ಉಡುಪಿ : ವಿಶ್ರಾಂತ ಪ್ರಾಂಶುಪಾಲ, ಸಾಹಿತಿ, ಉಡುಪಿ ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಹಾಗೂ ಡಾ.ಶಿವರಾಮ ಕಾರಂತ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು ಇವರು ಬೆಂಗಳೂರಿನ ಕನ್ನಡ ಜಾನಪದ ಪರಿಷತ್ತು ದಶಮಾನೋತ್ಸವ ಅಂಗವಾಗಿ ನೀಡುವ ‘ಜೀಶಂಪ ರಾಜ್ಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ರಾಜ್ಯ ಪ್ರಥಮ ಜಾನಪದ ಸಮ್ಮೇಳನದಲ್ಲಿ ನಡೆಯಲಿದೆ.
ಡಾ. ಎಕ್ಕಾರು ಜಾನಪದ ಸಂಸ್ಕೃತಿಗೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ನ್ಯಾ.ಅರಳಿ ನಾಗರಾಜ್, ಹಿರಿಯ ಜಾನಪದ ವಿದ್ವಾಂಸರಾದ ಡಾ. ಮೀರಾ ಸಾಬಿಹಳ್ಳಿ ಶಿವಣ್ಣ, ಡಾ.ಅಪ್ಪಗೆರೆ ತಿಮ್ಮರಾಜು ಮತ್ತು ಡಾ. ಬಾನಂದೂರು ಕೆಂಪಯ್ಯ ಅವರಿಗೂ ‘ಜೀಶಂಸ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.
ಶ್ರೇಷ್ಠ ರಂಗವಲ್ಲಿ ಕಲಾವಿದೆ ಡಾ.ಭಾರತಿ ಮರವಂತೆ ಇವರಿಗೆ ‘ಕವಿ ಮಧುರ ಚೆನ್ನ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.
Subscribe to Updates
Get the latest creative news from FooBar about art, design and business.
Previous Article‘ರಕ್ತದಾನದ ಮಹತ್ವ’ ಕಥಾ ಸ್ಪರ್ಧೆ | ಜುಲೈ30
Next Article ಕಾಳಿದಾಸಕಾವ್ಯ – ಕಥಾಸಪ್ತಾಹಃ | ಜೂನ್ 26