ಉಡುಪಿ : ಮಾಹೆಯ ಎಂ.ಐ.ಸಿ.ಯಲ್ಲಿ ನಡೆದ ಅಂತರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ಇಂದ್ರಾಳಿ ಯಕ್ಷಗಾನ ಕೇಂದ್ರದ ಯಕ್ಷರಂಗದ ಕಲಾವಿದರಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಕಾರ್ಯಕ್ರಮವು ದಿನಾಂಕ 14 ಜೂನ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಎಂ.ಐ.ಸಿ. ನಿರ್ದೇಶಕರು, ಮಲ್ಟಿಮೀಡಿಯ ಸಂಪನ್ಮೂಲ ಕೇಂದ್ರದ ಸಂಯೋಜಕಿ ಡಾ. ಶುಭಾ ಎಚ್.ಎಸ್. ಇವರುಗಳು ಉಪಸ್ಥಿತರಿದ್ದರು.