Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡು ಕನ್ನಡ ಗ್ರಾಮದ ಸಾಂಸ್ಕೃತಿಕ ಭವನದಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಯೋಜನೆಗೆ ಆಹ್ವಾನ
    Bharathanatya

    ಕಾಸರಗೋಡು ಕನ್ನಡ ಗ್ರಾಮದ ಸಾಂಸ್ಕೃತಿಕ ಭವನದಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಯೋಜನೆಗೆ ಆಹ್ವಾನ

    February 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆ (04/11/1990 – 04/11/2025)ಯ ಸಂಭ್ರಮದ ಪ್ರಯುಕ್ತ ಕಾಸರಗೋಡು ನಗರ ಸಭೆಯ 8ನೇ ವಾರ್ಡ್ ನ ಕನ್ನಡ ಗ್ರಾಮದಲ್ಲಿ ಇರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ‘ಕನ್ನಡ ಗ್ರಾಮದಲ್ಲಿ ತಿಂಗಳ ಕನ್ನಡ ಉತ್ಸವ’ ಪ್ರತಿ ತಿಂಗಳ 4ನೇ ಆದಿತ್ಯವಾರದಂದು ಅಪರಾಹ್ನ ಗಂಟೆ 3-00ರಿಂದ 6-00ರ ತನಕ ನಿರಂತರವಾಗಿ ಸಾಂಸ್ಕೃತಿಕ, ಸಾಹಿತ್ಯಕ ಮತ್ತು ಸಾಮಾಜಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

    ಕನ್ನಡ ಗ್ರಾಮದಲ್ಲಿ ಸಭಾ ವೇದಿಕೆ, ಆಸನದ ವ್ಯವಸ್ಥೆ, ಧ್ವನಿವರ್ಧಕ ವ್ಯವಸ್ಥೆ ಇರುತ್ತದೆ. ಕನ್ನಡ ಗ್ರಾಮದ ಸಾಂಸ್ಕೃತಿಕ ಭವನದಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಯೋಜನೆ ಪ್ರದರ್ಶನಕ್ಕಾಗಿ ಸಾಂಸ್ಕೃತಿಕ ಕಲಾತಂಡಗಳ ಸಂಘ ಸಂಸ್ಥೆಗಳಿಗೆ ಅವಕಾಶ ನೀಡಲು ತೀರ್ಮಾನಿಸಿದೆ. ವಿವಿಧ ಉತ್ಸವ ಸಮಾವೇಶ, ಸಾಹಿತ್ಯ ಗೋಷ್ಠಿ, ವಿಚಾರಗೋಷ್ಠಿ, ಕವಿಗೋಷ್ಠಿ, ಸಮೂಹ ಗಾಯನ, ಸಮೂಹ ನೃತ್ಯ, ಯಕ್ಷಗಾನ ತಾಳಮದ್ದಳೆ, ಹರಿಕಥಾ, ಯಕ್ಷಗಾನ ಕಲಾ ವೈಭವ, ಕಾವ್ಯ ಕಮ್ಮಟ, ಸಾಹಿತ್ಯ ಕಮ್ಮಟ, ಚಿತ್ರಕಲಾ, ವ್ಯಂಗ್ಯ ಚಿತ್ರಕಲಾ ಪ್ರದರ್ಶನ ಹಾಗೂ ಸ್ವಉದ್ಯೋಗ, ಶೈಕ್ಷಣಿಕ, ವೈದ್ಯಕೀಯ, ಸರಕಾರದ ಸವಲತ್ತುಗಳ ಮಾಹಿತಿ ಶಿಬಿರ ಮತ್ತು ವಿವಿಧ ಕಾರ್ಯಕ್ರಮಗಳ ಸಂಯೋಜನೆ ಪ್ರಾಯೋಜಕತ್ವವನ್ನು ವಹಿಸುವವರಿಗೆ ಮುಕ್ತ ಅವಕಾಶ ನೀಡಲಾಗುವುದು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಅಭಿನಂದನಾ ಕಾರ್ಯಕ್ರಮಗಳನ್ನು ಏರ್ಪಡಿಸಬಹುದು. ಕಾರ್ಯಕ್ರಮದ ಒಂದು ತಿಂಗಳ ಮುಂಚಿತವಾಗಿ ಹೆಸರು, ವಿಳಾಸ ಪದಾಧಿಕಾರಿಗಳು ಮತ್ತು ಕಾರ್ಯಕ್ರಮದ ವಿವರಗಳನ್ನು ಬರಹದ ಮೂಲಕ ಬರೆದು ಪತ್ರ ಮುಖೇನ ಕಳುಹಿಸಬೇಕು.

    ಹೆಚ್ಚಿನ ಮಾಹಿತಿಗಾಗಿ : ಶಿವರಾಮ ಕಾಸರಗೋಡು, ಅಧ್ಯಕ್ಷರು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಪಾರಕಟ್ಟಿ ರಸ್ತೆ, ಕಾಸರಗೋಡು- 671121. ಮೊಬೈಲ್ : 9448572016 ಅಥವಾ ಕುಶಲ ಕುಮಾರ್ ಕೆ. ಕಾರ್ಯಾಲಯ ಕಾರ್ಯದರ್ಶಿ, ಕನ್ನಡ ಗ್ರಾಮ, ಮೊಬೈಲ್: 9037568983 ಇವರುಗಳನ್ನು ಸಂಜೆ 6-00 ಗಂಟೆಯಿಂದ ರಾತ್ರಿ 9-00 ಗಂಟೆಯವರೆಗೆ ಸಂಪರ್ಕಿಸಬಹುದು.

    bharatanatyam Cultural dance folk kannada Literature Music yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ‘ಕ್ರಾಂತಿ ಬಂತು # ಕ್ರಾಂತಿ’ ನಾಟಕ ಪ್ರದರ್ಶನ | ಫೆಬ್ರವರಿ 16
    Next Article ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ತಾಳಮದ್ದಳೆ
    roovari

    Add Comment Cancel Reply


    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.