ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2024 ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿಯನ್ನು ಲೇಖಕರು ಅಥವಾ ಪ್ರಕಾಶಕರು ಸಲ್ಲಿಸಬಹುದಾಗಿದೆ.
01 ಜನವರಿ 2024ರಿಂದ 31 ಡಿಸೆಂಬರ್ 2024ರವರೆಗೆ ಹಾಗೂ 01 ಜನವರಿ 2025ರಿಂದ 31 ಡಿಸೆಂಬರ್ 2025ರ ಅವಧಿಯಲ್ಲಿ ಪ್ರಕಟಗೊಂಡ ಎರಡು ವರ್ಷಗಳ ಪ್ರತ್ಯೇಕ ಸಾಲಿನ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುತ್ತದೆ. ತುಳು ಕವನ ಸಂಕಲನ, ತುಳು ಕಥಾ ಸಂಕಲನ, ತುಳು ಕಾದಂಬರಿ, ತುಳು ಕಾವ್ಯ, ತುಳು ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ ಹಾಗೂ ಇತರ ಭಾಷೆಯಿಂದ ತುಳುವಿಗೆ ಭಾಷಾಂತರಿತ ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ.
ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ತುಳು ಅಕಾಡೆಮಿ ಪುಸ್ತಕ ಬಹುಮಾನ ಯೋಜನೆ 2024-25 ಎಂದು ಬರೆದು ರಿಜಿಸ್ಟ್ರಾರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಭವನ, ಪೋಸ್ಟ್ ಅಶೋಕನಗರ, ಉರ್ವಸ್ಟೋರ್, ಮಂಗಳೂರು – 575006 ಈ ವಿಳಾಸಕ್ಕೆ ಜನವರಿ 09ರೊಳಗಾಗಿ ಅರ್ಜಿ ಸಲ್ಲಿಸುವಂತೆ ಅಕಾಡೆಮಿ ಅಧ್ಯಕ್ಷ, ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.
