Subscribe to Updates

    Get the latest creative news from FooBar about art, design and business.

    What's Hot

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ

    January 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ‘ಕದಂಬೋತ್ಸವ 2025’ | ಏಪ್ರಿಲ್ 12 ಮತ್ತು 13
    Awards

    ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ‘ಕದಂಬೋತ್ಸವ 2025’ | ಏಪ್ರಿಲ್ 12 ಮತ್ತು 13

    April 9, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬನವಾಸಿ : ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ‘ಕದಂಬೋತ್ಸವ 2025’ ಕಾರ್ಯಕ್ರಮವನ್ನು ದಿನಾಂಕ 12 ಮತ್ತು 13 ಏಪ್ರಿಲ್ 2025ರಂದು ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ, ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ಗೋಷ್ಠಿಗಳು ಹಾಗೂ ಕಲಾ ಸಂಭ್ರಮ ಪ್ರಸ್ತುತಗೊಳ್ಳಲಿವೆ.

    ದಿನಾಂಕ 12 ಏಪ್ರಿಲ್ 2025ರಂದು ಸಂಜೆ 5-00 ಗಂಟೆಗೆ ಈ ಕಾರ್ಯಕ್ರಮವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಇವರು ಉದ್ಘಾಟಿಸಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಇವರಿಗೆ 2024-25ನೇ ಸಾಲಿನ ‘ಪಂಪ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಕದಂಬ ಸಾಂಸ್ಕೃತಿಕ ಕಲಾ ಮೆರವಣಿಗೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಭಕ್ತಿಗೀತೆ, ನೃತ್ಯ ರೂಪಕ, ಜನಪದ ಗಾಯನ, ಭರತನಾಟ್ಯ, ಗೊಂಬೆಯಾಟ ಪ್ರದರ್ಶನ, ಸಂಗೀತ, ನೃತ್ಯ, ವಾದ್ಯ ಸಂಗೀತ ಜರಗಲಿವೆ.

    ದಿನಾಂಕ 13 ಏಪ್ರಿಲ್ 2025ರಂದು ಬೆಳಿಗ್ಗೆ 11-00 ಗಂಟೆಗೆ ನಡೆಯಲಿರುವ ಕವಿ ಕುಂಚ ಗಾಯನ ಇತಿಹಾಸ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಹಾಗೂ ಕಾದಂಬರಿಕಾರರಾದ ಶ್ರೀಮತಿ ಭಾಗೀರಥಿ ಹೆಗಡೆ ಇವರು ವಹಿಸಲಿದ್ದು, ಕವಿಗಳು, ಗಾಯಕರು ಮತ್ತು ಚಿತ್ರ ಕಲಾವಿದರು ಭಾಗವಹಿಸಲಿದ್ದಾರೆ. ಸಂಜೆ 4-30 ಗಂಟೆಗೆ ಭಕ್ತಿಗೀತೆ, ಯಕ್ಷ ನೃತ್ಯ, ಸುಗಮ ಸಂಗೀತ, ಭರತನಾಟ್ಯ, ಹಿಂದೂಸ್ತಾನಿ ಸಂಗೀತ, ಕಥಕ್ ನೃತ್ಯ, ಜಾದೂ ಪ್ರದರ್ಶನ, ನೃತ್ಯ ವೈಭವ, ಹಾಸ್ಯ ಸಂಜೆ, ವಾದ್ಯ ನಿನಾದ, ವಿಶೇಷ ಗಾಯನ ಕಾರ್ಯಕ್ರಮಗಳು ಹಾಗೂ ಸಂಜೆ 7-00 ಗಂಟೆಗೆ ಸಮಾರೋಪ ಸಮಾರಂಭ ಪ್ರಸ್ತುತಗೊಳ್ಳಲಿವೆ.

    award baikady bharatanatyam Cultural dance felicitation Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡು ಕನ್ನಡ ಗ್ರಾಮದಲ್ಲಿ ರಂಗ ಸಾಧಕರಿಗೆ ‘ವಿಶ್ವ ರಂಗಭೂಮಿ ಪ್ರಶಸ್ತಿ – 2025’ ಪ್ರದಾನ
    Next Article ಕೊಡವ ಜಾನಪದ ನಾಳ್ ಮತ್ತು ಮುಕ್ಕಾಟಿರ ಶಿವು ಮಾದಪ್ಪ ನೆನಪಿನಲ್ಲಿ ಸ್ಮರಣಿಕೆ ವಿತರಣಾ ಕಾರ್ಯಕ್ರಮ
    roovari

    Add Comment Cancel Reply


    Related Posts

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ

    January 3, 2026

    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04

    January 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.