Subscribe to Updates

    Get the latest creative news from FooBar about art, design and business.

    What's Hot

    ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣ

    October 25, 2025

    ಶ್ರೀ ವೀರಾಂನೇಯ ಸ್ವಾಮಿ ದೇವಸ್ಥಾನದಲ್ಲಿ ‘ದೀಪಾವಳಿ ಕುಟುಂಬ ಮಿಲನ’ | ಅಕ್ಟೋಬರ್ 31

    October 25, 2025

    ಉಪ್ಪಿನಂಗಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ‘ಕನ್ನಡ ಕಲರವ -3’ | ನವೆಂಬರ್ 01

    October 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರ ಬಿಡುಗಡೆ 
    Exhibition

    ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರ ಬಿಡುಗಡೆ 

    November 22, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಶರಧಿ ಪ್ರತಿಷ್ಠಾನದ ವತಿಯಿಂದ ದಿನಾಂಕ 11 ಹಾಗೂ 12  ಜನವರಿ 2025 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ನಡೆಯಲಿರುವ ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರವನ್ನು ದಿನಾಂಕ 21 ನವೆಂಬರ್ 2024ರಂದು ನಗರದ ವಿಷ್ಣು ವೈಭವ ಹೊಟೇಲ್‌ನಲ್ಲಿ ವಿಧಾನ ಸಭೆಯ ಸ್ಪೀಕರ್ ಯು. ಟಿ .ಖಾದರ್ ಬಿಡುಗಡೆಗೊಳಿಸಿದರು.
    ಬಳಿಕ ಮಾತನಾಡಿದ ಅವರು “ಎಳೆಯ ಕಲಾವಿದರಿಗೆ ಸ್ಪೂರ್ತಿ ನೀಡಲು ‘ಕಲಾ ಪರ್ಬ’ ಆಯೋಜಿಸಿರುವುದು ಶ್ಲಾಘನೀಯ. ಕದ್ರಿ ಪಾರ್ಕ್‌ನ ಒಟ್ಟು ಅಭಿವೃದ್ದಿ ಹಾಗೂ ಪಾರ್ಕ್‌ನ ಒಳಗೆ ವಿವಿಧ ಕಲಾ ಚಟುವಟಿಕೆಗೆ ಅವಕಾಶ ಕಲ್ಪಿಸಲು 1 ಕೋಟಿ ರೂ. ಮೀಸಲಿಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಕಲಾಪರ್ಬ ಸಹಿತ ವಿವಿಧ ಕಲಾ ಚಟುವಡಿಕೆಗಳಿಗೆ ಪೂರಕವಾಗುವ ಕಾರ್ಯಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು.” ಎಂದು ತಿಳಿಸಿದರು.
    ಸಂಘಟಕ ಪುನೀಕ್ ಶೆಟ್ಟಿ ಮಾತನಾಡಿ “ಕಲಾವಿದರೆಲ್ಲರನ್ನೂ ಒಗ್ಗೂಡಿಸಿ ವಿವಿಧ ಕಲಾ ಪ್ರಕಾರಗಳನ್ನು ಒಂದೇ ಕಡೆ ಅಭಿವ್ಯಕ್ತ ಪಡಿಸುವ ಹಾಗೂ ತನ್ಮೂಲಕ ಕಲಾ ಕ್ಷೇತ್ರ ಇನ್ನಷ್ಟು ವಿಕಸನವಾಗುವ ಉದ್ದೇಶದಿಂದ ಕಲಾ ಪರ್ಬ ಆಯೋಜಿಸಲಾಗುತ್ತಿದೆ ಸುಮಾರು 200 ಮಳಿಗೆಗಳಲ್ಲಿ ಕಲಾಕೃತಿ, ಛಾಯಾ ಚಿತ್ರ, 30 ಮಳಿಗೆಗಳಲ್ಲಿ ಶಿಲ್ಪ ಕಲಾ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ.” ಎಂದರು.
    ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಶರಧಿ ಪ್ರತಿಷ್ಠಾನದ ಮಾರ್ಗದರ್ಶಕ ರಮೇಶ್ ನಾಯಕ್, ದ. ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಚಿತ್ರ ಕಲಾವಿದರಾದ ಕೋಟಿಪ್ರಸಾದ್ ಆಳ್ವ, ಗಣೇಶ್ ಸೋಮಯಾಜಿ, ರಾಜೇಂದ್ರ ಕೇದಿಗೆ, ಶ್ರೀಧರ ಹೊಳ್ಳ, ರಾಧಾಕೃಷ್ಣ ಭಟ್ ಮುಂತಾದವರು ಉಪಸ್ಥಿತರಿದ್ದರು. ಚಿತ್ರ ಕಲಾವಿದ ದಿನೇಶ್ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪ್ರೊ. ಶಂಕರ್ ಇವರಿಗೆ ಸಾರ್ವಜನಿಕ ಅಭಿನಂದನೆ | ಡಿಸೆಂಬರ್ 14
    Next Article ಪುಸ್ತಕ ವಿಮರ್ಶೆ | ಸಾತ್ವಿಕ ಚಿಂತನೆಗಳ ‘ಅವಕಾಶವೆಂಬ ಅಮೃತ ಘಳಿಗೆ’
    roovari

    Add Comment Cancel Reply


    Related Posts

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಪುಸ್ತಕ ಬಿಡುಗಡೆ ಮತ್ತು ಪ್ರದರ್ಶನ | ಅಕ್ಟೋಬರ್ 25

    October 22, 2025

    ಚಂದ್ರಶೇಖರ ವೈ. ಶಿಲ್ಪಿ ಇವರಿಗೆ ‘ರಾಷ್ಟ್ರೀಯ ಶಿಲ್ಪಕಲಾ ಪ್ರಶಸ್ತಿ’ | ಡಿಸೆಂಬರ್ 09

    October 20, 2025

    ದಕ್ಷಿಣ ಕನ್ನಡ ಜಿಲ್ಲೆಯ ಸಾಧಕ ಚಿತ್ರಕಲಾ ಶಿಕ್ಷಕರಿಗೆ ‘ಕಲಾ ನಿಧಿ’ ಪ್ರಶಸ್ತಿ ಪ್ರದಾನ | ಅಕ್ಟೋಬರ್ 18

    October 16, 2025

    ಬೆಂಗಳೂರು ಹೆಬ್ಬಾಳದಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವ | ಅಕ್ಟೋಬರ್ 18

    October 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.