Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೂಡಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ‘ಜಿನಧರ್ಮ ದೀಪಿಕೆ’ ಕೃತಿ ಲೋಕಾರ್ಪಣೆ
    Book Release

    ಮೂಡಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ‘ಜಿನಧರ್ಮ ದೀಪಿಕೆ’ ಕೃತಿ ಲೋಕಾರ್ಪಣೆ

    September 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಮೂಡಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜೈನ ಪಾಠ ಉದ್ಘಾಟನೆ ಹಾಗೂ ಜಿನಧರ್ಮ ದೀಪಿಕೆ ಕೃತಿ ಬಿಡುಗಡೆಯ ಸಮಾರಂಭ ದಿನಾಂಕ 09-09-2023ರಂದು ಜರಗಿತು. ಈ ಸಮಾರಂಭದಲ್ಲಿ ಜೈನಮಠ ಕಂಬದ ಹಳ್ಳಿಯ ಸ್ವಸ್ತಿ ಶ್ರೀ ಬಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಮ ಸ್ವಾಮೀಜಿಯವರು ಜೈನ ಪಾಠ ಉದ್ಘಾಟಿಸಿ, ‘ಜಿನಧರ್ಮ ದೀಪಿಕೆ’ ಕೃತಿ ಬಿಡುಗಡೆಗೊಳಿಸಿ ಅಶೀರ್ವಚನಗಳನ್ನು ನೀಡಿ “ಅಹಿಂಸಾ ಪರಮೋಧರ್ಮದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕೆಟ್ಟದ್ದನ್ನು ತ್ಯಜಿಸಿ ಒಳ್ಳೆಯದನ್ನು ಅನುಸರಿಸುವುದೇ ವೃತ, ಮನುಷ್ಯ ಜನ್ಮ ಸಿಗುವುದು ತುಂಬಾ ವಿರಳ. ಈ ಜನ್ಮವನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಜೈನಧರ್ಮದ ತತ್ವಗಳನ್ನು ವಿಜ್ಞಾನವೂ ಕೂಡ ಒಪ್ಪುತ್ತದೆ. ಪ್ರತಿಯೊಂದು ಜೀವಿಯೂ ದೇವರಾಗಬಹುದು. ಅದ್ವೈತ ಜ್ಞಾನದ ಮೂಲಕ ಮೋಕ್ಷವನ್ನು ಸಾಧಿಸುವ ಬದಲಾಗಿ, ಅಹಿಂಸೆಯ ಮೂಲಕ ಮೋಕ್ಷವನ್ನು ಸಂಪಾದಿಸುವುದು ಜೈನಧರ್ಮದ ಉದ್ದೇಶವಾಗಿದೆ. ಆ ಜೈನ ಧರ್ಮದ ಮೂಲಗಳು ಪಂಚಪರಮೇಷ್ಠಿಗಳ ಉಪದೇಶಗಳ ಮೇಲೆ ನಿರೂಪಿತವಾಗಿವೆ” ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್, “ವಿದ್ಯೆಗೆ ಸಂಸ್ಕಾರ ಭೂಷಣ, ಜೈನ ಧರ್ಮದಲ್ಲಿ ಹುಟ್ಟುವುದೇ ಮಹಾ ಪುಣ್ಯ. ಅದರ ಫಲವನ್ನು ನಾವು ಪಡೆಯಬೇಕಾಗಿದೆ ಜೀವನದಲ್ಲಿ ಧಾರ್ಮಿಕತೆಗೆ ಬೆಲೆ ಕೊಡಬೇಕು. ಭಕ್ತಿ, ಭಾವವಿಲ್ಲದೆ ಮನುಷ್ಯ ಜನ್ಮ ಸಾರ್ಥಕತೆ ಪಡೆಯುವುದಿಲ್ಲ. ಜೈನ ಧರ್ಮದಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಂಡಾಗ ಬದುಕು ಪಾವನವಾಗುತ್ತದೆ. ಎಲ್ಲಾ ಪುರಾತನ ಧರ್ಮ ಗ್ರಂಥಗಳಲ್ಲಿ ಜೈನಧರ್ಮದ ಉಲ್ಲೇಖವಿದೆ” ಎಂದು ಹೇಳಿದರು.

    ‘ಜಿನಧರ್ಮ ದೀಪಿಕೆ’ ಪುಸ್ತಕದ ಸಂಪಾದಕರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಸಂಪತ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೂಡಬಿದಿರೆ ಜೈನ್ ಮಿಲನ್‌ನ ಅಧ್ಯಕ್ಷರಾದ ಶ್ರೀ ದಿನೇಶ್ ಆನಡ್ಕ, ಚೌಟರ ಅರಮನೆಯ ಶ್ರೀ ಕುಲದೀಪ್, ಪ್ರಾಂಶುಪಾಲರಾದ ಶ್ರೀ ಪ್ರದೀಪ್‌ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ವಂದಿಸಿದರು. ಉಪನ್ಯಾಸಕ ರಂಜಿತ್ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವಾರ್ಷಿಕೋತ್ಸವ ಸಮಾರಂಭ | ಸೆಪ್ಟೆಂಬರ್ 23ರಂದು  
    Next Article ಪಡುಕೆರೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ”
    roovari

    Add Comment Cancel Reply


    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.