Subscribe to Updates

    Get the latest creative news from FooBar about art, design and business.

    What's Hot

    ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ ಪ್ರಕಟ

    January 24, 2026

    ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನಲ್ಲಿ ‘ಗಾನ ಶಾರದೆಗೆ ನಮನ’ | ಜನವರಿ 26

    January 24, 2026

    ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ‘ಸಂಗೀತೋತ್ಸವ-2026’ | ಜನವರಿ 25

    January 24, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ‘ಜ್ಞಾನ‌ಸುಧಾ’ ವಿಚಾರ ಸಂಕಿರಣ ಸಂವಾದ | ಜುಲೈ 21
    Bharathanatya

    ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ‘ಜ್ಞಾನ‌ಸುಧಾ’ ವಿಚಾರ ಸಂಕಿರಣ ಸಂವಾದ | ಜುಲೈ 21

    July 19, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಉರ್ವದಲ್ಲಿರುವ ನಾಟ್ಯಾರಾಧನಾ ಕಲಾ ಕೇಂದ್ರ (ರಿ.) ಇದರ ತ್ರಿಂಶೋತ್ಸವ ಸಂಭ್ರಮದ ಅಂಗವಾಗಿ ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿ ಮತ್ತು ನಾಟ್ಯಾರಾಧನಾ ತ್ರಿಂಶೋತ್ಸವ ವಿದ್ಯಾರ್ಥಿ ಸಮಿತಿ ಇದರ ಸಹಯೋಗದೊಂದಿಗೆ ಅರ್ಪಿಸುವ ಸರಣಿ ನೃತ್ಯ ಕಾರ್ಯಕ್ರಮ ‘ನೃತ್ಯಾಮೃತ -7’ದಲ್ಲಿ ದಿನಾಂಕ 21-07-2024ರಂದು ಮಧ್ಯಾಹ್ನ ಗಂಟೆ 1-30ರಿಂದ ‘ಜ್ಞಾನ‌ಸುಧಾ’ ವಿಚಾರ ಸಂಕಿರಣ ಸಂವಾದವು ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮವನ್ನು ಶಾರದಾ ವಿದ್ಯಾಲಯ ಸಮೂಹ ಸಂಸ್ಥೆಗಳ ಅಧ್ಯಕ್ಷಾರಾದ ಡಾ. ಎಂ.ಬಿ. ಪುರಾಣಿಕ್ ಇವರು ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ರವಿಶಂಕರ್ ರಾವ್ ಇವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದು, ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

    ‘ನೃತ್ಯ ಸಂಯೋಜನಾ ತಂತ್ರಗಾರಿಕೆ’ ಎಂಬ ವಿಷಯದ ಬಗ್ಗೆ ಸಂವಾದ ಸಹಿತ ಉಪನ್ಯಾಸ ಮತ್ತು ‘ಭರತನಾಟ್ಯ / ಅಭಿನಯ ಪ್ರಸ್ತುತಿಯಲ್ಲಿ ಪ್ರಸ್ತುತತೆ’ ಎಂಬ ವಿಷಯದ ಕುರಿತು ಸಂವಾದಾತ್ಮಕ ಪ್ರಾತ್ಯಕ್ಷಿಕೆಯಿಂದ ಕೂಡಿದ ವಿಚಾರ ಸಂಕಿರಣ ನಡೆಯಲಿದೆ. ಬೆಂಗಳೂರಿನ ಪ್ರಸಿದ್ಧ ಭರತನಾಟ್ಯ ಕಲಾವಿದ ವಿದ್ವಾನ್ ಪಾರ್ಶ್ವನಾಥ್ ಉಪಾಧ್ಯೆ ಇವರು ಸಂಪನ್ಮೂಲ ವ್ಯಕ್ತಿಯಾಗಿ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

    ಶಿಬಿರದಲ್ಲಿ ಭಾಗವಹಿಸಲು ಕನಿಷ್ಠ ಭರತನಾಟ್ಯ ಸೀನಿಯರ್ ಹಂತದ ಅಭ್ಯಾಸ ಮಾಡುತ್ತಿರುವವರು ನೋಂದಾವಣೆಗೆ ಅರ್ಹರೆಂದು ನಾಟ್ಯಾರಾಧನಾ ಕಲಾಕೇಂದ್ರದ ಟ್ರಷ್ಠಿಗಳಾದ ವಿದುಷಿ ಸುಮಂಗಲಾ ರತ್ನಾಕರ್ ರಾವ್, ಶ್ರೀ ಬಿ. ರತ್ನಾಕರ ರಾವ್, ತ್ರಿಂಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಮತ್ತು ಶ್ರೀ ಶಶಿರಾಜ ರಾವ್ ಕಾವೂರ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಯಕ್ಷಗಾನ ತರಗತಿಯ ಉದ್ಘಾಟನೆ
    Next Article ಪುತ್ತೂರಿನಲ್ಲಿ ‘ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ’ | ಜುಲೈ 20
    roovari

    Add Comment Cancel Reply


    Related Posts

    ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ ಪ್ರಕಟ

    January 24, 2026

    ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನಲ್ಲಿ ‘ಗಾನ ಶಾರದೆಗೆ ನಮನ’ | ಜನವರಿ 26

    January 24, 2026

    ಮಂಗಳೂರಿನ ಪುರಭವನದಲ್ಲಿ ವಿದುಷಿ ಶ್ರಾವ್ಯ ಎಂ. ಭಟ್ ರಂಗಪ್ರವೇಶಂ | ಜನವರಿ 24

    January 24, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ‘ಸಾಹಿತ್ಯ ವೈಭವ 2026’ | ಜನವರಿ 25

    January 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.