ಕುಶಾಲನಗರ : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ದಿನಾಂಕ 23 ಜೂನ್ 2026ರಂದು ಇಲ್ಲಿನ ರೈತ ಸಹಕಾರ ಭವನದಲ್ಲಿ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಶರಣ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಬಳಿಕ ಸಂಜೆ 6-00 ಗಂಟೆಯಿಂದ ಸಾಂಸ್ಕೃತಿಕ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಕೊಡಲು ಇಚ್ಛಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದಿನಾಂಕ 15 ಜೂನ್ 2026ರ ಒಳಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಲು ಸಮ್ಮೇಳನ ಸಮಿತಿಯ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಸ್. ನಂದೀಶ್ ತಿಳಿಸಿದ್ದಾರೆ.
ಶರಣರ ವಚನ ಗೀತೆಗಳು, ಜನಪದ ಗೀತೆಗಳು, ಭರತ ನಾಟ್ಯ, ಸಮೂಹ ನೃತ್ಯ, ಶರಣರ ಛದ್ಮ ವೇಶಗಳು, ಶರಣರ ರೂಪಕಗಳು ಹಾಗೂ ಕಿರು ನಾಟಕಗಳಿಗೆ ಅವಕಾಶ ಇರುತ್ತದೆ. ಆಸಕ್ತರು ತಮ್ಮ ಹೆಸರನ್ನು ಎಸ್. ನಂದೀಶ್, ಸಮ್ಮೇಳನದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರು, ಕುಶಾಲನಗರ. ಮೊಬೈಲ್ ಸಂಖ್ಯೆ 9481072372 ಇಲ್ಲಿ ನೋಂದಾಯಿಸಬೇಕೆಂದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಕೋರಿದ್ದಾರೆ.
