Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ಪ್ರದರ್ಶನದೊಂದಿಗೆ ಸಂಪನ್ನಗೊಂಡ ರೆಮೋನಾ ಎವೆಟ್ ಪಿರೇರಾರ ಅಭಿನಂದನಾ ಕಾರ್ಯಕ್ರಮ

    September 4, 2025

    ಡೊಂಬಿವಲಿ ತುಳುವ ಮಹಾಸಭಾ ಘಟಕದ ಸಂಚಾಲಕರಾಗಿ ಪ್ರೊ. ಜಯ ಸಾಲಿಯನ್ ನೇಮಕ

    September 4, 2025

    ಮಹಾಲಿಂಗೇಶ್ವರ ಯಕ್ಷಗಾನ ಮಂಡಳಿಯ ಸದಸ್ಯರಿಂದ ಯಕ್ಷಗಾನ ತಾಳಮದ್ದಲೆ | ಸೆಪ್ಟೆಂಬರ್ 5 

    September 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಡನೀರು ಮಠದಲ್ಲಿ ದಿನೇಶ ಅಮ್ಮಣ್ಣಾಯರಿಗೆ ‘ಕಡಬ ಸಂಸ್ಮರಣಾ ಪ್ರಶಸ್ತಿ’ ಪ್ರದಾನ
    Awards

    ಎಡನೀರು ಮಠದಲ್ಲಿ ದಿನೇಶ ಅಮ್ಮಣ್ಣಾಯರಿಗೆ ‘ಕಡಬ ಸಂಸ್ಮರಣಾ ಪ್ರಶಸ್ತಿ’ ಪ್ರದಾನ

    September 4, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬದಿಯಡ್ಕ : ಮಂಗಳೂರು ರಥಬೀದಿಯಲ್ಲಿರುವ ‘ಕಡಬ ಸಂಸ್ಮರಣಾ ಸಮಿತಿ’ಯ 6ನೇ ವರ್ಷದ ವಾರ್ಷಿಕೋತ್ಸವ ಮತ್ತು ಯಕ್ಷಗಾನದಲ್ಲಿ ಮೆರೆದು ಖ್ಯಾತರಾಗಿ ಆಗಲಿದ ದಿ. ಕಡಬ ನಾರಾಯಣ ಆಚಾರ್ಯ ಮತ್ತು ದಿ. ಕಡಬ ವಿನಯ ಆಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 31 ಆಗಸ್ಟ್ 2025ರಂದು ಎಡನೀರು ಮಠದಲ್ಲಿ ನಡೆಯಿತು.

    ಹಿರಿಯ ಭಾಗವತ ದಿನೇಶ ಅಮ್ಮಣ್ಣಾಯ ದಂಪತಿಗೆ ಕಡಬ ಸಂಸ್ಮರಣಾ ಪ್ರಶಸ್ತಿಯನ್ನು ರಜತ ಪದಕದೊಂದಿಗೆ ಸಾಂಪ್ರದಾಯಿಕ ರೀತಿಯಲ್ಲಿ ಅರ್ಪಿಸಿ ಗೌರವಿಸಲಾಯಿತು. ಈ ವೇಳೆ ಕಡಬ ಸಂಸ್ಮರಣಾ ಸಮಿತಿ ಪದಾಧಿಕಾರಿಗಳು ಮತ್ತು ಕಡಬ ಕುಟುಂಬದವರು ಉಪಸ್ಥಿತರಿದ್ದರು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಆಶೀರ್ವಚನ ನೀಡಿ “ಕಡಬ ಪ್ರಶಸ್ತಿ ಪಡೆದ ದಿನೇಶ್ ಅಮ್ಮಣ್ಣಾಯರಿಗೆ ಇನ್ನಷ್ಟು ಕಲಾ ಸೇವೆ ಮಾಡುವ ಯೋಗ ಭಾಗ್ಯ ಒದಗಲಿ” ಎಂದು ಆಶಿಸಿದರು.

    ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶಾಮ ಭಟ್ ಉದ್ಘಾಟಿಸಿ “ದಕ್ಷಿಣ ಕನ್ನಡ ಸಹಿತ ಕರಾವಳಿಯಲ್ಲಿ ಇತ್ತೀಚಿನ ಗಣೇಶೋತ್ಸವ ಸಂದರ್ಭಗಳಲ್ಲಿ ರಾತ್ರಿ 10ರ ಬಳಿಕ ಯಕ್ಷಗಾನ ಪ್ರದರ್ಶನದ ಧ್ವನಿ ವರ್ಧಕ ಬಳಕೆ ನಿಷೇಧಿಸಿರುವುದು ವಿಷಾದಕರ ಮತ್ತು ಆಘಾತಕಾರಿ ಬೆಳವಣಿಗೆ. ಧ್ವನಿವರ್ಧಕ ನಿಯಂತ್ರಣ ಕಾನೂನು ಕಾಯಂ ಆದರೆ ಯಕ್ಷಗಾನ ಕ್ಷೇತ್ರಕ್ಕೆ ದೊಡ್ಡ ಹೊಡೆತ ನೀಡಲಿದೆ. ಶಿಸ್ತಿನ ಬದುಕಿನಿಂದ ಆರೋಗ್ಯ ಸಾಮರ್ಥ್ಯ ಕಾಪಾಡಿಕೊಂಡರೆ ಮಾತ್ರ ಕಲಾವಿದರಿಗೆ ಸುದೀರ್ಘ ರಂಗದಲ್ಲಿ ತೊಡಗಿಸಿಕೊಳ್ಳಲು ಸಾಧ್ಯ” ಎಂದರು. ತಾಳಮದ್ದಳೆ ಕ್ಷೇತ್ರದ ಖ್ಯಾತ ಅರ್ಥಧಾರಿ, ಕಟೀಲು ಮೇಳದ ಪ್ರಬಂಧಕ ಸುಣ್ಣಂಬಳ ವಿಶ್ವೇಶ್ವರ ಭಟ್ ಅಭಿನಂದನಾ ಭಾಷಣ ಮಾಡಿ “ಯಕ್ಷಗಾನ ರಂಗದಲ್ಲೇ ಅತ್ಯಪೂರ್ವ ನಿಷ್ಠೆ, ಶಿಸ್ತು ಮತ್ತು ರಂಗದಲ್ಲಿ ಭಾವ ತರಂಗವನ್ನೆಬ್ಬಿಸುವ ಅಪರೂಪದ ಭಾಗವತ ದಿನೇಶ ಅಮ್ಮಣ್ಣಾಯರು” ಎಂದರು.

    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಹಿರಿಯ ಕಲಾವಿದ ಎಂ.ಕೆ. ರಮೇಶ ಆಚಾರ್ಯ ಕಡಬದ್ವಯರ ಸಂಸ್ಮರಣಾ ಭಾಷಣ ಮಾಡಿದರು. ಮಂಗಳೂರು ಕಡಬ ಸಂಸ್ಮರಣಾ ಸಮಿತಿ ಅಧ್ಯಕ್ಷ ಸುಂದರ ಆಚಾರ್ಯ ಬೆಳುವಾಯಿ ಅಧ್ಯಕ್ಷತೆ ವಹಿಸಿದ್ದರು. ಪುಳಿಂಚ ಸೇವಾ ಪ್ರತಿಷ್ಠಾನದ ಅಧ್ಯಕ್ಷ ವಕೀಲ ಶ್ರೀಧರ ಶೆಟ್ಟಿ ಪುಳಿಂಚ, ಮೂಲ್ಕಿ ಮಯೂರಿ ಫೌಂಡೇಶನ್ ಅಧ್ಯಕ್ಷ ಜಯ ಕೆ. ಶೆಟ್ಟಿ, ಆರ್.ಎಸ್.ಎಸ್. ಹಿರಿಯ ಕಾರ್ಯಕರ್ತ ಬಾಲಕೃಷ್ಣ ಪಿ. ಭಂಡಾರಿ, ಕಟಪಾಡಿ ಆನೆಗುಂದಿ ಪೀಠದ ಪ್ರಧಾನ ಕಾವ್ಯದರ್ಶಿ ಎಂ.ಬಿ. ಲೋಕೇಶ ಆಚಾರ್ಯ ಪಾಲ್ಗೊಂಡರು, ಎಡನೀರು ಮಠದ ಆಡಳಿತಾಧಿಕಾರಿ ರಾಜೇಂದ್ರ ಕಲ್ಲೂರಾಯ ಉಪಸ್ಥಿತರಿದ್ದರು. ಸಂಸ್ಮರಣಾ ಸಮಿತಿ ಕಾರ್ಯದರ್ಶಿ ಗಿರೀಶ್ ಕಾವೂರು ಸ್ವಾಗತಿಸಿ, ಸಮಿತಿ ಗೌರವಾಧ್ಯಕ್ಷ ಜಿ.ಟಿ. ಆಚಾರ್ಯ ಮುಂಬಯಿ ಪ್ರಾಸ್ತಾವಿಕ ಮಾತನಾಡಿದರು. ಜತೆ ಕಾರ್ಯದರ್ಶಿ ಜಗದೀಶ್ ಬೇಲಾಡಿ ವಂದಿಸಿದರು. ವಾದಿರಾಜ ಕಲ್ಲೂರಾಯ ಕನ್ನಿಕಂಬಳ ಕಾರ್ಯಕ್ರಮ ನಿರೂಪಿಸಿದರು.

    award baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಸಿಂಗಾಪುರದಲ್ಲಿ ಯಕ್ಷದೇಗುಲ ತಂಡದ ‘ರತ್ನಾವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ
    Next Article ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಸ್ತರಣಾ ಉಪನ್ಯಾಸ ಮಾಲಿಕೆ’
    roovari

    Add Comment Cancel Reply


    Related Posts

    ನೃತ್ಯ ಪ್ರದರ್ಶನದೊಂದಿಗೆ ಸಂಪನ್ನಗೊಂಡ ರೆಮೋನಾ ಎವೆಟ್ ಪಿರೇರಾರ ಅಭಿನಂದನಾ ಕಾರ್ಯಕ್ರಮ

    September 4, 2025

    ಡೊಂಬಿವಲಿ ತುಳುವ ಮಹಾಸಭಾ ಘಟಕದ ಸಂಚಾಲಕರಾಗಿ ಪ್ರೊ. ಜಯ ಸಾಲಿಯನ್ ನೇಮಕ

    September 4, 2025

    ಮಹಾಲಿಂಗೇಶ್ವರ ಯಕ್ಷಗಾನ ಮಂಡಳಿಯ ಸದಸ್ಯರಿಂದ ಯಕ್ಷಗಾನ ತಾಳಮದ್ದಲೆ | ಸೆಪ್ಟೆಂಬರ್ 5 

    September 4, 2025

    ವೃಂದಾಗೆ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ತೃತೀಯ ರ‍್ಯಾಂಕ್ 

    September 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.