು ಪರಿಚಯಿಸುವ ಯಕ್ಷಗಾನ ತಾಳಮದ್ದಳೆ ಬಹಳ ವಿಚಾರ ಪ್ರಚೋದಕವಾದ ಕಲಾ ಪ್ರಕಾರ. ಪ್ರತಿ ವರ್ಷ ಸಪ್ತಾಹದ ರೂಪದಲ್ಲಿ ಇದನ್ನು ನವೆಂಬರ ತಿಂಗಳ ನುಡಿ ಹಬ್ಬವಾಗಿ ಆಚರಿಸುತ್ತಿರುವ ಯಕ್ಷಾಂಗಣದ ಕಾರ್ಯವನ್ನು ಕಲಾಭಿಮಾನಿಗಳು ಬೆಂಬಲಿಸಬೇಕು” ಎಂದು ಹೇಳಿದರು. ಮಹೇಶ್ ಮೋಟರ್ಸ್ ಮಾಲಕ ಎ.ಕೆ. ಜಯರಾಮ ಶೇಖ ಮತ್ತು ಉದ್ಯಮಿ ಲೋಟಸ್ ಬಿಲ್ಡರ್ಸ್ ನ ಜಿತೇಂದ್ರ ಕೊಟ್ಟಾರಿ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.

    ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ “ಕದ್ರಿ ದೇವಾಲಯದ ರಾಜಾಂಗಣದಲ್ಲಿ ದಿನಾಂಕ 11 ನವೆಂಬರ್ 2024ರಿಂದ 17 ನವೆಂಬರ್ 2024ರವರೆಗೆ ಜಿಲ್ಲೆಯ ವಿವಿಧ ಕಲಾಸಂಘಗಳ ಸಹಕಾರದಿಂದ ನಡೆಯುವ ಈ ಬಾರಿಯ ಸಪ್ತಾಹವನ್ನು ಸಂಘಟನಾ ಪರ್ವ ಎಂದು ಕರೆಯಲಾಗಿದೆ. ಹವ್ಯಾಸಿ ಬಳಗ ಕದ್ರಿ, ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಬೆಟ್ಟಂಪಾಡಿ, ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ, ಶ್ರೀ ವಾಣೀವಿಲಾಸ ಯಕ್ಷ ಬಳಗ ಕಟೀಲು, ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ, ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟ ಕಣಿಯೂರು ಕನ್ಯಾನ, ಕರ್ನಾಟಕ ಯಕ್ಷ ಭಾರತಿ ಪುತ್ತೂರು ಸಂಘಗಳು ಜಿಲ್ಲೆಯ ಪ್ರಸಿದ್ಧ ಅರ್ಥಧಾರಿಗಳ ಸೇರ್ಪಡೆಯೊಂದಿಗೆ ಏಳು ದಿನದ ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ಕೈಜೋಡಿಸಿವೆ” ಎಂದು ತಿಳಿಸಿದರು.

    ಯಕ್ಷಾಂಗಣದ ಉಪಾಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ಸಂಚಾಲಕರಾದ ರವೀಂದ್ರ ರೈ ಕಲ್ಲಿಮಾರು, ನಿವೇದಿತಾ ಎನ್. ಶೆಟ್ಟಿ, ಕಾರ್ಯದರ್ಶಿಗಳಾದ ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ಸುಮಾ ಪ್ರಸಾದ್ ಮತ್ತು ದೇವಸ್ಥಾನದ ನಿಕಟ ಪೂರ್ವ ಟ್ರಸ್ಟಿ ಸುರೇಶ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಸ್ವಾಗತಿಸಿ, ಕಾರ್ಯಕಾರಿಣಿ ಸದಸ್ಯ ಸುಧಾಕರ ರಾವ್ ಪೇಜಾವರ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿವಿಯಲ್ಲಿ ‘ಬಿತ್ತಿ’ ದಿನಾಚರಣೆ
    Next Article ವಿಶೇಷ ಲೇಖನ | ವಿರಳಾತಿವಿರಳ ಸಾಧಕಿ ಏರ್ಯ ಚಂದ್ರಭಾಗಿ ಕೆ. ರೈ
    roovari

    Add Comment Cancel Reply


    Related Posts

    ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ ಯಕ್ಷಗಾನ ಪ್ರಯೋಗ | ಸೆಪ್ಟೆಂಬರ್ 12

    September 11, 2025

    ದಿ. ಪಿ.ವಿ. ಪರಮೇಶ್ ಸಂಸ್ಮರಣೆ ಮತ್ತು ಪಿ. ನಾಗೇಶ ಕಾರಂತರಿಗೆ ಪ್ರಶಸ್ತಿ ಪ್ರದಾನ

    September 11, 2025

    ಶ್ರೀ ಎಡನೀರು ಮಠದಲ್ಲಿ ವೇಣುವಾದನ ಮತ್ತು ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 11

    September 10, 2025

    ತೆಕ್ಕಟ್ಟೆಯಲ್ಲಿ ‘ರಾಜಾರುದ್ರಕೋಪ’ ಯಕ್ಷಗಾನ ಪ್ರದರ್ಶನ

    September 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.