Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪತ್ರಿಕಾ ಭವನದಲ್ಲಿ ಅಂಕಣ ಬರಹಗಳ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜುಲೈ 10

    July 9, 2025

    ಸಂಸ್ಕಾರ ಭಾರತೀ ಮಂಗಳೂರು ಮಹಾನಗರ ವತಿಯಿಂದ ಗುರುವಂದನಾ ಕಾರ್ಯಕ್ರಮ | ಜುಲೈ 10

    July 9, 2025

    ಮೂಡುಬಿದಿರೆಯ ಶ್ರೀಜೈನ ಮಠದಲ್ಲಿ ಪಾಕ್ಷಿಕ ತಾಳಮದ್ದಳೆ ಸರಣಿ | ಜುಲೈ 10

    July 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಸಾಪ 109ನೇ ಸಂಸ್ಥಾಪನಾ ದಿನಾಚರಣೆ ಮತ್ತು ‘ಮತ ಹಾಕೋಣ ಬನ್ನಿ’ ಜಾಗೃತ ಕಾರ್ಯಕ್ರಮ
    Literature

    ಕಸಾಪ 109ನೇ ಸಂಸ್ಥಾಪನಾ ದಿನಾಚರಣೆ ಮತ್ತು ‘ಮತ ಹಾಕೋಣ ಬನ್ನಿ’ ಜಾಗೃತ ಕಾರ್ಯಕ್ರಮ

    May 7, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ಕಸಾಪ 109ನೇ ಸಂಸ್ಥಾಪನಾ ದಿನಾಚರಣೆ ಮತ್ತು ‘ಮತ ಹಾಕೋಣ ಬನ್ನಿ’ ಜಾಗೃತ ಕಾರ್ಯಕ್ರಮ ದಿನಾಂಕ 05-05-2024ರ ಭಾನುವಾರದಂದು ಶಿವಮೊಗ್ಗದ ಚಾಲುಕ್ಯ ನಗರ ಬಡಾವಣೆಯ ಸಾಹಿತ್ಯ ಗ್ರಾಮದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್.ರಾಜೇಶ್ವರಿ “ಕನ್ನಡ ಸಾಹಿತ್ಯ ಪರಿಷತ್ 109 ವರ್ಷ ಪೂರೈಸಿ ಸಶಕ್ತವಾಗಿ ಮುನ್ನಡೆಯುತ್ತಿರುವುದು ಕನ್ನಡಿಗರು ಹೆಮ್ಮೆಪಡುವ ವಿಷಯ. ಜಿಲ್ಲೆಯಲ್ಲಿ ಕನ್ನಡ ಪರ ಕಾರ್ಯಕ್ರಮಗಳು ನಿರಂತರವಾಗಿ, ವೈವಿಧ್ಯಮಯವಾಗಿ ಹಾಗೂ ಗುಣಮಟ್ಟದ ಚಟುವಟಿಕೆಗಳನ್ನು ನಡೆಸಲು ಪರಿಷತ್‌ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಂದೆ ಸಾಗುವುದು ಅಭಿನಂದನೀಯ. ಈ ಚಟುವಟಿಕೆಗಳಲ್ಲಿ ತಮ್ಮ ಸಹಭಾಗಿತ್ವವೂ ಮುಖ್ಯವಾಗುತ್ತದೆ. ಆಳಿವಿನಂಚಿನಲ್ಲಿರುವ ಜನಪದ ಕಲೆ ಉಳಿಸಬೇಕು. ಕಾಡಿಲ್ಲದೆ ಪರಿಸರ ನಾಶವಾಗುತ್ತಿದೆ. ಮನುಷ್ಯನ ಬದುಕು ಸಂಕಷ್ಟಕ್ಕೆ ಒಳಗಾಗಿದೆ.” ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಮಾತನಾಡಿ “ಪರಿಷತ್ತು ತನ್ನದೇ ಭವನ ಹೊಂದಿದೆ. ವಿಶಾಲ ನಿವೇಶನದಲ್ಲಿ ಕನಸಿನ ಸಾಹಿತ್ಯ ಗ್ರಾಮ ಯೋಜನೆ ನೀಲನಕ್ಷೆಯಂತೆ ನಿರ್ಮಾಣವಾಗಬೇಕಿದೆ. ಇದಕ್ಕೆ ಸರಕಾರ ಹಾಗೂ ಜನಪ್ರತಿನಿಧಿಗಳ ಸಹಕಾರ ಅಗತ್ಯ. ಆದರೆ ಭಾಷೆ, ಸಾಹಿತ್ಯ, ಸಂಸ್ಕೃತಿಯ ಕಡೆ ನಿರಾಸಕ್ತಿ ತಾಳಿರುವುದು ದುರಂತ. ಕಸಾಪ ಸದಸ್ಯರಾಗಲು ತೋರಿಸುವ ಆಸಕ್ತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿಚಾರದಲ್ಲಿ ನಿರಾಸಕ್ತಿ ಹೊಂದಿರುವ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಸಂದರ್ಭ ಇದಾಗಬೇಕು.” ಎಂದರು.
    ಗಾಯಕಿಯರಾದ ಲಕ್ಷ್ಮೀ ಮಹೇಶ್, ನಳಿನಾಕ್ಷಿ, ದೀಪ್ತಿ ಶಿವಕುಮಾರ್, ಸುಶೀಲಾ ಷಣ್ಮುಗಂ, ಕನ್ನಡ ಗೀತೆಗಳನ್ನು ಹಾಡಿದರು. ಮತದಾನ ಜಾಗೃತಿ ಕುರಿತು ಕವಿಗಳಾದ ಡಾ. ಕೆ. ಎನ್. ಗುರುದತ್ತ, ಬಿ. ಟಿ. ಅಂಬಿಕಾ ಮತ್ತು ಡಿ. ಗಣೇಶ್ ಕವನ ವಾಚಿಸಿದರು.

    ಕಸಾಪ ಹಿರಿಯ ಸದಸ್ಯ ಸೊಪ್ಪುಗುಡ್ಡೆ ಲೋಕಯ್ಯ, ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಿ. ಎಂ. ಚಂದ್ರಶೇಖರ, ಆರ್. ಹನುಮಂತಪ್ಪ, ನಳಿನಾಕ್ಷಿ ಅವರನ್ನು ಸನ್ಮಾನಿಸಲಾಯಿತು. ಎಂ.ಎಂ. ಸ್ವಾಮಿ ಸ್ವಾಗತಿಸಿ, ಕೆ.ಎಸ್. ಮಂಜಪ್ಪ ನಿರೂಹಿಸಿ, ಮಹಾದೇವಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಸಾಪ ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕದಿಂದ 110ನೇ ಸಂಸ್ಥಾಪನಾ ದಿನಾಚರಣೆ ಮತ್ತು ಉಪನ್ಯಾಸ ಕಾರ್ಯಕ್ರಮ
    Next Article ಮೂಡುಬಿದಿರೆಯಲ್ಲಿ ‘ಕ್ರಿಯೇಟಿವ್ ಪುಸ್ತಕ ಮನೆ’ ಯ ನೂತಕ ಮಳಿಗೆ ಲೋಕಾರ್ಪಣೆ
    roovari

    Add Comment Cancel Reply


    Related Posts

    ಮಂಗಳೂರಿನ ಪತ್ರಿಕಾ ಭವನದಲ್ಲಿ ಅಂಕಣ ಬರಹಗಳ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜುಲೈ 10

    July 9, 2025

    ಕೊಯ್ಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ‘ಸಾಹಿತ್ಯ ಸಂಘ’ ಉದ್ಘಾಟನೆ | ಜುಲೈ 10

    July 9, 2025

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಅವರ ಕಾದಂಬರಿ ‘ಕಾಯಕ ಕೈಲಾಸ’

    July 9, 2025

    ಕೆ. ಜಿ. ಭಟ್ ಗ್ರಂಥಾಲಯದ ವತಿಯಿಂದ ವಾಚನಾ_ ಪಕ್ಷಾಚರಣೆ

    July 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.