Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಶಿಬಿರಕ್ಕೆ ಆಹ್ವಾನ
    Camp

    ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಶಿಬಿರಕ್ಕೆ ಆಹ್ವಾನ

    April 21, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತುಮಕೂರು : ಮಕ್ಕಳಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಜಿಲ್ಲಾ ಶಾಖೆ ತುಮಕೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಶಿಬಿರವನ್ನು ಆಯೋಜಿಸಲಾಗಿದೆ. ಶ್ರೀ ಷ.ಬ್ರ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಇವರ ಕೃಪಾಶೀರ್ವಾದಗಳೊಂದಿಗೆ, ಕೊರಟಗೆರೆ ತಾಲೂಕಿನ ಶ್ರೀಕ್ಷೇತ್ರ ಸಿದ್ಧರಬೆಟ್ಟದಲ್ಲಿ ಈ ಶಿಬಿರವು ದಿನಾಂಕ 30 ಏಪ್ರಿಲ್ 2026ರಿಂದ 02 ಮೇ 2026ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ.

    ಶಿಬಿರದಲ್ಲಿ ನಾಡಿನ ಖ್ಯಾತ ಸಾಹಿತಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ, ಮಕ್ಕಳಿಗೆ ಸಾಹಿತ್ಯ, ಸಂಸ್ಕೃತಿ, ಕಲೆ, ಯೋಗ, ಚಾರಣ, ಚಿತ್ರಕಲೆ, ಜಾನಪದ, ಸಂಗೀತ, ವಿಜ್ಞಾನ, ಭಾಷೆ ಹಾಗೂ ನಾಟಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡಲಿದ್ದಾರೆ. ಕೌಶಲ್ಯಾಧಾರಿತ ಚಟುವಟಿಕೆಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಬೆಳಗಿಸುವ ಪ್ರಯತ್ನ ನಡೆಯಲಿದೆ. 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಒಟ್ಟು 200 ಮಕ್ಕಳಿಗೆ ಸೀಮಿತಗೊಳಿಸಲಾಗಿದೆ. ಮೊದಲು ನೋಂದಣಿ ಮಾಡಿಕೊಂಡವರಿಗೆ ಆದ್ಯತೆ ನೀಡಲಾಗುತ್ತದೆ.

    ಶಿಬಿರದಲ್ಲಿ ಭಾಗವಹಿಸುವ ಮಕ್ಕಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಾಗವಹಿಸುವವರು ತಮ್ಮೊಂದಿಗೆ ಲಘು ಹೊದಿಕೆ, ಹಾಸಿಗೆ, ತಟ್ಟೆ, ಲೋಟ ಹಾಗೂ ದಿನಬಳಕೆ ವಸ್ತುಗಳನ್ನು ತರಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ 94487 31960 ಮತ್ತು 94811 18700 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು.

    baikady camp Cultural dance drama drawing folk Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡು ಕನ್ನಡ ಭವನದ ಅಂಗ ಸಂಸ್ಥೆಯಾದ ಕನ್ನಡ ಭವನ ಪ್ರಕಾಶನದ ಮೂರನೇ ವಾರ್ಷಿಕೋತ್ಸವ
    Next Article ಸದಾಶಿವ ಅನಂತಪುರ ಇವರ ‘ಪಂಚಮ ಸ್ಮೃತಿ’ ಸಮಾರಂಭ
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026

    ಬಾಲ್ಯದಿಂದಲೇ ಅಭಿರುಚಿ ಬೆಳೆಸಿಕೊಳ್ಳಬೇಕು – ಡಾ. ಯಶವಂತ ಎನ್. ನಾಯಕ್

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.