ಕೋಟ : ಯಕ್ಷಗಾನ ಕಲಾಕೇಂದ್ರ (ರಿ.) ಹಂಗಾರಕಟ್ಟೆ- ಐರೋಡಿ ಹದಿಮೂರು ವರ್ಷಗಳಿಂದ ಮಕ್ಕಳಿಗಾಗಿ ಯಕ್ಷಗಾನ ತರಬೇತಿ ಶಿಬಿರವನ್ನು ನಡೆಸುತ್ತಾ ಬಂದಿದ್ದು, ದಿನಾಂಕ 15 ಏಪ್ರಿಲ್ 2026ರಿಂದ 03 ಮೇ 2026ರ ತನಕ ಬೆಳಿಗ್ಗೆ 9-15ರಿಂದ ಮಧ್ಯಾಹ್ನ 1-15ರ ತನಕ ಶಾಲಾ ವಿದ್ಯಾರ್ಥಿಗಳಿಗಾಗಿ ‘ನಲಿ- ಕುಣಿ’ ಎಂಬ ಯಕ್ಷಗಾನ ತರಬೇತಿ ಶಿಬಿರವನ್ನು ಆಯೋಜಿಸಿದೆ.
ಯಕ್ಷಗಾನ ನೃತ್ಯ ಹಾಗೂ ಅಭಿನಯದ ತರಬೇತಿಯನ್ನು ಸಾಲಿಗ್ರಾಮದ ಗುಂಡ್ಮಿಯಲ್ಲಿರುವ ಕಲಾಕೇಂದ್ರದ ಸದಾನಂದ ರಂಗ ಮಂಟಪದಲ್ಲಿ ನೀಡಲಾಗುವುದು. ಖ್ಯಾತ ಯಕ್ಷಗಾನ ವಿದ್ವಾಂಸರೂ ತರಬೇತುದಾರ ಪ್ರಾಚಾರ್ಯ ಗುಂಡ್ಮಿ ಸದಾನಂದ ಐತಾಳ ನಿರ್ದೇಶನದಲ್ಲಿ ನಡೆಯುವ ಈ ತರಬೇತಿ ಶಿಬಿರದಲ್ಲಿ ಸಹ ಶಿಕ್ಷಕರಾಗಿ ಕೇಶವ ಆಚಾರ್, ಜಯೇಂದ್ರ ಅಡಿಗ, ರಾಘವೇಂದ್ರ ಗಾಣಿಗ ಮಟಪಾಡಿ ಇವರು ಭಾಗವಹಿಸಲಿದ್ದಾರೆ. ತರಬೇತಿ ಶಿಬಿರವನ್ನು ಸೇರಲಿಚ್ಚಿಸುವ ವಿದ್ಯಾರ್ಥಿಗಳ ಪೋಷಕರು ರಾಜಶೇಖರ ಹೆಬ್ಬಾರ್ ಕಾರ್ಯದರ್ಶಿ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ- ಐರೋಡಿ ಇವರನ್ನು ದೂರವಾಣಿ ಸಂಖ್ಯೆ 98806 05610 ಅಥವಾ ಗುಂಡ್ಮಿ ರಾಮಚಂದ್ರ ಐತಾಳ 94488 24559 ಮುಖಾಂತರ ದಿನಾಂಕ 05 ಏಪ್ರಿಲ್ 2026ರ ಒಳಗೆ ಸಂಪರ್ಕಿಸುವುದು ಮತ್ತು ದಿನಾಂಕ 09 ಏಪ್ರಿಲ್ 2026ರ ಒಳಗೆ ಕಲಾಕೇಂದ್ರದ ಕಚೇರಿಯಿಂದ ನೋಂದಣಿ ಅರ್ಜಿಯನ್ನು ಪಡೆದು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಕೇಳಿಕೊಳ್ಳಲಾಗಿದೆ ಎಂದು ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ ತಿಳಿಸಿದ್ದಾರೆ.
