Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತಿರುಳ್ಗನ್ನಡ ನೆಲದಲ್ಲಿ ‘ಜಾಜಿ ಮಲ್ಲಿಗೆ’ ಪುಸ್ತಕ ಲೋಕಾರ್ಪಣೆ  
    Book Release

    ತಿರುಳ್ಗನ್ನಡ ನೆಲದಲ್ಲಿ ‘ಜಾಜಿ ಮಲ್ಲಿಗೆ’ ಪುಸ್ತಕ ಲೋಕಾರ್ಪಣೆ  

    July 31, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕೊಪ್ಪಳ :ಶಕ್ತಿ ಶಾರದೆಯ ಮೇಳ ಭಾಗ್ಯನಗರ ಸಂಸ್ಥೆಯು ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ, ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ.) ಕೊಪ್ಪಳ ಇವರ ಸಹಯೋಗದಲ್ಲಿ ಆಯೋಜಿಸಿದ ಡಾ. ಸತ್ಯಾನಂದ ಪಾತ್ರೋಟ ಇವರ ಆತ್ಮಕಥನ ‘ಜಾಲಿ ಮರದಲ್ಲೊಂದು ಜಾಜಿ ಮಲ್ಲಿಗೆ’ ಕೃತಿಯ ಲೋಕಾರ್ಪಣಾ ಸಮಾರಂಭವು 28 ಜುಲೈ 2024ರಂದು ಕೊಪ್ಪಳದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
    ಡಿ. ಎಂ. ಬಡಿಗೇರ ಇವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕವಿಗಳಾದ ಶ್ರೀಮತಿ ಮಾಲಾ ಬಡಿಗೇರ ಕೃತಿ ಲೋಕಾರ್ಪಣೆ ಗೊಳಿಸಿದರು. ಹುಬ್ಬಳ್ಳಿ ಸರಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ವೈ. ಎಂ. ಭಜಂತ್ರಿ ಕೃತಿ ಕುರಿತು ಮಾತನಾಡಿದರು. ಕವಿ ನುಡಿಯನ್ನು ಡಾ. ಸತ್ಯಾನಂದ ಪಾತ್ರೋಟ ನಡೆಸಿಕೊಟ್ಟರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿಗಳಾದ ಎ. ಎಂ. ಮದರಿ ಅಧ್ಯಕ್ಷೀಯ ನುಡಿಗಳನ್ನಾಡಿದರು.
    ಕಾರ್ಯಕ್ರಮದಲ್ಲಿ ಡಾ. ಪಾತ್ರೋಟ್ ಅವರಿಗೆ ಅವರ ಸ್ನೇಹಿತರು ಹಾಗೂ ಅಭಿಮಾನಿಗಳು ವಿಶೇಷ ಪ್ರೀತಿ-ವಿಶ್ವಾಸದಿಂದ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಅಂಚೆ ಇಲಾಖೆಯ ಕರ್ತವ್ಯದಿಂದ ನಿವೃತ್ತರಾದ ರವಿ ಕಾಂತನವರ್ ಅವರಿಗೆ ಸನ್ಮಾನ ನೆರವೇರಿಸಲಾಯಿತು.
    ರಮೇಶ ಬನ್ನಿಕೊಪ್ಪ ಮತ್ತು ಮಂಜುಳಾ ಶ್ಯಾವಿಯವರು ಪಾತ್ರೋಟ್ ಇವರ ಕವನ ವಾಚನ ಜರುಗಿತು. ಜಾನಪದ ಅಕಾಡೆಮಿಯ ಸದಸ್ಯರಾದ ಮಹೆಬೂಬ ಕಿಲ್ಲೇದಾರ ಮತ್ತು ಜನಪದ ಕಲಾವಿದರಾದ ಮರಿಯಪ್ಪ ಚಾಮಲಾಪುರ ಇವರಿಂದ ಗೀತಗಾಯನ ಕಾರ್ಯಕ್ರಮದ ನಡೆಯಿತು. 5 ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ರಿಯಾನ್ 5 ನೇ ತರಗತಿಯ ಪಠ್ಯ ದಲ್ಲಿರುವ ಡಾ. ಪಾತ್ರೋಟರ ಕವಿತೆಯನ್ನು ಹಾಡಿದನು.
    ಡಿ. ಎಂ. ಬಡಿಗೇರ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಮಹೇಶ್ ಬಳ್ಳಾರಿ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸುಳ್ಯದ ಕನ್ನಡ ಭವನದಲ್ಲಿ ‘ವರ್ಷ ವೈಭವ’ | ಆಗಸ್ಟ್ 3
    Next Article ಸಾಂಸ್ಕೃತಿಕ ಉತ್ಸವ- ‘ಸಿರಿಬಾಗಿಲು ಯಕ್ಷವೈಭವ’ದ ಸಮಾರೋಪ ಸಮಾರಂಭ
    roovari

    Comments are closed.

    Related Posts

    ಸಹೋದಯ ಸಭಾಂಗಣದಲ್ಲಿ ಬ್ಯಾರಿ ಪುಸ್ತಕಗಳ ಬಿಡುಗಡೆ | ಮೇ 07

    May 6, 2025

    ಮೇಘಾ ಶಿವರಾಜ್ ಕಾಸರಗೋಡು ಇವರ ‘ಮೌನ ಮಾತಾದಾಗ’ ಕವನ ಸಂಕಲನ ಬಿಡುಗಡೆ

    May 6, 2025

    ಕಡಿದಾಳ್ ಪ್ರಕಾಶ್ ಇವರ ‘ನನ್ನೂರಿನ ಶ್ರೀಸಾಮಾನ್ಯರು’ ಕೃತಿ ಲೋಕಾರ್ಪಣೆ

    May 6, 2025

    ಲೋಕಾರ್ಪಣೆಗೊಂಡ ವಿಜಯಲಕ್ಷ್ಮೀ ಶಾನುಭೋಗರ “ವ್ಯೂಹ” ಕೃತಿ

    May 5, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.