Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ನೃತ್ಯ ಸುಧಾರ್ಪಣಂ -2026’ | ಜನವರಿ 11

    January 7, 2026

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಪುಸ್ತಕ ಪ್ರಶಸ್ತಿ’ಗೆ ಸ್ವತಂತ್ರ ನಾಟಕ ಕೃತಿಗಳಿಗೆ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 10
    Awards

    ‘ಪುಸ್ತಕ ಪ್ರಶಸ್ತಿ’ಗೆ ಸ್ವತಂತ್ರ ನಾಟಕ ಕೃತಿಗಳಿಗೆ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 10

    October 17, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಅಂಬಾತನಯ ಮುದ್ರಾಡಿಯವರ ಸಂಸ್ಮರಣೆಯಲ್ಲಿ ರಂಗಭೂಮಿ (ರಿ.) ಉಡುಪಿ ಇವರು ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಸಹಯೋಗದಲ್ಲಿ ನೀಡಲಿರುವ ‘ಪುಸ್ತಕ ಪ್ರಶಸ್ತಿ’ಗೆ ಸ್ವತಂತ್ರ ನಾಟಕ ಕೃತಿಗಳನ್ನು ಆಹ್ವಾನಿಸಲಾಗಿದೆ.

    ಆದರ್ಶ ಆಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥದಾರಿ, ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸಂಸ್ಮರಣೆಯಲ್ಲಿ ರಂಗಭೂಮಿ (ರಿ.) ಉಡುಪಿಯು, ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಸಹಯೋಗದಲ್ಲಿ ನಾಟಕರಂಗಕ್ಕೆ ಪ್ರಸ್ತುತವಾದ ಪುಸ್ತಕ ಪ್ರಶಸ್ತಿಯೊಂದನ್ನು ಕಳೆದ (2023) ವರ್ಷದಿಂದ ಆರಂಭಿಸಿತ್ತು. ಈ ಪ್ರಶಸ್ತಿಯು ರಂಗಭೂಮಿಗೆ ಪ್ರಸ್ತುತವಾದ, ಪರಿಶೀಲನ ಅವಧಿಯಲ್ಲಿ ಪ್ರಕಟವಾದ ನಾಟಕೇತರ ಸಾಹಿತ್ಯಕೃತಿ ಅಥವಾ ಅತ್ಯುತ್ತಮ ನಾಟಕ ಕೃತಿಯನ್ನು ಪರ್ಯಾಯ ವರ್ಷಗಳಲ್ಲಿ ಸ್ಪರ್ಧೆಯ ಮೂಲಕ ಗುರುತಿಸಿ ಪುರಸ್ಕರಿಸುವ ಮೂಲಕ ಅಂಬಾತನಯ ಮುದ್ರಾಡಿಯವರ ಸಂಸ್ಮರಣೆಯನ್ನು ನಿರಂತರವಾಗಿ ನಡೆಸುವ ಯೋಜನೆಯಾಗಿದೆ.

    ‘ಅಂಬಾತನಯ ಮುದ್ರಾಡಿಯವರ ಸಂಸ್ಮರಣೆಯ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಸಹಯೋಗದ ಉಡುಪಿ ರಂಗಭೂಮಿ ಪುರಸ್ಕಾರ’ ಎಂದು ಕರೆಯಲ್ಪಡುವ ಈ ‘ಪುಸ್ತಕ ಪ್ರಶಸ್ತಿ’ಯು ರಂಗಭೂಮಿ (ರಿ.) ಉಡುಪಿಯು ಆಯೋಜಿಸುವ ಸಾರ್ವಜನಿಕ ಸಮಾರಂಭದಲ್ಲಿ ಪ್ರದಾನಗೊಳ್ಳಲಿದ್ದು, ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ಹದಿನೈದು ಸಾವಿರ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿರುತ್ತದೆ.

    ಕಳೆದ ವರ್ಷ ನಾಟಕ ರಂಗಕ್ಕೆ ಸಂಬಂಧಿಸಿದ ಗಂಭೀರ ಚಿಂತನೆಯ ನಾಟಕೇತರ ಸಾಹಿತ್ಯ ಕೃತಿಗಳನ್ನು ಸ್ಪರ್ಧೆಗೆ ಪರಿಗಣಿಸಲಾಗಿದ್ದು, ಈ ಸಾಲಿನ (2024ರ) ಪುಸ್ತಕ ಪ್ರಶಸ್ತಿಗೆ ಹಿಂದಿನ ಎರಡು ವರ್ಷಗಳಲ್ಲಿ (2022 ಮತ್ತು 2023) ಪ್ರಕಟವಾದ ಯಾವುದೇ ಪ್ರಕಾರದ ಸ್ವತಂತ್ರ ನಾಟಕ ಕೃತಿಯನ್ನು (ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ನವೋದಯ, ನವ್ಯ, ನವ್ಯೋತ್ತರ, ಅಸಂಗತ, ರೂಪಕ, ಏಕಾಂಕ, ನಾಟಕ ಸಂಕಲನ ಎಂಬ ಕಟ್ಟುಪಾಡುಗಳಿಲ್ಲದೇ) ಪರಿಗಣಿಸಲಾಗುತ್ತದೆ. ಅನುವಾದಿತ/ ಆಧಾರಿತ/ ಪುನರ್ಮುದ್ರಿತ ನಾಟಕ ಕೃತಿಗಳು ಸ್ಪರ್ಧೆಗೆ ಅರ್ಹವಾಗಿರುವುದಿಲ್ಲ.

    ತನ್ನಿಮಿತ್ತ 2022 ಮತ್ತು 2023 ಈ ಎರಡು ವರ್ಷಗಳ ಅವಧಿಯಲ್ಲಿ ಪ್ರಥಮ ಆವೃತ್ತಿಯಲ್ಲಿ ಪ್ರಕಟವಾದ ನಾಟಕ ಕೃತಿಗಳ ಮೂರು ಪ್ರತಿಗಳನ್ನು ಲೇಖಕ/ಪ್ರಕಾಶಕರು/ರಂಗಕರ್ಮಿಗಳು ಅಥವಾ ರಂಗಾಸಕ್ತರು ಸ್ಪರ್ಧೆಯ ನಿರ್ವಾಹಕರಾದ ಡಾ. ವಿಷ್ಣುಮೂರ್ತಿ ಪ್ರಭು (ಮೊಬೈಲ್ 9108587192) c/o ಪ್ರೇಮಾ ನಾಯಕ್, ‘ಗೋಕುಲ’, ಆಲಂಬಿ ರಸ್ತೆ, 80 ಬಡಗುಬೆಟ್ಟು, ಪರ್ಕಳ, ಉಡುಪಿ – 576107 ಇವರಿಗೆ ದಿನಾಂಕ 10 ನವೆಂಬರ್ 2024ರ ಒಳಗೆ ತಲುಪುವಂತೆ ಕಳುಹಿಸಿಕೊಡಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | ಸತ್ವಪೂರ್ಣ ಯಕ್ಷಗಾನ ವೇಷಧಾರಿ – ಜಗನ್ನಾಥ ಗಾಣಿಗ
    Next Article ನೃತ್ಯಾಂಗನ್ ಪ್ರಸ್ತುತ ಪಡಿಸುವ ‘ನೃತ್ಯಲಹರಿ’ ಶಾಸ್ತ್ರೀಯ ನೃತ್ಯ ಸರಣಿ | ಅಕ್ಟೋಬರ್ 20
    roovari

    Add Comment Cancel Reply


    Related Posts

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜನವರಿ 07

    January 7, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.