ಮಂಡ್ಯ : ಪರಿಚಯ ಪ್ರಕಾಶನದ ವತಿಯಿಂದ ನೀಡಲಾಗುವ ‘ಪರಿಚಯ ಮಕ್ಕಳ ಸಾಹಿತ್ಯ ಪ್ರಶಸ್ತಿ’ಗೆ 2024ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಮಕ್ಕಳ ಸಾಹಿತ್ಯದ ವಿವಿಧ ಪ್ರಕಾರದ ಕೃತಿಗಳನ್ನು ಲೇಖಕ/ಲೇಖಕಿ ಅಥವಾ ಪ್ರಕಾಶಕರಿಂದ ಆಹ್ವಾನಿಸಲಾಗಿದೆ. ಮಕ್ಕಳ ಸಾಹಿತ್ಯದ ಕಾವ್ಯ, ಕಥೆ, ಕಾದಂಬರಿ, ನಾಟಕ, ವಿಮರ್ಶೆ ಹಾಗೂ ಸಂಶೋಧನಾ ಪ್ರಕಾರಗಳು ಸೇರಿದಂತೆ ಒಟ್ಟಾರೆ ಮಕ್ಕಳಿಗೆ ಸಂಬಂಧಪಟ್ಟ ಕೃತಿಗಳನ್ನು ಕಳುಹಿಸಬಹುದಾಗಿದೆ.
ಪ್ರಶಸ್ತಿಯು 10,000/- ನಗದು ಮತ್ತು ಫಲಕವನ್ನು ಹೊಂದಿರುತ್ತದೆ. ಆಸಕ್ತ ಸಾಹಿತಿಗಳು ತಮ್ಮ ಪುಸ್ತಕಗಳ ಮೂರು ಪ್ರತಿಗಳನ್ನು ದಿನಾಂಕ 30 ಜೂನ್ 2025ರೊಳಗೆ ತಲುಪುವಂತೆ ಅಂಚೆ ಮೂಲಕ ಎಂ.ಎನ್. ಶಿವಕುಮಾರ ಆರಾಧ್ಯ, ಸಂಸ್ಥಾಪಕರು, ಪರಿಚಯ ಪ್ರಕಾಶನ ನಂ.181, ಮಂಗಲ ಗ್ರಾಮ ಮತ್ತು ಅಂಚೆ, ಮಂಡ್ಯ ತಾಲ್ಲೂಕು, ಮಂಡ್ಯ ಜಿಲ್ಲೆ – 571478 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 991689441 ಸಂಪರ್ಕಿಸಬಹುದು.