Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಗಾಯಕ ರತ್ನ ಡಾ. ಬಿ. ದೇವೇಂದ್ರಪ್ಪ

    June 3, 2025

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025

    ಕೊಂಡೆವೂರಿನಲ್ಲಿ ತುಲುವೆರೆ ಕಲ ಸಂಘಟನೆಯ ಎರಡನೇ ‘ವರ್ಸೋಚ್ಚಯ’

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿಯಲ್ಲಿ ಕೈಮುಡಿಕೆ ಪುತ್ತರಿ ಕೋಲ್ ಮಂದ್ : ವಿವಿಧ ಸ್ಪರ್ಧೆಗೆ ಆಹ್ವಾನ
    Competition

    ಮಡಿಕೇರಿಯಲ್ಲಿ ಕೈಮುಡಿಕೆ ಪುತ್ತರಿ ಕೋಲ್ ಮಂದ್ : ವಿವಿಧ ಸ್ಪರ್ಧೆಗೆ ಆಹ್ವಾನ

    December 9, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ದಿನಾಂಕ 17 ಡಿಸೆಂಬರ್ 2024ರಂದು ನಡೆಯಲಿದೆ ಎಂದು ಮೂರು ನಾಡಿನ ತಕ್ಕಮುಖ್ಯಸ್ಥ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಈಚೂರುವಿನ ದವಸ ಭಂಡಾರದ ಸಭಾಂಗಣದಲ್ಲಿ ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್ ಈ ಮೂರು ನಾಡುಗಳಿಗೆ ಸೇರಿದ ಇತಿಹಾಸ ಪ್ರಸಿದ್ಧದ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಕೈಮುಡಿಕೆ ಕೋಲ್ ಮಂದ್ ನಡೆಸಲು ಒಮ್ಮತದ ತೀರ್ಮಾನ ಕೈಕೊಳ್ಳಲಾಯಿತು. ನಂತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಬಾರಿಯೂ ಕೈಮುಡಿಕೆ ಪುತ್ತರಿ ಕೋಲ್ ಮಂದನ್ನು ವಿಜೃಂಭಣೆಯಿಂದ ಸಾರ್ವಜನಿಕವಾಗಿ ಆಚರಿಸುವಂತೆ ಹಾಗೂ ವಿವಿಧ ಕಾರ್ಯಕ್ರಮ ನಡೆಸುವಂತೆ ತೀರ್ಮಾನಿಸಲು ಸಭೆ ನಡೆಸುತ್ತಿರುವುದಾಗಿ ಹೇಳಿದರು.

    ಅಂದು ಬೆಳಿಗ್ಗೆ 10-00 ಗಂಟೆಗೆ ಮೂರು ನಾಡಿನವರು ಮೂರು ಕಡೆಯಿಂದ ಓಡಿಬಂದು ಮಂದ್ ಮಧ್ಯೆದಲ್ಲಿರುವ ಅರಳಿ ಮರಕ್ಕೆ ಕೋಲು ಹೊಡೆಯುವ ಮೂಲಕ ಮಂದ್ ಹಿಡಿಯುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ನಂತರ ವಿವಿಧ ಪೈಪೋಟಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಪ್ರಾಥಮಿಕ ಶಾಲೆ, ಪ್ರೌಢ ಹಾಗೂ ಪದವಿ ಪೂರ್ವ ಮತ್ತು ಪದವಿ ಹಾಗೂ ಸಾರ್ವಜನಿಕರು ಎಂದು ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಪುತ್ತರಿ ಕೋಲಾಟ್, ಉಮ್ಮತ್ತಾಟ್, ಬೊಳಕಾಟ್, ಕತ್ತಿಯಾಟ್, ಬಾಳೋಪಾಟ್, ಪರೆಯಕಳಿ, ವಾಲಗತ್ತಾಟ್, ಕೊಡವ ಪಾಟ್ ಪೈಪೋಟಿ ಸೇರಿದಂತೆ ಸ್ಥಳೀಯ ಬುಡಕಟ್ಟು ಸಮುದಾಯದ ಜನರಿಗೆ ಯರವಾಟ್ ಪೈಪೋಟಿ ಇರುತ್ತದೆ.

    ಕೈಮುಡಿಕೆ ಮಂದ್ ಕಾರ್ಯದರ್ಶಿ ನಾಳಿಯಮ್ಮನ ಉಮೇಶ್ ಕೇಚಮಯ್ಯ ಸ್ವಾಗತಿಸಿ, ಕಳೆದ ವರ್ಷದ ವರದಿಯನ್ನು ಓದಿ ಅನುಮೋದನೆ ಪಡೆದರು. ಈ ಸಂದರ್ಭದಲ್ಲಿ ಬೇರಳಿನಾಡ್ ತಕ್ಕರಾದ ಮಳವಂಡ ಭುವೇಸ್ ದೇವಯ್ಯ, ಕುತ್ತ್ ನಾಡ್ ತಕ್ಕ ಪಂದಿಮಾಡ ರಮೇಶ್ ಅಚ್ಚಪ್ಪ, ಕೈಮುಡಿಕೆ ಮಂದ್‌ ಸಹಕಾರ್ಯದರ್ಶಿ ಅಪ್ಪಂಡೇರಂಡ ಮನು ಮೋಹನ್, ಹಿರಿಯರಾದ ತೀತಿಮಾಡ ಕುಶಾಲಪ್ಪ, ಮೂರು ನಾಡಿನ ವಿವಿಧ ಗ್ರಾಮಗಳ ತಕ್ಕ ಮುಖ್ಯಸ್ಥರು ಉಪಸ್ಥಿತರಿದ್ದರು. ಪೈಪೋಟಿಗೆ ಭಾಗವಹಿಸುವವರು ಅಂದು ಬೆಳಿಗ್ಗೆ 10-00 ಗಂಟೆಯ ಒಳಗೆ ಸ್ಥಳದಲ್ಲಿಯೇ ಹೆಸರು ನೊಂದಾಯಿಸಿಕೊಳ್ಳಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ಚಮ್ಮಟೀರ ಪ್ರವೀಣ್ ಉತ್ತಪ್ಪ -9880967573 ಅಥವಾ ಅಪ್ಪಂಡೇರಂಡ ಮನು ಮೋಹನ್-9901262398 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸೊರಬದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸಾಹಿತ್ಯ ರಚನಾ ಕಮ್ಮಟ
    Next Article ಉಡುಪಿ ಜಿಲ್ಲಾ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ | ಡಿಸೆಂಬರ್ 14
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.