Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಗೀತ ವಿದ್ಯಾನಿಲಯದ ವಾರ್ಷಿಕೋತ್ಸವ | ಡಿಸೆಂಬರ್ 3 ಮತ್ತು 10
    Bharathanatya

    ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಗೀತ ವಿದ್ಯಾನಿಲಯದ ವಾರ್ಷಿಕೋತ್ಸವ | ಡಿಸೆಂಬರ್ 3 ಮತ್ತು 10

    December 2, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಸಂಗೀತ ವಿದ್ಯಾನಿಲಯದ 30ನೇ ವಾರ್ಷಿಕೋತ್ಸವದ ಪ್ರಯುಕ್ತ ‘ಸಂಗೀತೋತ್ಸವ’ವು ದಿನಾಂಕ 03-12-2023ರಂದು ಡಾನ್ ಬೊಸ್ಕೋ ಹಾಲ್ ಮತ್ತು ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್ (ರಿ.) ಇದರ 88ನೇ ವಾರ್ಷಿಕೋತ್ಸವದ ಪ್ರಯುಕ್ತ ‘ನೃತ್ಯೋತ್ಸವ’ವು ದಿನಾಂಕ 10-12-2023ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರಸ್ತುತಗೊಳ್ಳಲಿದೆ.

    ದಿನಾಂಕ 03-12-2023ರಂದು ಗಂಟೆ 2.30ಕ್ಕೆ ವಿದುಷಿ ಶ್ರೀಮತಿ ಉಷಾ ಪ್ರವೀಣ್ ಮತ್ತು ಶ್ರೀಮತಿ ನಿಶ್ವೀತಾ ಶರಣ್ ಇವರ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ. ಮೃದಂಗದಲ್ಲಿ ಮಂಗಳೂರಿನ ವಿದ್ವಾನ್ ಶ್ರೀ ಮನೋಹರ್ ರಾವ್ ಮತ್ತು ವಯೋಲಿನ್ ನಲ್ಲಿ ಉಡುಪಿಯ ವಿದ್ವಾನ್ ಶ್ರೀಧರ್ ಅಚಾರ್ ಪಾಡಿಗಾರ ಸಾಥ್ ನೀಡಲಿದ್ದಾರೆ. ಗಂಟೆ 5ಕ್ಕೆ ಮೈಸೂರಿನ ವಿದುಷಿ ಡಾ. ಸುಕನ್ಯಾ ಪ್ರಭಾಕರ್ ಮತ್ತು ವಿದುಷಿ ನಿತ್ಯಶ್ರೀ ಆರ್. ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ. ವಿದ್ವಾನ್ ಕೆ.ಎಚ್. ರವಿಕುಮಾರ್ ಮೃದಂಗದಲ್ಲಿ ಮತ್ತು ಕಾಸರಗೋಡಿನ ವಿದ್ವಾನ್ ಗಣರಾಜ ಕಾರ್ಲೆ ವಯೋಲಿನ್ ಸಾಥ್ ನೀಡಲಿದ್ದಾರೆ.

    ಸಭಾ ಕಾರ್ಯಕ್ರಮದಲ್ಲಿ ಮೈಸೂರಿನ ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟ್ ಇದರ ನಿರ್ದೇಶಕರಾದ ಪ್ರೊ. ಕೆ. ರಾಮಮೂರ್ತಿ ರಾವ್ ಮತ್ತು ಕಲಾವಿದರಾದ ಇಸ್ಟರ್ ನೊರೊನ್ಹಾ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ವಿದುಷಿ ಡಾ. ಸುಕನ್ಯಾ ಪ್ರಭಾಕರ್ ಇವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ನಂತರ ಇಸ್ಟರ್ ನೊರೊನ್ಹಾ ಮತ್ತು ಕದ್ರಿ ಸಂಗೀತ ವಿದ್ಯಾನಿಲಯದ ತಂಡದವರಿಂದ ಸಂಗೀತ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ.

    ದಿನಾಂಕ 10-12-2023ರಂದು ಗಂಟೆ 5ಕ್ಕೆ ನಾಟ್ಯ ವಿಶಾರಾದ ಗುರುಕುಲ ಭೂಷಣ ಇದರ ವಿದ್ಯಾರ್ಥಿಗಳಿಂದ, ವಿದ್ವಾನ್ ಶ್ರೀ ಯು.ಕೆ. ಪ್ರವೀಣ್ ಮತ್ತು ವಿದುಷಿ ನಿಶ್ವೀತಾ ಶರಣ್ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಹಿರಿಯ ಪತ್ರಕರ್ತರಾದ ಶ್ರೀ ಮನೋಹರ್ ಪ್ರಸಾದ್ ಮತ್ತು ಮಹಾರಾಷ್ಟ್ರದ ಕೆ.ಸಿ.ಇ. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ವೈ. ಸುಬ್ರಹ್ಮಣ್ಯ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಮಂಜೇಶ್ವರದ ನಾಟ್ಯ ಕಲಾ ಸಿಂಧು ವಿದ್ವಾನ್ ಬಾಲಕೃಷ್ಣ ಬಿ. ಇವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಕದ್ರಿಯಲ್ಲಿ ‘ರಜತಪರ್ವ ಸರಣಿ – ತಾಳಮದ್ದಳೆ ಸಪ್ತಾಹ’ | ಡಿಸೆಂಬರ್ 3ರಿಂದ 9
    Next Article ಕಾಸರಗೋಡಿನ ಪದ್ಮಗಿರಿ ಕಲಾ ಕುಟೀರದಲ್ಲಿ ಬಾನಾಸು ಅವರಿಗೆ ಹುಟ್ಟೂರ ಗೌರವ
    roovari

    Add Comment Cancel Reply


    Related Posts

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

    June 28, 2025

    ನೃತ್ಯಾಂತರಂಗದಲ್ಲಿ ಶಿಲ್ಪಾ ನಂಜಪ್ಪರವರಿಂದ ಕೊಡವ ಕಥೆಗಳ ಭರತನಾಟ್ಯ ರೂಪಕ

    June 26, 2025

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) – ಕಲಾವಿದರಿಂದ ಅರ್ಜಿ ಆಹ್ವಾನ | ಜುಲೈ 01

    June 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.