Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜಾಂಗಣದಲ್ಲಿ ಜಾನಪದ ಹಬ್ಬ ಉದ್ಘಾಟನೆ
    Cultural

    ರಾಜಾಂಗಣದಲ್ಲಿ ಜಾನಪದ ಹಬ್ಬ ಉದ್ಘಾಟನೆ

    November 1, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಡುಪಿ : ಪರ್ಯಾಯ ಪುತ್ತಿಗೆ ಮಠ ಹಾಗೂ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ `ಜಾನಪದ ಹಬ್ಬ-2024′ ಇದರ ಉದ್ಘಾಟನಾ ಸಮಾರಂಭವು ದಿನಾಂಕ 27 ಅಕ್ಟೋಬರ್ 2024ರ ಭಾನುವಾರದಂದು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮಿ ಮಾತನಾಡಿ “ಮಾನವನ ಸಹಜ ಭಾವನೆಗಳನ್ನು ವ್ಯಕ್ತ ಪಡಿಸುವ ಉತ್ತಮ ಸಂದೇಶಗಳನ್ನು ನೀಡುವ ನಮ್ಮ ನಾಡಿನ ಜಾನಪದ ಕಲೆಗಳು ಶ್ರೇಷ್ಠ ಕಲೆಗಳಾಗಿವೆ. ಇವುಗಳ ಆಚರಣೆಗೆ ತನ್ನದೇ ಆದ ಮಹತ್ವವಿದೆ. ಈ ಮೂಲಕ ಜಾನಪದ ಕಲೆಗಳು ಜ್ಞಾನಪ್ರದ ಕಲೆಗಳಾಗಿವೆ. ಜಾನಪದ ಕಲೆಗಳಲ್ಲಿ ಪಾಶ್ವಿಮಾತ್ಯ ದೇಶಗಳ ಕಲೆಗಳಂತೆ ಕೃತಿಮತೆ ಇಲ್ಲ. ಪ್ರಾಚೀನ ಜಾನಪದ ಕಲೆಗಳು ಸಹಜತೆಯನ್ನು ತಂದು ಕೊಡುತ್ತವೆ. ದೀಪಾವಳಿಯ ಪರ್ವದ ಸಂದರ್ಭದಲ್ಲಿ ಈ ಜಾನಪದ ಹಬ್ಬವನ್ನು ಆಯೋಜಿಸಿರುವ ಡಾ.ತಲ್ಲೂರು ಅಭಿನಂದನಾರ್ಹರು. ಪ್ರಾಚೀನ ಕಲೆಗಳ ಮೂಲಕ ಮತ್ತೆ ಸಹಜತೆಯನ್ನು ತರುವ ಈ ಪ್ರಯತ್ನ ಪ್ರಶಂಸನೀಯ.” ಎಂದು ತಿಳಿಸಿದರು.
    ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮಾತನಾಡಿ “ಕರ್ನಾಟಕಕ್ಕೆ ಲೋಕಾಯುಕ್ತನಾಗಿ ಬಂದಾಗ ಸಮಾಜದಲ್ಲಿ ಬಹಳಷ್ಟು ಅನ್ಯಾಯಗಳನ್ನು ಕಂಡೆ. ಈ ಬಗ್ಗೆ ಪರಾಮರ್ಶಿಸಿದಾಗ ಇದಕ್ಕೆ ವ್ಯಕ್ತಿಗಳ ತಪ್ಪು ಅಲ್ಲ. ಸಮಾಜದ ತಪ್ಪು ಎಂದು ಅರಿವಾಯಿತು. ಹಿಂದೆ ಸಮಾಜ ಒಳ್ಳೆಯ ಕೆಲಸಗಳನ್ನು ಮಾಡಿದ ವ್ಯಕ್ತಿಗಳನ್ನು ಸನ್ಮಾನಿಸುವ ಹಾಗೂ ತಪ್ಪು ಕೆಲಸ ಮಾಡಿದವರನ್ನು ಬಹಿಷ್ಕರಿಸುವ ಕಾರ್ಯ ಮಾಡುತ್ತಿತ್ತು. ಆದರೆ ಇಂದು ಶ್ರೀಮಂತಿಕೆ ಹಾಗೂ ಅಧಿಕಾರವನ್ನು ಪೂಜಿಸುವ ಕೆಲಸವಾಗುತ್ತಿದೆ. ಶ್ರೀಮಂತಿಗೆ ಇರುವುದು ತಪ್ಪಲ್ಲ ಆದರೆ ಅದು ನೈತಿಕತೆಯಿಂದ ಬರಬೇಕು. ಮಾವೀಯತೆ ಮರೆಯಬಾರದು. ಮಾನವೀಯತೆ ನಮ್ಮ ಹಿರಿಯರು ಕಟ್ಟಿಕೊಟ್ಟ ಜೀವನ ಮೌಲ್ಯವಾಗಿದೆ. ಅದನ್ನು ಅನುಸರಿಸಿದರೆ ನಾವು ಶಾಂತಿ, ಸಾಮರಸ್ಯದಿಂದ ಬದುಕಬಹುದು.” ಎಂದು ಕಿವಿ ಮಾತು ಹೇಳಿದರು.
    ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇದರ ಪ್ರವರ್ತಕ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ “ಜಾನಪದ ಪರಿಷತ್ತಿನ ಮೂಲಕ ನಾಡಿನ ಜಾನಪದ ಕಲೆಗಳನ್ನು ಉಳಿಸುವ ಕಲಾವಿದರಿಗೆ ಪ್ರೋತ್ಸಾಹ ನೀಡುವ ಕಾರ್ಯ ಮಾಡಲಾಗುತ್ತಿದೆ. ಕೈಯಿಂದ ಹಣ ಖರ್ಚಾದರೂ ಪರವಾಗಿಲ್ಲ ನಮ್ಮ ಜಾನಪದ ಕಲೆಗಳು ಉಳಿಯಬೇಕು ಎನ್ನುವ ಉದ್ದೇಶದಿಂದ ಕುಣಿತ ಭಜನೆ ಸ್ಪರ್ಧೆ, ಜಾನಪದ ವೈಭವ, ಕಲಾ ತಂಡಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ನಿರಂತರ ನಡೆಸಲಾಗುತ್ತಿದೆ.” ಎಂದರು.
    ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಮಾತನಾಡಿ “ಶಾಸ್ತ್ರೀಯ ಚೌಕಟ್ಟಿನೊಳಗೆ ನಮ್ಮ ಜಾನಪದ ಕಲೆಗಳು ಬರುತ್ತಿರುವುದನ್ನು ಕಂಡಿದ್ದೇನೆ. ಅವುಗಳ ಶಾಸ್ತ್ರೀಯ ಅಭ್ಯಾಸದಿಂದ ಇಂತಹ ಬೆಳವಣಿಗೆ ನಡೆದಿದೆ. ಬದಲಾವಣೆ ಜಗದ ನಿಯಮ. ಹಾಗಾಗಿ ಇದರಲ್ಲಿರುವ ಧನಾತ್ಮಕ ಅಂಶಗಳನ್ನು ಪಡೆದುಕೊಂಡು ನಾವು ಮುನ್ನಡೆಯಬೇಕು.” ಎಂದರು.
    ಅದಾನಿ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಮಾತನಾಡಿ “ಪರಿಷತ್ತಿನಿಂದ ಜಾನಪದ ಕಲೆಗಳ ಪುನರುತ್ಥಾನಕ್ಕಾಗಿ ನಡೆಯುವ ಎಲ್ಲಾ ಕಾರ್ಯಗಳನ್ನು ಬೆಂಬಲಿಸಲಾಗುವುದು,” ಎಂದು ಭರವಸೆ ನೀಡಿದರು.
    ಕಾರ್ಯಕ್ರಮದಲ್ಲಿ ಉದ್ಯಮಿ ವರುಣ್ ರಾಮದಾಸ್ ನಾಯಕ್ ಗುಜ್ಜಾಡಿ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇಂದರ ಟ್ರಸ್ಟಿಯಾದ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ, ಪರಿಷತ್ತಿನ ಜಿಲ್ಲಾ ಕಾರ್ಯಾಧ್ಯಕ್ಷ ಬಿ. ಅರುಣ್ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು. ಪರಿಷತ್ತಿನ ಕಾರ್ಯದರ್ಶಿ ರವಿರಾಜ್ ನಾಯಕ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
    ಉಡುಪಿ ತಾಲೂಕು ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಅಮಿತಾಂಜಲಿ ಕಿರಣ್ ನಿರೂಪಿಸಿ, ಖಜಾಂಚಿ ಪ್ರಶಾಂತ್ ಭಂಡಾರಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಕಲಾತಂಡಗಳಿಂದ ಕುಣಿತ ಭಜನೆ. ಹೋಳಿ ಕುಣಿತ, ಗೋಂದೋಳು, ಜಾನಪದ ವಾದ್ಯಗೋಷ್ಠಿ, ‘ಕಲಾಮಯಂ’ ತಂಡದಿಂದ ಜಾನಪದ ವೈಭವ ಮೊದಲಾದ ಕಾರ್ಯಕ್ರಮಗಳು ಪ್ರಸ್ತುತಿಗೊಂಡವು.

    Share. Facebook Twitter Pinterest LinkedIn Tumblr WhatsApp Email
    Previous Articleರಾಜ್ಯೋತ್ಸವ ಕಲಾಸಂಭ್ರಮದಲ್ಲಿ ಹನ್ನೆರಡನೇ ವರ್ಷದ ನುಡಿ ಹಬ್ಬ ಕಲಾ ಸಾಧಕರಿಗೆ ಯಕ್ಷಾಂಗಣ ಗೌರವ ಮತ್ತು ಸರಣಿ ಸಂಸ್ಮರಣೆ
    Next Article ಮೈಸೂರಿನ ಕನ್ನಡ ಭವನದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಗೌರವ ಸನ್ಮಾನ | ನವೆಂಬರ್ 3
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.