Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯ ಒಕ್ಕಲಿಗರ ಒಕ್ಕೂಟದಿಂದ ರಾಜ್ಯಮಟ್ಟದ ಜಾನಪದ ಸಂಭ್ರಮ
    Cultural

    ರಾಜ್ಯ ಒಕ್ಕಲಿಗರ ಒಕ್ಕೂಟದಿಂದ ರಾಜ್ಯಮಟ್ಟದ ಜಾನಪದ ಸಂಭ್ರಮ

    August 12, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಆಯೋಜಿಸಿದ್ದ ರಾಜ್ಯಮಟ್ಟದ ಜಾನಪದ ಸಂಭ್ರಮ, ಸಾಧಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ, ಪಿ. ಯು. ಸಿ. ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ದಿನಾಂಕ 09 ಆಗಸ್ಟ್ 2025ರ ಶನಿವಾರ ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಮಾತನಾಡಿ “2011ರ ಜನಗಣತಿ ಪ್ರಕಾರ ದೇಶದಲ್ಲಿರುವ ಮಾತೃಭಾಷೆಗಳ ಸಂಖ್ಯೆ 19,569. ಇವುಗಳ ಉಳಿವಿಗೆ ಎಲ್ಲರೂ ಕೆಲಸ ಮಾಡಬೇಕು.ಭಾಷೆಯ ಉಳಿವಿಗಾಗಿ ಕನ್ನಡ ಪ್ರಾಧಿಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಬಲಿಷ್ಠ ನಾಡು ಕಟ್ಟಬೇಕಾದರೆ ಕಲೆ, ಸಾಹಿತ್ಯ, ಸಂಸ್ಕೃತಿ, ಭಾಷೆ ಉಳಿಸಬೇಕು. ವಿವಿಧ ಸಂಸ್ಕೃತಿ, ಭಾಷೆ ಮತ್ತು ಆಚರಣೆ ಹೊಂದಿರುವ ಭಾರತವನ್ನು ಹಾಳು ಮಾಡಲು ಬಿಡಬಾರದು” ಎಂದರು.
    ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾದ ಡಾ. ನಾಗಲಕ್ಷ್ಮೀ ಚೌಧರಿ ಮಾತನಾಡಿ “ಹೆಣ್ಣು ಮಕ್ಕಳು ಸವಾಲು, ಅಡಚಣೆ, ಅವಮಾನವನ್ನು ಧೈರ್ಯದಿಂದ ಎದುರಿಸಬೇಕು. ಸಾಧ್ಯವಾದಷ್ಟು ಮೊಬೈಲ್ ನಿಂದ ದೂರವಿರಿ. ಜಾಲತಾಣದಲ್ಲಿ ಅಪರಿಚಿತರಿಗೆ ಫೋಟೊ, ಕಳುಹಿಸಬಾರದು. ಒಂದು ವೇಳೆ ಯಾವುದಾದರೂ ತೊಂದರೆಗೆ ಸಿಲುಕಿದರೆ ಮೊದಲು ಪೋಷಕರು ಮತ್ತು ಪೊಲೀಸರಿಗೆ ತಿಳಿಸಬೇಕು. ತುರ್ತು ಸಹಾಯವಾಣಿ 112 ಕರೆ ಮಾಡಿದರೆ, 10 ನಿಮಿಷದಲ್ಲಿ ಪೊಲೀಸರು ಬರುತ್ತಾರೆ” ಎಂದರು.
    ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ “ಮಕ್ಕಳಿಗೆ ಸಾಧನೆ ಮಾಡಲು ಸಾಕಷ್ಟು ಅವಕಾಶ ಇದೆ. ಎಂಜಿನಿಯರ್, ವೈದ್ಯರಾಗಬೇಕೆಂದು ಪೋಷಕರು ಮಕ್ಕಳ ಮೇಲೆ ಒತ್ತಡ ಹೇರಬಾರದು. ಅವರ ಆಸಕ್ತಿಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡಿ, ಪ್ರೋತ್ಸಾಹಿಸಬೇಕು” ಎಂದು ಕಿವಿಮಾತು ಹೇಳಿದರು.
    ಇದೇ ವೇಳೆ ಎಸ್‌. ಎಸ್‌. ಎಲ್‌. ಸಿ. ಮತ್ತು ಪಿ. ಯು. ಸಿ. ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು. ಸೃಷ್ಟಿ ಕಲಾ ವಿದ್ಯಾಲಯ ತಂಡದವರು ಜಾನಪದ ನೃತ್ಯ ಪ್ರದರ್ಶಿಸಿದರು.
    ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ. ವಿ. ದೇವರಾಜ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಲೇಖಕ ಮನು ಬಳಿಗಾರ್ ಅಧ್ಯಕ್ಷತೆವಹಿಸಿದ್ದರು. ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ. ಬಿ. ಜಯಪ್ರಕಾಶ ಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರಾದ ಕಿರಣ್ ಗೌಡ, ರೋಲ್ಸ್ ರಾಯ್ಸ್ ಕಂಪನಿ ಉದ್ಯೋಗಿ ಕೆ. ಎಸ್‌. ರಿತುಪರ್ಣ ಹಾಜರಿದ್ದರು.

    baikady Cultural folk roovari
    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ರಾಮ ಗೋವಿಂದ ಸಭಾಂಗಣದಲ್ಲಿ ‘ಅರ್ಪಣಂ’ ನೃತ್ಯ ಕಾರ್ಯಕ್ರಮ | ಆಗಸ್ಟ್ 16 ಮತ್ತು 17
    Next Article ಬುಕ್‌ ಬ್ರಹ್ಮ ಕಾದಂಬರಿ ಸ್ಪರ್ಧೆಯಲ್ಲಿ ʻಪೀಜಿʼ ಕಾದಂಬರಿಗೆ ಪ್ರಶಸ್ತಿಯ ಗರಿ
    roovari

    Add Comment Cancel Reply


    Related Posts

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಕಾರಂತ ಥೀಮ್ ಪಾರ್ಕ್‌ನಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ | ಕೊನೆಯ ದಿನಾಂಕ ಜನವರಿ 20

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.