Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನ | ಡಿಸೆಂಬರ್ 19

    December 18, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ವಾದಿರಾಜ-ಕನಕ ಗಾಯನ ಸ್ಪರ್ಧೆ’ | ಡಿಸೆಂಬರ್ 27

    December 18, 2025

    ಮೂಡಬಿದಿರೆ ಜೈನಮಠದಲ್ಲಿ ‘ಮಹಾತ್ಮ’ ತುಳು ತಾಳಮದ್ದಳೆ

    December 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುಳ್ಯದ ಅವನಿ ಎಂ. ಎಸ್. ಗೆ ‘ಕಲಾ ಚೈತನ್ಯ’ ಪ್ರಶಸ್ತಿ
    Awards

    ಸುಳ್ಯದ ಅವನಿ ಎಂ. ಎಸ್. ಗೆ ‘ಕಲಾ ಚೈತನ್ಯ’ ಪ್ರಶಸ್ತಿ

    February 9, 2024Updated:February 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಾಸರಗೋಡಿನ ಗಡಿನಾಡು ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ ನೀಡುವ ‘ಕಲಾ ಚೈತನ್ಯ’ ಪ್ರಶಸ್ತಿಗೆ ಸುಳ್ಯದ ಕಲಾ ಪ್ರತಿಭೆ ಅವನಿ ಎಂ. ಎಸ್. ಆಯ್ಕೆಯಾಗಿದ್ದಾಳೆ.

    ದ.ಕ ಜಿಲ್ಲೆ ಸುಳ್ಯ ತಾಲೂಕು ಸುಳ್ಯ ಕಸಬಾ ಗ್ರಾಮದ ನೀರಬಿದಿರೆ ನಿವಾಸಿಗಳಾದ ಮೋಂಟಡ್ಕ ಶಶಿಧರ ಎಂ. ಜೆ. ಮತ್ತು ರೇಷ್ಮಾ ದಂಪತಿಗಳ ಮುದ್ದಿನ ಪುತ್ರಿಯಾದ ಕು. ಅವನಿ ಎಂ. ಎಸ್. ಪ್ರಸ್ತುತ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಾಂಗಮಾಡುತ್ತಿದ್ದಾಳೆ.
    ತನ್ನ ಒಂಬತ್ತನೆಯ ವಯಸ್ಸಿನಲ್ಲಿಯೇ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಮುಡಿಗೇರಿಸಿಕೊಂಡು ಎಲ್ಲರ ಪ್ರಶಂಸೆಗೆ ಪಾತ್ರರಾಗಿರುವ ಇವಳು ಎಲ್.ಕೆ.ಜಿ ಓದುತ್ತಿರುವಾಗಲೇ ಹಲವಾರು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ, ಪುರಸ್ಕಾರಗಳನ್ನು ಗಿಟ್ಟಿಸಿಕೊಂಡಿದ್ದಾಳೆ. ಸಂಗೀತ, ಯೋಗ, ನೃತ್ಯ, ಚೆಸ್, ಚಿತ್ರಕಲೆ ಭರತನಾಟ್ಯ, ನಟನೆ, ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಇವಳ ಹವ್ಯಾಸವಾಗಿದೆ.

    ತನ್ನ 4ನೇ ವಯಸ್ಸಿನಿಂದ ಸುಗಮ ಸಂಗೀತವನ್ನು ಗುರುಗಳಾದ ಡಾ. ಕಿರಣ್ ಕುಮಾರ್ ಗಾನಸಿರಿ ಪುತ್ತೂರು ಇವರಿಂದ ತರಬೇತಿಯನ್ನು ಪಡೆಯುತ್ತಿರುವ ಈಕೆ, ವಿದ್ವಾನ್ ಕಾಂಚನಾ ಈಶ್ವರ ಭಟ್ ಇವರ ಸುನಾದ ಸಂಗೀತ ಕಲಾಶಾಲೆ ಸುಳ್ಯ ಇಲ್ಲಿ ಶಾಸ್ತ್ರೀಯ ಸಂಗೀತದ ಅಭ್ಯಾಸವನ್ನು ಮಾಡುತ್ತಿದ್ದಾಳೆ. ಯೋಗಾಭ್ಯಾಸವನ್ನು ತನ್ನ 5ನೇ ವಯಸಿನಿಂದಲೇ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಯೋಗ ಗುರುಗಳಾದ ಶ್ರೀ ಸಂತೋಷ್ ಮುಂಡಕಜೆಯವರಿಂದ ಪಡೆಯುತ್ತಿದ್ದಾಳೆ. ಚಿತ್ರಕಲೆಯನ್ನು 1ನೇ ತರಗತಿಯಿಂದ ಕ್ರಿಯೇಟಿವ್ ಆರ್ಟ್ಸ್‌ನ ಪ್ರಸನ್ನ ಐವರ್ನಾಡು ಇವರಿಂದ ಹಾಗೂ ಭರತನಾಟ್ಯವನ್ನು ಕೇರಳದ ‘ಕಲಾಕ್ಷೇತ್ರ’ ಇದರ ನಿರ್ದೇಶಕಿಯಾದ ವಿದುಷಿ ಶ್ರೀಮತಿ ಸುಜಾತ ಇವರಲ್ಲಿ ಅಭ್ಯಾಸ ಮಾಡುತ್ತಿದ್ದಾಳೆ.

    Share. Facebook Twitter Pinterest LinkedIn Tumblr WhatsApp Email
    Previous Articleಅಲೆವೂರಾಯ ಪ್ರತಿಷ್ಠಾನದ ಯಕ್ಷ ತ್ರಿವೇಣಿಯಲ್ಲಿ ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನ
    Next Article ಕಲಾಂಗಣದಲ್ಲಿ ಮಾಂಡ್ ಸೊಭಾಣ್ ತಿಂಗಳ ಕಾರ್ಯಕ್ರಮ ಹಾಗೂ ನಾಟಕ ಪ್ರದರ್ಶನ
    roovari

    Add Comment Cancel Reply


    Related Posts

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ 2025ನೇ ಸಾಲಿನ ಪ್ರಶಸ್ತಿ ಪ್ರಕಟ

    December 17, 2025

    ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಇವರು ‘ವಡ್ಡರ್ಸೆ ಪ್ರಶಸ್ತಿ’ಗೆ ಆಯ್ಕೆ

    December 16, 2025

    ಕಾಂತಾವರ ಕನ್ನಡ ಸಂಘದ 2025ರ ಸಾಲಿನ ವಾರ್ಷಿಕ ಪ್ರಶಸ್ತಿಗಳ ಘೋಷಣೆ

    December 15, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ‘ರಾಗ ಸುಧಾರಸ 2025’ | ಡಿಸೆಂಬರ್ 13ರಿಂದ 20

    December 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.